Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:54 - ಪರಿಶುದ್ದ ಬೈಬಲ್‌

54 ಆಗ, ನೀನು ಮಾಡಿದ ಭಯಂಕರ ಕೃತ್ಯಗಳನ್ನು ನಿನ್ನ ನೆನಪಿಗೆ ತಂದುಕೊಳ್ಳುವೆ. ಆಗ ನೀನು ನಾಚಿಕೆಪಡುವೆ. ಅದೇ ಸಮಯದಲ್ಲಿ ನೀನು ನಿನ್ನ ಸಹೋದರಿಯರನ್ನು ಸಂತೈಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವಿ, ನಾಚಿಕೆಗೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಹೀಗಿರಲು, ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವೆ, ನಾಚಿಕೆಪಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವಿ, ನಾಚಿಕೆಗೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಏಕೆಂದರೆ ನೀನು ನಿನ್ನ ನಿಂದೆಯನ್ನು ಹೊತ್ತುಕೊಂಡು, ಅವರನ್ನು ಆಧರಿಸುವಾಗ ಲಜ್ಜೆಪಡುವೆ, ನಾಚಿಕೆಗೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:54
9 ತಿಳಿವುಗಳ ಹೋಲಿಕೆ  

“ಜನರ ಕೈಗೆ ಸಿಕ್ಕಿಬಿದ್ದಾಗ ಕಳ್ಳನಿಗೆ ನಾಚಿಕೆಯಾಗುತ್ತದೆ. ಅದೇ ರೀತಿಯಲ್ಲಿ ಇಸ್ರೇಲ್ ವಂಶವು ನಾಚಿಕೆಪಡುತ್ತದೆ. ರಾಜರು ಮತ್ತು ನಾಯಕರು ನಾಚಿಕೆಪಡುವರು. ಯಾಜಕರು ಮತ್ತು ಪ್ರವಾದಿಗಳು ನಾಚಿಕೆಪಡುವರು.


ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಆದ್ದರಿಂದ ನಿನ್ನ ಅವಮಾನವನ್ನು ನೀನು ಸಹಿಸಿಕೊಳ್ಳಬೇಕು. ನಿನಗಿಂತ ನಿನ್ನ ಸಹೋದರಿಯರು ನೀತಿವಂತರಂತೆ ತೋರುತ್ತಾರೆ. ಯಾಕೆಂದರೆ ನಿನ್ನ ಪಾಪಗಳು ಬಹಳ ಅಸಹ್ಯವಾಗಿದ್ದವು. ಆದ್ದರಿಂದ ನಿನಗೆ ಅವಮಾನವಾಗಲೇಬೇಕು; ನೀನು ನಾಚಿಕೆಯನ್ನು ಅನುಭವಿಸಲೇಬೇಕು ಯಾಕೆಂದರೆ ನೀನು ನಿನ್ನ ಸಹೋದರಿಯರನ್ನು ನಿರಪರಾಧಿಗಳಾಗಿ ಕಾಣುವಂತೆ ಮಾಡಿರುವೆ.”


ದೇವರು ಹೇಳಿದ್ದೇನೆಂದರೆ: “ಸೊದೋಮ್ ಮತ್ತು ಅದರ ಸುತ್ತಲೂ ಇದ್ದ ನಗರಗಳನ್ನು ನಾನು ನಾಶಮಾಡಿದೆನು. ನಾನು ಸಮಾರ್ಯವನ್ನು ನಾಶಮಾಡಿದೆನು. ಮತ್ತು ಜೆರುಸಲೇಮೇ, ನಾನು ನಿನ್ನನ್ನು ನಾಶಮಾಡುವೆ. ಆದರೆ ನಾನು ತಿರುಗಿ ಆ ಪಟ್ಟಣಗಳನ್ನು ಕಟ್ಟುವೆನು. ಜೆರುಸಲೇಮೇ, ನಾನು ನಿನ್ನನ್ನೂ ಕಟ್ಟುವೆನು.


ಆಗ ನೀನೂ ನಿನ್ನ ಸಹೋದರಿಯರೂ ತಿರುಗಿ ಕಟ್ಟಲ್ಪಡುವಿರಿ. ಸೊದೋಮಳೂ ಆಕೆಯ ಸುತ್ತಲಿರುವ ಪಟ್ಟಣಗಳೂ, ಸಮಾರ್ಯಳು ಮತ್ತು ಆಕೆಯ ಸುತ್ತಲಿರುವ ಪಟ್ಟಣಗಳೆಲ್ಲಾ ತಿರುಗಿ ಕಟ್ಟಲ್ಪಡುವವು.”


“ಏಲಾಮು ಕೂಡಾ ಅಲ್ಲಿದೆ. ಆಕೆಯ ಸೈನ್ಯವೆಲ್ಲಾ ಆಕೆಯ ಸಮಾಧಿಯ ಸುತ್ತಲಿದೆ. ಅವರೆಲ್ಲಾ ಯುದ್ಧದಲ್ಲಿ ಮಡಿದರು. ಆ ಪರದೇಶದವರು ಪಾತಾಳವನ್ನು ಸೇರಿದರು. ಅವರು ಜೀವಿಸಿದ್ದಾಗ ಜನರನ್ನು ಭಯಗೊಳಿಸಿದರು. ಆದರೆ ಈಗ ನಾಚಿಕೆಯೊಂದಿಗೆ ಅವರು ಪಾತಾಳವನ್ನು ಸೇರಿದರು.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ: “ನೀವು ಸುತ್ತಲಿರುವ ಜನಾಂಗಗಳಿಗಿಂತ ಹೆಚ್ಚು ಕೆಡುಕನ್ನು ಮಾಡಿದ್ದೀರಿ. ನೀವು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ; ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ನಿಮ್ಮ ಸುತ್ತಲಿರುವ ಜನಾಂಗಗಳ ನಿಯಮಗಳನ್ನೂ ಅನುಸರಿಸಲಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು