Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:14 - ಪರಿಶುದ್ದ ಬೈಬಲ್‌

14 ಯೆಹೂದ ರಾಜ್ಯವು ದೀನತೆಯಿಂದಿದ್ದು ದಂಗೆ ಏಳದೆ ತನ್ನ ಒಪ್ಪಂದಕ್ಕೆ ಶಾಶ್ವತವಾಗಿ ಬದ್ಧವಾಗಿರಬೇಕೆಂಬುದು ನೆಬೂಕದ್ನೆಚ್ಚರನ ಬಯಕೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವನ ರಾಜ್ಯವು ಮೇಲಕ್ಕೆ ಏಳಲಾರದೆ ಇದ್ದರೂ, ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನ ರಾಜ್ಯ ಏಳಿಗೆಗೆ ಬಾರದೆ ಗುಜ್ಜಾಗಿದ್ದು ಒಪ್ಪಂದಕ್ಕೆ ಬದ್ಧವಾಗಿರುವುದರಿಂದಲೇ ಅದು ನಿಲ್ಲದೆಂದು ಆ ದೇಶದ ಬಲಿಷ್ಠರನ್ನು ಗಡೀಪಾರುಮಾಡಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವನ ರಾಜ್ಯವು ಮೇಲಕ್ಕೆ ಏಳಲಾರದೆ ಗುಜ್ಜಾಗಿದ್ದು ಒಡಂಬಡಿಕೆಯನ್ನು ಕೈಕೊಳ್ಳುವದರಿಂದಲೇ ನಿಲ್ಲಲೆಂದು ಆ ದೇಶದ ಬಲಿಷ್ಟರನ್ನು ಗಡೀಪಾರು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆ ರಾಜ್ಯವು ಮೇಲೇಳದ ಹಾಗಿದ್ದರೂ, ಅವನು ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:14
11 ತಿಳಿವುಗಳ ಹೋಲಿಕೆ  

ಸೆರೆಹಿಡಿಯಲ್ಪಟ್ಟ ಈಜಿಪ್ಟರನ್ನು ಪತ್ರೋಸ್ ದೇಶಕ್ಕೆ ಬರಮಾಡುವೆನು. ಅವರ ಜನ್ಮಸ್ಥಳಕ್ಕೆ ಅವರನ್ನು ತಿರುಗಿ ಬರಮಾಡುವೆನು. ಆದರೆ ಅವರ ರಾಜ್ಯಕ್ಕೆ ಮಹತ್ವವಿರುವುದಿಲ್ಲ.


ಆ ಬೀಜವು ಚಿಗುರಿ, ಚಿಕ್ಕ ಜಾತಿಯ ದ್ರಾಕ್ಷಾಲತೆಯಂತೆ ನೆಲದ ಮೇಲೆ ಹಬ್ಬಿಕೊಂಡು, ತನ್ನ ಕೊಂಬೆಗಳನ್ನು ಗರುಡದ ಕಡೆಗೆ ಚಾಚಿಕೊಂಡು ತನ್ನ ಬೇರುಗಳನ್ನು ಬಿಟ್ಟಿತು: ಅಂತೆಯೇ ಅದು ಲತೆಯಾಗಿ ಕೊಂಬೆಗಳನ್ನು ಬೆಳೆಸಿ, ಎಲೆಗಳನ್ನು ಹೊರಡಿಸಿತು.


ನಮ್ಮ ಚರ್ಮವು ಒಲೆಯಂತೆ ಬಿಸಿಯಾಗಿದೆ. ಹಸಿವೆಯಿಂದಾಗಿ ಜ್ವರವು ನಮ್ಮನ್ನು ಸುಡುತ್ತಿದೆ.


ಆಗ ಯೆರೆಮೀಯನು ರಾಜನಾದ ಚಿದ್ಕೀಯನಿಗೆ ಹೀಗೆಂದನು: “ಇಸ್ರೇಲರ ದೇವರಾದ ಮತ್ತು ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಬಾಬಿಲೋನಿನ ರಾಜನ ಅಧಿಕಾರಿಗಳಿಗೆ ಶರಣಾಗತನಾದರೆ ನಿನ್ನ ಪ್ರಾಣವನ್ನು ಉಳಿಸಲಾಗುವುದು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲ್ಪಡುವುದಿಲ್ಲ. ನೀನೂ ಬದುಕುವೆ ಮತ್ತು ನಿನ್ನ ಕುಟುಂಬದವರೂ ಬದುಕುವರು.


“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.


ಯೆಹೋವನು ಜನರನ್ನು ಬಡವರನ್ನಾಗಿಸುತ್ತಾನೆ. ಆತನು ಜನರನ್ನು ಹಣವಂತರನ್ನಾಗಿಸುತ್ತಾನೆ. ಯೆಹೋವನು ಜನರನ್ನು ದೀನರನ್ನಾಗಿಸುತ್ತಾನೆ. ಆತನು ಜನರನ್ನು ದೊಡ್ಡವರನ್ನಾಗಿಸುತ್ತಾನೆ.


ನಿಮ್ಮ ಮಧ್ಯದಲ್ಲಿ ವಾಸಿಸುವ ಅನ್ಯರು ಬಲಿಷ್ಠರಾಗುವರು. ನೀವಾದರೋ ಬಲಹೀನರಾಗುವಿರಿ.


ಅದು ಯಾವ ಮಹತ್ವವೂ ಇಲ್ಲದ ರಾಜ್ಯವಾಗಿರುವುದು. ಬೇರೆ ರಾಜ್ಯಗಳಿಗಿಂತ ಅದು ಎಂದಿಗೂ ಉನ್ನತಸ್ಥಾನದಲ್ಲಿರದು. ಅದು ಅಷ್ಟು ಚಿಕ್ಕ ರಾಜ್ಯವಾಗುವುದರಿಂದ ಬೇರೆ ದೇಶಗಳ ಮೇಲೆ ಅಧಿಕಾರ ನಡೆಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು