Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:19 - ಪರಿಶುದ್ದ ಬೈಬಲ್‌

19 “‘ತಂದೆಯ ಪಾಪಗಳಿಗಿರುವ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳದಿರುವದೇಕೆ?’ ಎಂದು ನೀವು ಕೇಳಬಹುದು. ಮಗನು ನ್ಯಾಯವಾದುದ್ದನ್ನು ಮತ್ತು ಸರಿಯಾದುದ್ದನ್ನು ಮಾಡಿದ್ದಾನೆ. ಅವನು ಎಚ್ಚರಿಕೆಯಿಂದ ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾಗಿದ್ದನು. ಆದ್ದರಿಂದ ಅವನು ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಆದರೆ ನೀವು, - ‘ತಂದೆಯ ದೋಷಫಲವನ್ನು ಮಗನು ಹೇಗೆ ಅನುಭವಿಸುವುದಿಲ್ಲ?’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ ನನ್ನ ವಿಧಿಗಳನ್ನೆಲ್ಲಾ ಕೈಗೊಂಡು ಆಚರಿಸಿದರೆ ಖಂಡಿತ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ನೀವು - ತಂದೆಯ ದೋಷಫಲವನ್ನು ಮಗನು ಹೇಗೆ ಅನುಭವಿಸುವದಿಲ್ಲ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡಿಸಿ ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಬಾಳೇ ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಆದರೂ ಇನ್ನೂ ನೀವು ಹೇಳುವುದೇನು? ‘ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲವೇ?’ ಎಂದು ಹೇಳುವಿರಿ. ಮಗನು ನ್ಯಾಯವನ್ನೂ, ನೀತಿಯನ್ನೂ ಮಾಡಿ, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:19
14 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಯೆಹೂದದ ಜನರನ್ನು ಭೂಲೋಕದ ಎಲ್ಲಾ ಜನರಿಗೆ ಒಂದು ಭಯಾನಕವಾದ ಉದಾಹರಣೆಯಾಗುವಂತೆ ಮಾಡುತ್ತೇನೆ. ಮನಸ್ಸೆಯು ಜೆರುಸಲೇಮಿನಲ್ಲಿ ಮಾಡಿದ ಪಾಪಕೃತ್ಯಗಳ ಫಲವಾಗಿ ನಾನು ಯೆಹೂದದಲ್ಲಿ ಹೀಗೆ ಮಾಡುತ್ತೇನೆ. ಮನಸ್ಸೆಯು ರಾಜನಾದ ಹಿಜ್ಕೀಯನ ಮಗನಾಗಿದ್ದನು. ಮನಸ್ಸೆಯು ಯೆಹೂದದ ರಾಜನಾಗಿದ್ದನು.’


ಅವನು ನನ್ನ ನಿಯಮಗಳಿಗನುಸಾರವಾಗಿ ಜೀವಿಸುವನು ಮತ್ತು ನನ್ನ ಕಟ್ಟಳೆಗಳಿಗೆ ನಂಬಿಗಸ್ತಿಕೆಯಿಂದ ವಿಧೇಯನಾಗುವನು. ಅಂಥಾ ಮನುಷ್ಯನು ನೀತಿವಂತನಾಗಿದ್ದಾನೆ ಮತ್ತು ಅವನು ಖಂಡಿತವಾಗಿಯೂ ಬದುಕುವನು.


“ಇಸ್ರೇಲ್ ದೇಶದ ಕುರಿತಾದ ಈ ಗಾದೆಯನ್ನು ನೀವೆಲ್ಲರೂ ಮರುನುಡಿಯುವುದೇಕೆ? ‘ಹೆತ್ತವರು ಹುಳಿ ದ್ರಾಕ್ಷಿಹಣ್ಣನ್ನು ತಿಂದಾಗ ಮಕ್ಕಳ ಬಾಯಿ ಹುಳಿಯಾಗುವುದು.’”


ನಾನೇ ನಿಮ್ಮ ದೇವರಾದ ಯೆಹೋವನು. ಆದ್ದರಿಂದ ನೀವು ಯಾವ ವಿಗ್ರಹವನ್ನೂ ಪೂಜಿಸಬಾರದು ಮತ್ತು ಅದರ ಸೇವೆ ಮಾಡಬಾರದು. ನನ್ನ ಜನರು ಇತರ ದೇವರುಗಳನ್ನು ಆರಾಧಿಸುವುದನ್ನು ನಾನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪ ಮಾಡಿದವರನ್ನು ನಾನು ಶಿಕ್ಷಿಸುತ್ತೇನೆ. ಅವರ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳು ನನ್ನ ದಂಡನೆಗೆ ಗುರಿಯಾಗುವರು.


ದೇವರು ಹೇಳಿದ್ದೇನೆಂದರೆ, “ಇಸ್ರೇಲ್ ಜನರು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ನೀನು ಹೋಗಿ ಅವರಿಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಪೂರ್ವಿಕರು ಮಾಡಿದಂತೆಯೇ ನೀವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುತ್ತಿದ್ದೀರಿ. ನೀವು ಸೂಳೆಯರ ಹಾಗೆ ವರ್ತಿಸಿರುತ್ತೀರಿ. ನಿಮ್ಮ ಪೂರ್ವಿಕರು ಪೂಜಿಸಿದ ಆ ಭಯಂಕರವಾದ ವಿಗ್ರಹಗಳೊಂದಿಗೆ ಇರುವದಕ್ಕಾಗಿ ನನ್ನನ್ನು ನೀವು ತೊರೆದುಬಿಟ್ಟಿರಿ.


“‘ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ಅಲಕ್ಷ್ಯಮಾಡಿದರು. ಮತ್ತು ಅವರ ಪೂರ್ವಿಕರ ಹೊಲಸು ವಿಗ್ರಹಗಳನ್ನು ಪೂಜಿಸಿದರು.


ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಪಾಪ ಮಾಡಿದರು. ಈಗ ಅವರು ಸತ್ತುಹೋಗಿದ್ದಾರೆ. ಆದರೆ ಅವರ ಪಾಪಗಳ ನಿಮಿತ್ತ ನಾವು ಈಗ ಸಂಕಟಪಡುತ್ತಿದ್ದೇವೆ.


ಆದರೆ ಯೆಹೋವನು ಯೆಹೂದದ ಜನರ ಮೇಲೆ ಕೋಪಗೊಳ್ಳುವುದನ್ನು ನಿಲ್ಲಿಸಲೇ ಇಲ್ಲ. ಮನಸ್ಸೆಯು ಮಾಡಿದ ಕಾರ್ಯಗಳೆಲ್ಲವುಗಳಿಂದ ಯೆಹೋವನು ಅವರ ಮೇಲೆ ಇನ್ನೂ ಕೋಪಗೊಂಡಿದ್ದನು.


ತಂದೆಯು ಜನರನ್ನು ಹೆದರಿಸಿಯಾಗಲಿ ದರೋಡೆ ಮಾಡಿಯಾಗಲಿ ವಸ್ತುಗಳನ್ನು ತೆಗೆದುಕೊಂಡಿರಬಹುದು. ತನ್ನ ಜನರ ಮಧ್ಯದಲ್ಲಿ ಕೆಟ್ಟದಾಗಿರುವುದನ್ನು ಅವನು ಮಾಡಿರಬಹುದು. ಆ ತಂದೆಯು ತನ್ನ ಪಾಪಗಳ ಸಲುವಾಗಿ ಸಾಯುವನು. ಆದರೆ ತಂದೆಯ ಪಾಪಗಳಿಗಾಗಿ ಮಗನು ಶಿಕ್ಷಿಸಲ್ಪಡುವುದಿಲ್ಲ.


“ಆದ್ದರಿಂದ ನರಪುತ್ರನೇ, ನನ್ನ ಪರವಾಗಿ ಇಸ್ರೇಲ್ ಜನರೊಂದಿಗೆ ಮಾತನಾಡು. ‘ನಾವು ಪಾಪಮಾಡಿದ್ದೇವೆ. ಕಟ್ಟಳೆಗಳನ್ನು ಮೀರಿದ್ದೇವೆ. ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ. ನಾವು ಆ ಪಾಪಗಳಿಂದಾಗಿ ಕ್ಷೀಣಿಸುತ್ತಿದ್ದೇವೆ. ನಾವು ಜೀವಿಸಬೇಕಾದರೆ ಏನು ಮಾಡಬೇಕು?’ ಎಂದು ಅವರು ಕೇಳಿಯಾರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು