Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:20 - ಪರಿಶುದ್ದ ಬೈಬಲ್‌

20 ಯಾರು ಪಾಪ ಮಾಡುತ್ತಾರೋ ಅವರೇ ಮರಣಶಿಕ್ಷೆ ಹೊಂದುವರು. ತಂದೆಯ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳುವುದಿಲ್ಲ. ಮತ್ತು ಮಗನ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ತಂದೆಯು ಹೊತ್ತುಕೊಳ್ಳುವದಿಲ್ಲ. ಒಬ್ಬ ಒಳ್ಳೆ ಮನುಷ್ಯನ ನೀತಿಯು ಅವನಿಗೇ ಸೇರಿದ್ದು. ಕೆಟ್ಟ ಮನುಷ್ಯನ ದುಷ್ಟತ್ವವೂ ಆ ಕೆಟ್ಟ ಮನುಷ್ಯನಿಗೆ ಸೇರಿದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಪಾಪಮಾಡುವವನೇ ಸಾಯುವನು. ಮಗನು ತಂದೆಯ ದೋಷಫಲವನ್ನು ಅನುಭವಿಸನು; ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪಾಪಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು, ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಪಾಪ ಮಾಡುವವನೇ ಸಾಯುವನು. ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲ; ನೀತಿವಂತನ ನೀತಿಯು ಅವನ ಮೇಲೆಯೇ ಇರುವುದು; ದುಷ್ಟನ ದುಷ್ಟತನವು ಅವನ ಮೇಲೆಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:20
34 ತಿಳಿವುಗಳ ಹೋಲಿಕೆ  

ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿನ ನಿಯಮಗಳಿಗನುಸಾರವಾಗಿ ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಯೆಹೋವನು, “ಮಕ್ಕಳು ಮಾಡಿದ ತಪ್ಪಿಗೆ ತಂದೆತಾಯಿಗಳನ್ನು ಸಾವಿಗೆ ಗುರಿಪಡಿಸಬಾರದು. ತಂದೆತಾಯಿಗಳು ಮಾಡಿದ ತಪ್ಪಿಗೆ ಅವರ ಮಕ್ಕಳನ್ನು ಸಾವಿಗೆ ಗುರಿಪಡಿಸಬಾರದು. ಒಬ್ಬ ವ್ಯಕ್ತಿಯನ್ನು ಅವನು ಮಾಡಿದ ಕೆಟ್ಟಕಾರ್ಯಕ್ಕಾಗಿ ಮಾತ್ರ ಸಾವಿಗೆ ಗುರಿಪಡಿಸಬೇಕು” ಎಂದು ಆಜ್ಞಾಪಿಸಿದ್ದಾನೆ.


“ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣ ಶಿಕ್ಷೆಯಾಗಬೇಕು.


ಎಲ್ಲಾ ಪ್ರಾಣಗಳು ನನ್ನವೇ. ತಂದೆಯ ಪ್ರಾಣವೂ ಮಗನ ಪ್ರಾಣವೂ ನನ್ನವೇ. ಪಾಪಮಾಡುವವನು ಮಾತ್ರ ಸಾಯುವನು.


ಆದರೆ ಆ ಸೇವಕರ ಮಕ್ಕಳನ್ನು ಕೊಲ್ಲಿಸಲಿಲ್ಲ. ಯಾಕೆಂದರೆ ಮೋಶೆಯ ಧರ್ಮಶಾಸ್ತ್ರದ ಪ್ರಕಾರ, ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು; ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಅವರ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣಶಿಕ್ಷೆಯಾಗಬೇಕು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


ಪರಲೋಕದಲ್ಲಿರುವ ನೀನು ಅದನ್ನು ಕೇಳಿ, ಆ ವ್ಯಕ್ತಿಗೆ ತೀರ್ಪುನೀಡು. ಆ ವ್ಯಕ್ತಿಯು ತಪ್ಪಿತಸ್ಥನಾಗಿದ್ದರೆ, ಅವನು ತಪ್ಪಿತಸ್ಥನೆಂಬುದನ್ನು ನಮಗೆ ತೋರಿಸು. ಅವನು ನಿರಪರಾಧಿಯಾಗಿದ್ದರೆ ಅವನು ತಪ್ಪಿತಸ್ಥನಲ್ಲವೆಂಬುದನ್ನೂ ದಯವಿಟ್ಟು ನಮಗೆ ತೋರಿಸು.


ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.


ಅದನ್ನು ನೀನು ಪರಲೋಕದಿಂದ ಆಲೈಸಿ ನಿನ್ನ ಸೇವಕರ ನ್ಯಾಯತೀರಿಸು. ಕೇಡುಮಾಡಿದವನನ್ನು ಶಿಕ್ಷಿಸು; ಅವನು ಇನ್ನೊಬ್ಬನಿಗೆ ಮಾಡಿದ ದುಷ್ಕೃತ್ಯವು ಅವನಿಗೇ ತಟ್ಟುವಂತೆ ಮಾಡು. ಯಾವನು ನಿರಪರಾಧಿಯೆಂಬುದನ್ನು ತೋರಿಸಿಕೊಟ್ಟು ಅವನ ನೀತಿಗೆ ತಕ್ಕಂತೆ ಪ್ರತಿಫಲ ಕೊಡು.


ಆಗ ಯೆಹೋವನು ಆರೋನನಿಗೆ, “ಪವಿತ್ರ ವಸ್ತುಗಳ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನೂ ನಿನ್ನ ಗಂಡುಮಕ್ಕಳೂ ನಿನ್ನ ಕುಲದವರೆಲ್ಲರೂ ಅದರ ಅಪರಾಧದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನು ಮತ್ತು ನಿನ್ನ ಗಂಡುಮಕ್ಕಳು ಮಾತ್ರ ಅದರ ಅಪರಾಧದ ಫಲವನ್ನು ಅನುಭವಿಸಬೇಕು.


ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


“ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದಾದರೊಂದನ್ನು ಮಾಡಿ ದೋಷಕ್ಕೆ ಗುರಿಯಾಗಿದ್ದರೆ, ಅದು ಅವನಿಗೆ ತಿಳಿದಿಲ್ಲದಿದ್ದರೂ ಅವನು ಆ ಪಾಪಫಲವನ್ನು ಅನುಭವಿಸಬೇಕು.


“ಆದ್ದರಿಂದ ನರಪುತ್ರನೇ, ನನ್ನ ಪರವಾಗಿ ಇಸ್ರೇಲ್ ಜನರೊಂದಿಗೆ ಮಾತನಾಡು. ‘ನಾವು ಪಾಪಮಾಡಿದ್ದೇವೆ. ಕಟ್ಟಳೆಗಳನ್ನು ಮೀರಿದ್ದೇವೆ. ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ. ನಾವು ಆ ಪಾಪಗಳಿಂದಾಗಿ ಕ್ಷೀಣಿಸುತ್ತಿದ್ದೇವೆ. ನಾವು ಜೀವಿಸಬೇಕಾದರೆ ಏನು ಮಾಡಬೇಕು?’ ಎಂದು ಅವರು ಕೇಳಿಯಾರು.


ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.


“ನ್ಯಾಯಾಧಿಕಾರಿಯು ತಿಳಿಸಬೇಕೆಂದು ಕೇಳಿದರೂ ಒಬ್ಬನು ತಾನು ಕಂಡದ್ದನ್ನಾಗಲಿ ಕೇಳಿದ್ದನ್ನಾಗಲಿ ತಿಳಿಸದೆ ಹೋದರೆ ಅವನು ಪಾಪಕ್ಕೆ ಗುರಿಯಾಗಿದ್ದಾನೆ.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.


ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಬಡ್ಡಿಯನ್ನು ಕಡ್ಡಾಯವಾಗಿ ವಸೂಲು ಮಾಡಿದ್ದಿರಬಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಬದುಕುವುದಿಲ್ಲ. ಅವನು ಭಯಂಕರ ಕೃತ್ಯಗಳನ್ನು ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಬ್ದಾರನು.


ಒಬ್ಬನು ಅದನ್ನು ಮೂರನೆಯ ದಿನದಲ್ಲಿ ತಿಂದರೆ ಅವನು ಪಾಪಮಾಡಿದ ದೋಷಿಯಾಗಿರುವನು. ಯಾಕೆಂದರೆ ಯೆಹೋವನಿಗೆ ಮೀಸಲಾದ ಪವಿತ್ರ ವಸ್ತುಗಳ ವಿಷಯದಲ್ಲಿ ಅವನಿಗೆ ಗೌರವವಿಲ್ಲ; ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು.


ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕಾರ್ಯಗಳ ಪ್ರಕಾರ ನ್ಯಾಯತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆದ್ದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವದನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ.


ನೀನು ಪರಲೋಕದಿಂದ ಅವರ ಮೊರೆಯನ್ನು ಆಲೈಸಿ ಅವರ ಪ್ರಾರ್ಥನೆಗೆ ಉತ್ತರವನ್ನು ದಯಪಾಲಿಸು; ಪ್ರತಿಯೊಬ್ಬನಿಗೂ ತಕ್ಕ ಪ್ರತಿಫಲವನ್ನು ಕೊಡು. ಯಾಕೆಂದರೆ ಪ್ರತಿಯೊಬ್ಬನ ಹೃದಯವನ್ನು ನೀನೊಬ್ಬನೇ ತಿಳಿದಿರುವೆ.


ಇಸ್ರೇಲರೆಲ್ಲರು ಅವನಿಗಾಗಿ ಗೋಳಾಡಿ ಸಮಾಧಿಮಾಡುತ್ತಾರೆ. ಯಾರೊಬ್ಬಾಮನ ಕುಟುಂಬದಲ್ಲಿ ನಿನ್ನ ಮಗನನೊಬ್ಬನನ್ನು ಮಾತ್ರ ಸಮಾಧಿ ಮಾಡುತ್ತಾರೆ. ಏಕೆಂದರೆ ಯಾರೊಬ್ಬಾಮನ ಕುಟುಂಬದಲ್ಲಿ ಇವನೊಬ್ಬನು ಮಾತ್ರ ಇಸ್ರೇಲಿನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.


ಹೀಗೆ ಹೋತವು ಜನರ ಪಾಪಗಳನ್ನು ಹೊತ್ತುಕೊಂಡು ಬರಿದಾದ ಮರುಭೂಮಿಗೆ ಹೋಗುವುದು. ಹೋತವನ್ನು ನಡಿಸಿಕೊಂಡು ಹೋಗುವ ಮನುಷ್ಯನು ಮರುಭೂಮಿಯಲ್ಲಿ ಅದನ್ನು ಬಿಟ್ಟುಬಿಡುವನು.


ಮೋಶೆ, “ನೀವು ಹೋತದ ಮಾಂಸವನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿತ್ತು. ಅದು ಬಹಳ ಪವಿತ್ರವಾದದ್ದಲ್ಲವೇ? ನೀವು ಯಾಕೆ ಅದನ್ನು ಯೆಹೋವನ ಸನ್ನಿಧಿಯಲ್ಲಿ ತಿನ್ನಲಿಲ್ಲ? ನೀವು ಜನರ ಪಾಪಪರಿಹಾರ ಮಾಡುವಂತೆಯೂ ಜನರ ದೋಷವನ್ನು ಪರಿಹಾರಮಾಡುವಂತೆಯೂ ಯೆಹೋವನು ಅದನ್ನು ನಿಮಗೆ ಕೊಟ್ಟನು.


“ಆಮೇಲೆ ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿಕೊಂಡು ಇಸ್ರೇಲ್ ಜನರ ದೋಷವನ್ನು ನಿನ್ನ ಎಡಮಗ್ಗುಲ ಮೇಲೆ ಹಾಕು. ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿರುವಷ್ಟು ದಿನ ಇಸ್ರೇಲರ ದೋಷಗಳನ್ನು ಹೊತ್ತುಕೊಳ್ಳುವೆ.


ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದ್ದರಿಂದ ಕುಲದಿಂದ ತೆಗೆದುಹಾಕಲ್ಪಡಲೇಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.”


ಆ ದೇಶದಲ್ಲಿ ನೋಹ, ದಾನಿಯೇಲ, ಯೋಬ ಜೀವಿಸಿದ್ದರೂ ಆ ಮೂವರು ತಮ್ಮ ಸತ್ಕಾರ್ಯಗಳಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ಇಡೀ ದೇಶವನ್ನು ರಕ್ಷಿಸಲಾಗುತ್ತಿರಲಿಲ್ಲ.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.


ನನ್ನ ಜೀವದಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು. ಆದರೆ ದೇಶವು ನಿರ್ಜನವಾಗುತ್ತಿತ್ತು.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.


“‘ಆದರೆ ವೈರಿಯು ಬರುವಂತದ್ದನ್ನು ಆ ಕಾವಲುಗಾರನು ಕಂಡರೂ, ಜನರನ್ನು ಎಚ್ಚರಿಸಲು ತುತ್ತೂರಿಯನ್ನು ಊದದಿದ್ದರೆ ವೈರಿಯು ಅವರನ್ನು ಸೆರೆಹಿಡಿದು ಕೈದಿಗಳನ್ನಾಗಿ ಮಾಡಿ ಕೊಂಡೊಯ್ಯುವನು. ಆ ಮನುಷ್ಯನು ಪಾಪಮಾಡಿದ್ದರಿಂದ ಆ ಶಿಕ್ಷೆಯು ಅವನಿಗೆ ದೊರಕಿತು. ಆದರೆ, ಕಾವಲುಗಾರನು ಕೂಡಾ ಅವನ ಮರಣಕ್ಕೆ ಕಾರಣನಾಗುವನು.’


ಆದರೆ ಯೆಹೋವನು ಮೋಶೆಗೆ, “ನನಗೆ ವಿರೋಧವಾಗಿ ಪಾಪಮಾಡುವ ಜನರ ಹೆಸರನ್ನು ಮಾತ್ರವೇ ನನ್ನ ಪುಸ್ತಕದಿಂದ ಅಳಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು