Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:8 - ಪರಿಶುದ್ದ ಬೈಬಲ್‌

8 ಅವನು ಸಾಲ ಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ಕೆಡುಕುಗಳನ್ನು ಮಾಡುವುದಿಲ್ಲ. ಅವನು ತನ್ನ ವ್ಯವಹಾರಗಳಲ್ಲಿ ಪ್ರತಿಯೊಬ್ಬನೊಂದಿಗೂ ಯಥಾರ್ಥವಾಗಿಯೂ ನ್ಯಾಯವಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಾಲಕ್ಕೆ ಬಡ್ಡಿ ತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಾಲಕ್ಕೆ ಬಡ್ಡಿ ತೆಗೆಯದೆ ಲಾಭಕ್ಕೆ ಹಣಕೊಡದೆ ಅನ್ಯಾಯಕ್ಕೆ ಕೈಹಾಕದೆ ವಾದಿಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:8
26 ತಿಳಿವುಗಳ ಹೋಲಿಕೆ  

“ನನ್ನ ಜನರಲ್ಲಿ ಬಡವನಾಗಿರುವವನಿಗೆ ನೀವು ಹಣವನ್ನು ಸಾಲಕೊಟ್ಟರೆ, ನೀವು ಆ ಹಣಕ್ಕೆ ಬಡ್ಡಿ ಕೇಳಬಾರದು. ಬೇಗನೆ ಮರುಪಾವತಿ ಮಾಡುವಂತೆ ಅವನನ್ನು ಬಲವಂತಪಡಿಸಬಾರದು.


ಆದರೆ ನೀವು ಮಾಡಬೇಕಾದದ್ದೇನೆಂದರೆ, ನಿಮ್ಮ ನೆರೆಯವರ ಸಂಗಡ ಸತ್ಯವನ್ನೇ ಆಡಿರಿ. ನಿಮ್ಮ ನಗರಗಳಲ್ಲಿ ಯಾವುದೇ ತೀರ್ಮಾನಗಳನ್ನು ಮಾಡುವುದಾಗಿದ್ದರೂ ಅವು ನ್ಯಾಯವಾದವುಗಳಾಗಿಯೂ ಸತ್ಯವಾದವುಗಳಾಗಿಯೂ ಸಮಾಧಾನವನ್ನು ತರುವಂಥವುಗಳಾಗಿಯೂ ಇರಲಿ.


ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನ್ನೆ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತುಬಿಟ್ಟಿರುವಿರಿ.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.


ಅವನು ಬಡವರಿಗೆ ನೋವು ಮಾಡುವುದಿಲ್ಲ. ಅವನು ಹಣವನ್ನು ಸಾಲಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ನನ್ನ ಕಟ್ಟಳೆಗಳಿಗೆ ವಿಧೇಯನಾಗುವನು. ಮತ್ತು ನನ್ನ ನಿಯಮಗಳನ್ನು ಅನುಸರಿಸುವನು. ಈ ಒಳ್ಳೆಯ ಮಗನು ತಂದೆಯ ದುಷ್ಟತನದ ಕಾರಣಕ್ಕಾಗಿ ಮರಣಶಿಕ್ಷೆಯನ್ನು ಅನುಭವಿಸುವದಿಲ್ಲ. ಆ ಒಳ್ಳೆಯ ಮಗನು ಬಾಳುವನು.


ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಬಡ್ಡಿಯನ್ನು ಕಡ್ಡಾಯವಾಗಿ ವಸೂಲು ಮಾಡಿದ್ದಿರಬಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಬದುಕುವುದಿಲ್ಲ. ಅವನು ಭಯಂಕರ ಕೃತ್ಯಗಳನ್ನು ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಬ್ದಾರನು.


ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.


ನನ್ನ ತಾಯೀ, ನೀನು ಜನ್ಮಕೊಟ್ಟಿದ್ದಕ್ಕಾಗಿ ನನಗೆ ದುಃಖವಾಗುತ್ತದೆ. ಯೆರೆಮೀಯನಾದ ನಾನು ಇಡೀ ದೇಶದ ಜನರ ವಿರುದ್ಧವಾಗಿ ವಾದಿಸುತ್ತಾ ನಿಂದಿಸುತ್ತಾ ಇರುವೆ. ನಾನು ಯಾರಿಗೂ ಸಾಲವನ್ನು ಕೊಟ್ಟಿಲ್ಲ; ಸಾಲವನ್ನು ತೆಗೆದುಕೊಂಡಿಲ್ಲ. ಆದರೆ ಪ್ರತಿಯೊಬ್ಬರು ನನ್ನನ್ನು ಶಪಿಸುತ್ತಾರೆ.


ಪ್ರಾಮಾಣಿಕರಾಗಿರುವ ನೀತಿವಂತರು ಹಣಕ್ಕಾಗಿ ಇತರರಿಗೆ ಹಾನಿಮಾಡದವರಾಗಿದ್ದಾರೆ. ಅವರು ಆ ಬೆಂಕಿಯಲ್ಲಿ ವಾಸಿಸುವರು. ಅವರು ಲಂಚ ತೆಗೆದುಕೊಳ್ಳಲು ನಿರಾಕರಿಸುವರು. ಇತರರನ್ನು ಕೊಲೆಮಾಡುವ ಯೋಜನೆಯನ್ನು ಕೇಳಲು ಅವರು ಇಷ್ಟಪಡುವುದಿಲ್ಲ. ಅವರು ಕೆಟ್ಟಕಾರ್ಯಗಳ ಯೋಜನೆಗಳನ್ನು ನೋಡುವುದಿಲ್ಲ.


ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.”


ಬಡವರಿಗೆ ಮೋಸಮಾಡಿ ಗಳಿಸಿದ ಐಶ್ವರ್ಯ ಕಳೆದುಹೋಗುವುದು; ಬಡವರಿಗೆ ದಯೆ ತೋರುವವನಿಗೆ ಅದು ದೊರೆಯುವುದು.


ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.


ನಾನು ದೋಷಿಯಲ್ಲವೆಂಬುದು ಆತನಿಗೆ ತಿಳಿದಿದೆ. ನಾನು ಪಾಪದಲ್ಲಿ ಬೀಳದಂತೆ ಎಚ್ಚರಿಕೆ ವಹಿಸಿದೆನು.


“ನೀವು ಜನರಿಗೆ ತೀರ್ಪುಮಾಡುವಾಗ ನ್ಯಾಯವಾಗಿ ತೀರ್ಪುಮಾಡಬೇಕು. ನೀವು ಅಳೆಯುವಾಗ ಮತ್ತು ತೂಕಮಾಡುವಾಗ ನ್ಯಾಯವಾಗಿ ನಡೆದುಕೊಳ್ಳಬೇಕು.


“ನೀವು ಕೊಡುವ ತೀರ್ಪು ನ್ಯಾಯವಾಗಿರಬೇಕು. ಬಡವರ ಬಡತನವನ್ನಾಗಲಿ ಪ್ರಾಮುಖ್ಯರ ದೊಡ್ಡಸ್ತಿಕೆಯನ್ನಾಗಲಿ ಗಮನಿಸದೆ ಪಕ್ಷಪಾತವಿಲ್ಲದೆ ತೀರ್ಪುಕೊಡಬೇಕು. ನೀವು ನಿಮ್ಮ ನೆರೆಯವನಿಗೆ ತೀರ್ಪುಮಾಡುವಾಗ ನ್ಯಾಯದ ತೀರ್ಪುಕೊಡಿರಿ.


ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ. ನನ್ನ ಆಜ್ಞೆಗೆ ನೀವು ಅವಿಧೇಯರಾದಿರಿ. ನನ್ನ ಕಟ್ಟಳೆಗಳಿಗೆ ನೀವು ವಿಧೇಯರಾಗಲಿಲ್ಲ. ನಿಮ್ಮ ಸುತ್ತಲೂ ಇರುವ ಜನಾಂಗಗಳಂತೆ ಇರಲು ನೀವು ನಿರ್ಧರಿಸಿರುತ್ತೀರಿ.”


“ನೀವು ನಿಮ್ಮ ದೇವರಾದ ಯೆಹೋವನಿಗೆ ಹರಕೆ ಹೊತ್ತರೆ ಅದನ್ನು ಸಲ್ಲಿಸಲು ನಿಧಾನ ಮಾಡಬೇಡಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮಿಂದ ಕೇಳುವವನಾಗಿದ್ದಾನೆ. ಹರಕೆಹೊತ್ತು ಸಲ್ಲಿಸದಿದ್ದರೆ ನೀವು ಪಾಪಮಾಡುವವರಾಗಿದ್ದೀರಿ.


ಆತನು ಹೇಳುವುದೇನೆಂದರೆ, “ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳಿನಲ್ಲಿ ನೀವು ದುಃಖದಿಂದ ಉಪವಾಸ ಮಾಡುವ ವಿಶೇಷ ದಿವಸಗಳಿವೆ. ಆ ದುಃಖದ ದಿವಸಗಳು ನಿಮ್ಮ ಸಂತಸದ ದಿವಸಗಳಾಗಿ ಪರಿಗಣಿಸಬೇಕು. ನೀವು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸುವವರಾಗಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು