Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:7 - ಪರಿಶುದ್ದ ಬೈಬಲ್‌

7 ಅದು ಸ್ತ್ರೀಯರನ್ನು ವಿಧವೆಯರನ್ನಾಗಿ ಮಾಡಿತು; ಪಟ್ಟಣಗಳನ್ನು ನಿರ್ಜನವನ್ನಾಗಿ ಮಾಡಿತು; ಅದು ಗರ್ಜಿಸಿದಾಗ ದೇಶವೂ ಅದರಲ್ಲಿರುವ ಪ್ರತಿಯೊಂದೂ ಭಯಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದು ಪಟ್ಟಣಗಳನ್ನು ಹಾಳುಮಾಡಿ, ಬಹಳ ಮಂದಿ ವಿಧವೆಯರಾದವರನ್ನು ಕೆಡಿಸಿತು, ಅದರ ಗರ್ಜನೆಯ ಶಬ್ದಕ್ಕೆ ದೇಶವು ಮತ್ತು ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೆಲಸಮ ಮಾಡಿತು ಪಟ್ಟಣಗಳನೆ ನಾಶಮಾಡಿತು ಕೋಟೆಕೊತ್ತಲುಗಳನೆ ನಾಡಿಗೆ ನಾಡೇ ನಡುಗಿತು ಅದರ ಗರ್ಜನೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದು ಪಟ್ಟಣಗಳನ್ನು ಹಾಳುಮಾಡಿ [ಬಹುಮಂದಿ] ವಿಧವೆಯರಾದವರನ್ನು ಕಂಡಿತು, ಅದರ ಗರ್ಜನೆಯ ಶಬ್ದಕ್ಕೆ ದೇಶವೂ ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರ ಅರಮನೆಗಳನ್ನು ಹಾಳುಮಾಡಿತು, ಅವರ ನಗರಗಳನ್ನೂ ನಾಶಮಾಡಿತು, ಅದರ ಘರ್ಜನೆಯ ಶಬ್ದದಿಂದಾಗಿ ದೇಶವೂ, ಅದರಲ್ಲಿದ್ದ ಎಲ್ಲರೂ ದಂಗಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:7
14 ತಿಳಿವುಗಳ ಹೋಲಿಕೆ  

ನೈಲ್ ನದಿಯನ್ನು ನಾನು ಒಣನೆಲವನ್ನಾಗಿ ಮಾಡುವೆನು. ಆ ಒಣನೆಲವನ್ನು ನಾನು ಕೆಟ್ಟ ಜನರಿಗೆ ಮಾರುವೆನು. ಆ ದೇಶವನ್ನು ಬಂಜರು ಭೂಮಿಯನ್ನಾಗಿ ಮಾಡಲು ನಾನು ಪರದೇಶಸ್ಥರನ್ನು ಉಪಯೋಗಿಸುವೆನು. ನನ್ನ ಒಡೆಯನಾದ ಯೆಹೋವನು ಮಾತನಾಡಿದ್ದಾನೆ.”


ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು.


ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು: “ಯಾಕೋಬನು ಹೆಚ್ಚಳಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು.”


ಜೆರುಸಲೇಮಿನ ಪ್ರವಾದಿಗಳು ತಾನು ಬೇಟೆಯಾಡಿ ಕೊಂದ ಪ್ರಾಣಿಯನ್ನು ತಿನ್ನುವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಗಳನ್ನು ತೆಗೆದುಕೊಂಡಿದ್ದಾರೆ. ಅವರಿಂದ ಬೆಲೆಬಾಳುವ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.


ಇದನ್ನು ನೀನು ಸಾಮಾನ್ಯ ಜನರಿಗೆ ತಿಳಿಸಬೇಕು. ನೀನು ಹೀಗೆ ಹೇಳಬೇಕು, ‘ಇನ್ನೂ ಇಸ್ರೇಲ್ ದೇಶದಲ್ಲಿರುವ ಜೆರುಸಲೇಮಿನ ನಿವಾಸಿಗಳ ಬಗ್ಗೆ ನಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಅವರು ಊಟಮಾಡುವಾಗ ಉದ್ವೇಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ, ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ.


ಬಡಜನರನ್ನು ದರೋಡೆಮಾಡುವ ಬಡವನು ಬೆಳೆಯನ್ನು ನಾಶಮಾಡುವ ಬಿರುಸಾದ ಮಳೆಯಂತಿರುವನು.


ರಾಜನ ಕೋಪವು ಸಿಂಹ ಘರ್ಜನೆಯಂತಿರುತ್ತದೆ. ರಾಜನಿಗೆ ನಿನ್ನ ಮೇಲಿರುವ ಸಂತೋಷವು ತುಂತುರು ಮಳೆಯಂತಿರುತ್ತದೆ.


ಅದು ಬೆಳೆದು ಪ್ರಾಯದ ಸಿಂಹವಾಗಿ ಸಿಂಹಗಳೊಂದಿಗೆ ಬೇಟೆಯಾಡಲು ಹೋಯಿತು; ತನ್ನ ಆಹಾರವನ್ನು ತಾನೇ ಬೇಟೆಯಾಡತೊಡಗಿ ಮನುಷ್ಯರನ್ನು ಕೊಂದು ತಿನ್ನಲಾರಂಭಿಸಿತು.


ಸುತ್ತಮುತ್ತಲಿನ ಜನಾಂಗಗಳವರು ಕೂಡಿಬಂದು ಅದರ ವಿರುದ್ಧವಾಗಿ ನಿಂತು, ಬಲೆಹರಡಿ ಅದನ್ನು ಬಂಧಿಸಿದರು.


ಭೂಪ್ರದೇಶದ ಈ ಭಾಗವು ಅಧಿಪತಿಗೆ ಸೇರಿದೆ. ಹೀಗೆ, ಹಿಂದಿನ ಕಾಲದ ಅಧಿಪತಿಗಳು ಮಾಡಿದಂತೆ ಈ ಅಧಿಪತಿಯು ಜನರನ್ನು ಹಿಂಸಿಸಿ ಅವರ ಭೂಮಿಯನ್ನು ಕಸಿದುಕೊಳ್ಳುವುದಿಲ್ಲ. ಉಳಿದ ಭೂಭಾಗವು ಇಸ್ರೇಲಿನ ಇತರ ಕುಲಗಳವರಿಗೆ ಯಾವಾಗಲೂ ಸೇರಿರುತ್ತದೆ.”


ಫರೋಹ ನೆಕೋವನು ಹಮಾತ್ ದೇಶದ ರಿಬ್ಲಾ ಎಂಬಲ್ಲಿ ಯೆಹೋವಾಹಾಜನನ್ನು ಸೆರೆಹಿಡಿದನು. ಆದ್ದರಿಂದ ಯೆಹೋವಾಹಾಜನು ಜೆರುಸಲೇಮಿನಲ್ಲಿ ಆಳಲಿಲ್ಲ. ಫರೋಹ ನೆಕೋವನು ಮೂರುಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿಯನ್ನು ಮತ್ತು ಮೂವತ್ನಾಲ್ಕು ಕಿಲೋಗ್ರಾಂ ಚಿನ್ನವನ್ನು ಕೊಡುವಂತೆ ಯೆಹೂದದವರನ್ನು ಬಲವಂತಪಡಿಸಿದನು.


“ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”


ಆದರೆ ನೀವು ಬಲಹೀನ ಕುರಿಗಳನ್ನು ಬಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನ್ನು ನೀವು ಪರಾಂಬರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಬಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು