Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:5 - ಪರಿಶುದ್ದ ಬೈಬಲ್‌

5 ಜನರು ನಿನ್ನ ಮಾತನ್ನು ಕೇಳಬಹುದು ಅಥವಾ ಕೇಳದಿರಬಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನ್ನ ಮುಂದೆ ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನ್ನ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನ್ನೆ ನೀನು ಹೇಳಬೇಕು. ಆಗ ಅವರು ತಮ್ಮ ಮಧ್ಯೆ ಒಬ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ದ್ರೋಹಿ ವಂಶದವರು, ಒಂದು ವೇಳೆ ಕೇಳದೆ ಹೋಗಬಹುದು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿ ತಮ್ಮ ಮಧ್ಯೆ ಕಾಣಿಸಿಕೊಂಡಿದ್ದಾನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ದ್ರೋಹಿವಂಶದವರು, ಒಂದು ವೇಳೆ ಕೇಳದೆ ಹೋದಾರು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಕಾಣಿಸಿಕೊಂಡಿದ್ದಾನೆಂದು ತಿಳಿದೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಕೇಳಲಿ ಅಥವಾ ಕೇಳದೇ ಇರಲಿ, ಏಕೆಂದರೆ ಅವರು ತಿರುಗಿಬೀಳುವ ಜನರು, ಆದರೆ ತಮ್ಮೊಳಗೆ ಪ್ರವಾದಿ ಇರುವನೆಂದು ತಿಳಿದುಕೊಂಡರೆ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:5
20 ತಿಳಿವುಗಳ ಹೋಲಿಕೆ  

ಆದರೆ ನೀನು ಹಾಡುವ ವಿಷಯಗಳು ಸಂಭವಿಸುವವು. ಆಗ ಜನರೂ, “ನಿಜವಾಗಿಯೂ ನಮ್ಮ ಮಧ್ಯೆ ಒಬ್ಬ ಪ್ರವಾದಿಯು ವಾಸಿಸಿದನಲ್ಲಾ?” ಎಂದು ಅನ್ನುವರು.’”


ಆದರೆ ನಾನು ನಿನ್ನೊಂದಿಗೆ ಮಾತನಾಡುವಾಗ, ನಿನ್ನನ್ನು ಮಾತನಾಡಲಾಗುವಂತೆ ಮಾಡುವೆನು. ಆಗ ನೀನು ಅವರಿಗೆ, ‘ನಮ್ಮ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ’ ಎಂದು ಹೇಳಬೇಕು. ಕೆಲವರು ಕಿವಿಗೊಡುವರು; ಕೆಲವರು ಕಿವಿಗೊಡರು; ಯಾಕೆಂದರೆ ಅವರು ಯಾವಾಗಲೂ ನನಗೆ ವಿರುದ್ಧವಾಗಿಯೇ ಇರುವರು.


ನಾನು ಬಂದು ಈ ಲೋಕದ ಜನರೊಂದಿಗೆ ಮಾತಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ನಾನು ಅವರೊಂದಿಗೆ ಮಾತಾಡಿದ್ದೇನೆ. ಆದ್ದರಿಂದ ತಮ್ಮ ಪಾಪಕ್ಕೆ ಅವರಿಗೆ ಯಾವ ನೆವವೂ ಇಲ್ಲ.


ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!


ಅವರು ಕೇಳಲಿ, ಕೇಳದಿರಲಿ, ನಾನು ಹೇಳುವದನ್ನು ಅವರಿಗೆ ತಿಳಿಸು; ಯಾಕೆಂದರೆ ಅವರು ದಂಗೆಕೋರರು.


ಕೆಲವು ಯೆಹೂದ್ಯರು ದೇವರಿಗೆ ನಂಬಿಗಸ್ತರಾಗಿರಲಿಲ್ಲ ಎಂಬುದೇನೊ ಸತ್ಯ. ಆದರೆ ದೇವರು ತಾನು ಮಾಡಿದ ವಾಗ್ದಾನವನ್ನು ನೆರವೇರಿಸದಂತೆ ಅದು ಮಾಡುತ್ತದೆಯೇ?


ಆದರೆ ನೀನು ಅವನನ್ನು ಎಚ್ಚರಿಸಿ, ಅವನ ಜೀವಿತವನ್ನು ಬದಲಾಯಿಸಲು ಹೇಳಿ, ಪಾಪವನ್ನು ಮಾಡಬೇಡ ಎಂದು ಹೇಳಿದರೂ ಅವನು ಕೇಳದೆ ಹೋದರೆ ಪಾಪ ಮಾಡುವದನ್ನು ಬಿಡದೆ ಹೋದರೆ ಅವನು ಪಾಪ ಮಾಡಿದುದರಿಂದ ಸಾಯುವನು. ಆದರೆ ನೀನು ಅವನ ಮರಣಕ್ಕೆ ಕಾರಣನಾಗುವದಿಲ್ಲ.


“ಒಂದುವೇಳೆ ನೀನು ಒಬ್ಬ ದುಷ್ಟಮನುಷ್ಯನನ್ನು ಎಚ್ಚರಿಸಿ ಅವನು ಪಾಪ ಮಾಡದಂತೆ ಮತ್ತು ಅವನ ಜೀವಿತವನ್ನು ಬದಲಾವಣೆ ಮಾಡಲು ಹೇಳಿದ್ದಲ್ಲಿ ಆ ಮನುಷ್ಯನು ನಿನ್ನ ಮಾತುಗಳನ್ನು ಕೇಳಲು ನಿರಾಕರಿಸಿದರೆ, ಅವನು ಪಾಪ ಮಾಡುವುದರಿಂದ ಸಾಯುವನು. ಆದರೆ ನೀನು ನಿನ್ನ ಜೀವವನ್ನು ರಕ್ಷಿಸಿಕೊಳ್ಳುವಿ.


ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು. ಯೆಹೂದಿಯು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಿಂದ ಆ ಸುರುಳಿಯನ್ನು ತಂದನು. ಬಳಿಕ ರಾಜನು ಮತ್ತು ಅವನ ಸುತ್ತಲು ನಿಂತ ಅಧಿಕಾರಿಗಳೆಲ್ಲ ಕೇಳುವಂತೆ ಯೆಹೂದಿಯು ಆ ಸುರಳಿಯನ್ನು ಓದಿದನು.


“ಯೆಹೂದ್ಯರಲ್ಲಿ ಅಳಿದುಳಿದವರೇ, ಯೆಹೋವನು ನಿಮಗೆ, ‘ಈಜಿಪ್ಟಿಗೆ ಹೋಗಬೇಡಿರಿ.’ ಎಂದು ಹೇಳಿದ್ದಾನೆ, ನಾನು ಈಗಲೇ ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ.


“ನರಪುತ್ರನೇ, ನೀನು ಏನು ಮಾಡುತ್ತಿರುವೆ ಎಂದು ಇಸ್ರೇಲಿನ ಈ ದಂಗೆಕೋರರು ನಿನ್ನನ್ನು ಕೇಳಲಿಲ್ಲವೇ?


ಅನಂತರ ನನ್ನ ಮಾತಿಗೆ ವಿಧೇಯರಾಗಲು ನಿರಾಕರಿಸುವ ಎಲ್ಲಾ ಇಸ್ರೇಲರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ಇಸ್ರೇಲ್ ಜನಾಂಗವೇ, ನೀವು ಮಾಡಿರುವ ಭಯಂಕರ ಕೃತ್ಯಗಳು ನನಗೆ ಸಾಕಾಗಿವೆ.


ಇಸ್ರೇಲಿನ ರಾಜನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದು ದೇವಮನುಷ್ಯನಾದ ಎಲೀಷನಿಗೆ ತಿಳಿಯಿತು. ಎಲೀಷನು ರಾಜನಿಗೆ ಈ ಸಂದೇಶವನ್ನು ಕಳುಹಿಸಿದನು: “ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡಿದ್ದು ಏಕೆ? ನಾಮಾನನು ನನ್ನ ಬಳಿಗೆ ಬರಲಿ. ಇಸ್ರೇಲಿನಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ತಿಳಿಯುತ್ತದೆ!”


ನಿನ್ನ ನಾಲಿಗೆಯು ಸೇದಿ ಹೋಗುವಂತೆ ಮಾಡುವೆನು. ನಿನಗೆ ಮಾತನಾಡಲು ಆಗದು. ಆದ್ದರಿಂದ ಅವರನ್ನು ಖಂಡಿಸಲು ಯಾರೂ ಇರುವದಿಲ್ಲ. ಯಾಕೆಂದರೆ ಆ ಜನರು ಯಾವಾಗಲೂ ನನ್ನ ವಿರುದ್ಧವಾಗಿ ವರ್ತಿಸುವರು.


“ದಂಗೆಕೋರರಿಗೆ ಇದನ್ನು ಹೇಳು: ಈ ಸಂಗತಿಗಳ ಅರ್ಥವು ನಿಮಗೆ ಗೊತ್ತಿಲ್ಲವೇ? ಅವರಿಗೆ ಹೇಳು: ಮೊದಲಿನ ಗರುಡ ಪಕ್ಷಿ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು. ಅವನು ಜೆರುಸಲೇಮಿಗೆ ಬಂದು ಅದರ ರಾಜನನ್ನೂ ಅದರ ಹಿರಿಯರನ್ನೂ ಬಂಧಿಸಿ, ಅವರನ್ನು ತನ್ನ ರಾಜ್ಯವಾದ ಬಾಬಿಲೋನಿಗೆ ಕೊಂಡೊಯ್ದನು.


ಈ ವಿಷಯವನ್ನು ವಿಧೇಯರಾಗದ ಆ ಸಂತಾನಕ್ಕೆ ತಿಳಿಸು. ಅವರಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “‘ಹಂಡೆಯನ್ನು ಬೆಂಕಿಯ ಮೇಲಿಟ್ಟು ಅದರಲ್ಲಿ ನೀರು ಹೊಯ್ಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು