Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:6 - ಪರಿಶುದ್ದ ಬೈಬಲ್‌

6 “ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿ ವಂಶದವರು; ಅವರ ಬಿರುನುಡಿಗೆ ದಿಗಿಲು ಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನರಪುತ್ರನೇ, ನೀನು ಮುಳ್ಳುಕೊಂಪೆಗಲಿಗೆ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿವಂಶದವರು; ಅವರ ಬಿರುನುಡಿಗೆ ದಿಗಿಲುಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:6
31 ತಿಳಿವುಗಳ ಹೋಲಿಕೆ  

ಯಾರಿಗೂ ನೀನು ಹೆದರಬೇಡ, ನಾನೇ ನಿನ್ನ ಜೊತೆ ಇದ್ದೇನೆ. ನಾನು ನಿನ್ನನ್ನು ಕಾಪಾಡುತ್ತೇನೆ. ಈ ಮಾತನ್ನು ಯೆಹೋವನಾದ ನಾನೇ ಹೇಳುತ್ತಿದ್ದೇನೆ” ಎಂದನು.


ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”


ಆದರೆ ಯೋಗ್ಯವಾದುದನ್ನು ಮಾಡುವಾಗ ನೀವು ಸಂಕಟಪಡಬೇಕಾಗಬಹುದು. ಆದರೆ “ನಿಮ್ಮನ್ನು ಸಂಕಟಕ್ಕೆ ಒಳಪಡಿಸುವ ಜನರಿಗೆ ಹೆದರಬೇಡಿರಿ ಮತ್ತು ಚಿಂತಿಸಬೇಡಿರಿ.”


ದೇವರು ನಮಗೆ ಕೊಟ್ಟದ್ದು ನಮ್ಮನ್ನು ಹೇಡಿಗಳನ್ನಾಗಿ ಮಾಡುವ ಆತ್ಮವನ್ನಲ್ಲ. ನಮ್ಮನ್ನು ಬಲದಿಂದ, ಪ್ರೀತಿಯಿಂದ ಮತ್ತು ಸ್ವಶಿಕ್ಷಣದಿಂದ ತುಂಬಿಸುವ ಆತ್ಮವನ್ನು ಆತನು ಕೊಟ್ಟನು.


ಕೇಳಿರಿ! ಹಾವುಗಳ ಮತ್ತು ಚೇಳುಗಳ ಮೇಲೆ ನಡೆಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ವೈರಿಗಿರುವ ಅಧಿಕಾರಕ್ಕಿಂತಲೂ (ಸೈತಾನ) ಹೆಚ್ಚಿನ ಅಧಿಕಾರವನ್ನು ನಿಮಗೆ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದಿಲ್ಲ.


ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ. ಈಗ ನೀನು ಶಿಕ್ಷಿಸಲ್ಪಡುವೆ. ನೀನು ಈಗ ಗಲಿಬಿಲಿಗೆ ಒಳಗಾಗುವೆ!


“ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನ್ನು ಜನರಿಗೆ ಹೇಳು. ಅವರಿಗೆ ಹೆದರಬೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನ್ನನ್ನು ಅವರೆದುರಿನಲ್ಲಿ ಹೆದರಿಸುವೆನು.


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


ಯೆಹೋವನ ಆತ್ಮನು ನನ್ನಲ್ಲಿ ಅಧಿಕಾರವನ್ನೂ, ಒಳ್ಳೆಯತನವನ್ನೂ ಶಕ್ತಿಯನ್ನೂ ತುಂಬಿದ್ದಾನೆ. ಯಾಕೆಂದರೆ ಯಾಕೋಬನ ಅಪರಾಧಗಳನ್ನು ಅವನಿಗೆ ತಿಳಿಸುವುದಕ್ಕಾಗಿಯಷ್ಟೇ, ಇಸ್ರೇಲಿನ ಪಾಪಗಳನ್ನು ಅವನಿಗೆ ಹೇಳುವುದಕ್ಕಾಗಿಯಷ್ಟೇ.


ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”


ಪ್ರಭುವೇ, ಈಗ ಅವರು ಹೇಳುತ್ತಿರುವುದನ್ನು ಕೇಳು. ಅವರು ನಮ್ಮನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ! ಪ್ರಭುವೇ ನಾವು ನಿನ್ನ ಸೇವಕರು. ನಿನ್ನ ವಾಕ್ಯವನ್ನು ಭಯವಿಲ್ಲದೆ ಹೇಳಲು ನೀನೇ ಸಹಾಯ ಮಾಡು.


ದುಷ್ಟತನವು ಒಂದು ಚಿಕ್ಕ ಬೆಂಕಿಯಂತಿದೆ. ಮೊಟ್ಟ ಮೊದಲು ಬೆಂಕಿಯು ಹಣಜಿಗಳನ್ನು ಮತ್ತು ಮುಳ್ಳುಗಿಡಗಳನ್ನು ಸುಡುವುದು. ಅನಂತರ ಬೆಂಕಿಯು ಕಾಡಿನ ದೊಡ್ಡ ಪೊದೆಗಳನ್ನು ಸುಡುವುದು. ಕೊನೆಗದು ದೊಡ್ಡ ಗಾತ್ರದ ಬೆಂಕಿಯಾಗಿ ಎಲ್ಲವನ್ನೂ ಸುಟ್ಟುಬಿಟ್ಟು ಎಲ್ಲವೂ ಹೊಗೆಯಾಗಿ ಪರಿಣಮಿಸುವದು.


ಅವನು ಈಜಿಪ್ಟನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಫರೋಹನ ಸಿಟ್ಟಿಗೆ ಅವನು ಭಯಪಡಲಿಲ್ಲ. ಯಾರಿಗೂ ಕಾಣದ ದೇವರು ತನಗೆ ಕಾಣುತ್ತಿರುವನೋ ಎಂಬಂತೆ ಅವನು ದೃಢಚಿತ್ತನಾಗಿದ್ದನು;


“‘ಇಸ್ರೇಲಿನ ಸುತ್ತಲಿರುವ ರಾಜ್ಯಗಳು ಅದನ್ನು ಹಗೆ ಮಾಡಿದರು. ಆ ರಾಜ್ಯಗಳಿಗೆ ಬಹು ದೊಡ್ಡ ಕಂಟಕವು ಬಂದೊದಗುವದು. ಆಗ ಹರಿತವಾದ ಮುಳ್ಳಾಗಲಿ ಮುಳ್ಳಿನ ಪೊದೆಗಳಾಗಲಿ ಇಸ್ರೇಲಿನ ಜನರನ್ನು ಬಾಸಿ ಮಾಡಲು ಇರುವದಿಲ್ಲ. ಆಗ ನಾನು ಅವರ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.’”


ಯೆಹೋವನ ದೂತನು ಎಲೀಯನಿಗೆ, “ಸೇನಾಧಿಪತಿಯೊಡನೆ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದನು. ಎಲೀಯನು ರಾಜನಾದ ಅಹಜ್ಯನನ್ನು ನೋಡಲು ಆ ಸೇನಾಧಿಪತಿಯೊಡನೆ ಹೋದನು.


ಅಲ್ಲದೆ ನಿಮ್ಮನ್ನು ವಿರೋಧಿಸುವ ಜನರಿಗೆ ನೀವು ಹೆದರಿಕೊಳ್ಳುವುದಿಲ್ಲ. ನಿಮ್ಮ ರಕ್ಷಣೆಗೂ ನಿಮ್ಮ ವೈರಿಗಳ ನಾಶಕ್ಕೂ ಇವುಗಳು ದೇವರಿಂದಾದ ಪ್ರಮಾಣಗಳಾಗಿವೆ.


ಅಲ್ಲದೆ ನನಗಾಗಿಯೂ ಪ್ರಾರ್ಥಿಸಿರಿ. ನಾನು ಮಾತಾಡುವಾಗ ಸುವಾರ್ತೆಯ ರಹಸ್ಯಸತ್ಯವನ್ನು ನಿರ್ಭಯದಿಂದ ತಿಳಿಸಲು ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸುವಂತೆ ಪ್ರಾರ್ಥಿಸಿರಿ.


ಆದರೆ ಪೇತ್ರ ಮತ್ತು ಯೋಹಾನ ಅವರಿಗೆ, “ನಾವು ನಿಮಗೆ ವಿಧೇಯರಾಗಬೇಕೇ ಅಥವಾ ದೇವರಿಗೆ ವಿಧೇಯರಾಗಬೇಕೇ? ಇದರಲ್ಲಿ ಯಾವುದು ದೇವರಿಗೆ ಅಪೇಕ್ಷೆಯಾದದು? ನೀವೇ ಹೇಳಿ.


ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು.


ಬಳಿಕ ಯೇಸು ಜನರಿಗೆ ಹೀಗೆಂದನು: “ಗೆಳೆಯರೇ, ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರಿಗೆ ಭಯಪಡಬೇಡಿ. ಅವರು ನಿಮ್ಮನ್ನು ಕೊಲ್ಲಬಹುದಷ್ಟೇ. ಆ ಬಳಿಕ ಬೇರೇನೂ ಮಾಡಲು ಅವರಿಂದಾಗದು.


ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.


ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ; ಅವರು ಬಹಳ ಹಟಮಾರಿಗಳಾಗಿದ್ದಾರೆ. ಅವರು ಜನರ ಬಗ್ಗೆ ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಾರೆ. ಅವರು ಬಣ್ಣಗುಂದಿದ, ತುಕ್ಕುಹಿಡಿದ ಕಂಚಿನಂತೆಯೂ ಕಬ್ಬಿಣದಂತೆಯೂ ಇದ್ದಾರೆ.


ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಇದ್ದವು; ಜನರಿಗೆ ಐದುತಿಂಗಳ ಕಾಲ ನೋವುಂಟುಮಾಡುವ ಶಕ್ತಿಯು ಅವುಗಳ ಬಾಲಗಳಲ್ಲಿ ಇತ್ತು.


ಈ ವಿಷಯವನ್ನು ವಿಧೇಯರಾಗದ ಆ ಸಂತಾನಕ್ಕೆ ತಿಳಿಸು. ಅವರಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “‘ಹಂಡೆಯನ್ನು ಬೆಂಕಿಯ ಮೇಲಿಟ್ಟು ಅದರಲ್ಲಿ ನೀರು ಹೊಯ್ಯಿ.


ನಿಮ್ಮ ಮಗನು ಮೊಟ್ಟೆಯನ್ನು ಕೇಳಿದರೆ, ನೀವು ಅವನಿಗೆ ಚೇಳನ್ನು ಕೊಡುವಿರೋ? ಇಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು