Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:46 - ಪರಿಶುದ್ದ ಬೈಬಲ್‌

46 “ನರಪುತ್ರನೇ, ಯೆಹೂದದ ದಕ್ಷಿಣದಲ್ಲಿರುವ ನೆಗೆವ್ ಕಡೆಗೆ ನೋಡು. ನೆಗೆವ್ ಅಡವಿಗೆ ವಿರುದ್ಧವಾಗಿ ಮಾತನಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 “ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತನಾಡುತ್ತಾ ದಕ್ಷಿಣ ಸೀಮೆಯ ವನದ ಪ್ರಸ್ತಾಪವನ್ನೆತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 “ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ, ಆ ಕಡೆಗೆ ಮಾತಾಡುತ್ತಾ ದಕ್ಷಿಣ ಸೀಮೆಯ ವನವನ್ನು ಉದ್ದೇಶಿಸಿ ಪ್ರಸ್ತಾಪವನ್ನೆತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತಾಡುತ್ತಾ ದಕ್ಷಿಣಸೀಮೆಯ ವನದ ಪ್ರಸ್ತಾಪವನ್ನೆತ್ತಿ ಆ ವನಕ್ಕೆ ಹೀಗೆ ಸಾರಿ ಹೇಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 “ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ, ದಕ್ಷಿಣದ ಕಡೆಗೆ ಮಾತನಾಡು. ದಕ್ಷಿಣ ಬಯಲು ಮರುಭೂಮಿಗೆ ವಿರೋಧವಾಗಿ ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:46
14 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೋವನ ಸಂದೇಶಕ್ಕೆ ಕಿವಿಗೊಡು. ಆದರೆ ನೀನು, ‘ಇಸ್ರೇಲರಿಗೆ ವಿರುದ್ಧವಾಗಿ ಪ್ರವಾದಿಸಬೇಡ. ಇಸಾಕನ ಕುಟುಂಬದ ವಿರುದ್ಧ ಪ್ರಸಂಗಿಸಬೇಡ’ ಎಂದು ಹೇಳುತ್ತಿ.


“ನರಪುತ್ರನೇ, ಜೆರುಸಲೇಮಿನ ಕಡೆಗೆ ನೋಡಿ ಅವರ ಪವಿತ್ರ ಸ್ಥಳಗಳಿಗೆ ವಿರುದ್ಧವಾಗಿ ಹೇಳು. ನನ್ನ ಪರವಾಗಿ ಇಸ್ರೇಲ್ ದೇಶದ ವಿರುದ್ಧವಾಗಿ ಮಾತನಾಡು.


ನೆಗೆವ್ ಮರುಭೂಮಿಯ ಎಲ್ಲಾ ನಗರಗಳಿಗೆ ಬೀಗ ಹಾಕಲಾಗಿದೆ. ಅವುಗಳನ್ನು ತೆರೆಯುವುದು ಯಾರಿಂದಲೂ ಸಾಧ್ಯವಿಲ್ಲ. ಯೆಹೂದದ ಎಲ್ಲಾ ಜನರು ಸೆರೆ ಒಯ್ಯಲ್ಪಟ್ಟಿದ್ದಾರೆ. ಅವರೆಲ್ಲರನ್ನು ಸೆರೆಯಾಳುಗಳಾಗಿ ತೆಗೆದುಕೊಂಡು ಹೋಗಲಾಗಿದೆ.


ಜನರು, “ನೀನು ನಮಗೆ ಬೋಧಿಸಬೇಡ, ಆ ಕೆಟ್ಟವಿಷಯಗಳನ್ನು ನಮಗೆ ಹೇಳಬೇಡ, ನಮಗೆ ಯಾವ ಕೆಟ್ಟ ವಿಷಯವೂ ಸಂಭವಿಸುವುದಿಲ್ಲ” ಎಂದು ಹೇಳುತ್ತಾರೆ.


ಆತನು ಹೇಳಿದ್ದೇನೆಂದರೆ, “ನರಪುತ್ರನೇ, ಇಸ್ರೇಲಿನ ಪರ್ವತಗಳ ಕಡೆಗೆ ಮುಖ ಮಾಡು. ಅವುಗಳ ವಿರುದ್ಧವಾಗಿ ನನಗೋಸ್ಕರ ಮಾತನಾಡಿ ಹೀಗೆ ಹೇಳು:


ದೇವರು ಮತ್ತೆ ಹೇಳಿದ್ದೇನೆಂದರೆ: “ಈಗ ನೀನು ನಿನ್ನ ಬಟ್ಟೆಯ ತೋಳನ್ನು ಮೇಲಕ್ಕೆ ಮಡಿಚಿ ನಿನ್ನ ಕೈಯನ್ನು ಇಟ್ಟಿಗೆಯ ಮೇಲೆ ಚಾಚು. ಜೆರುಸಲೇಮ್ ನಗರದ ಮೇಲೆ ಯುದ್ಧ ಮಾಡುವವನಂತೆ ನಟಿಸು. ಪಟ್ಟಣದ ವಿರುದ್ಧವಾಗಿ ಪ್ರವಾದಿಸು.


ಅರಮನೆಯನ್ನು ಹಾಳುಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಪ್ರತಿಯೊಬ್ಬನ ಹತ್ತಿರ ಆ ಮನೆಯನ್ನು ಹಾಳುಮಾಡಲು ಬೇಕಾಗುವ ಸಾಧನಗಳಿರುವವು. ಆ ಜನರು ನಿನ್ನ ಸುಂದರವಾದ ಮತ್ತು ಗಟ್ಟಿಯಾದ ದೇವದಾರಿನ ತೊಲೆಗಳನ್ನು ಕಡಿದುಹಾಕುತ್ತಾರೆ. ಅವರು ಆ ತೊಲೆಗಳನ್ನು ಬೆಂಕಿಯಲ್ಲಿ ಎಸೆಯುತ್ತಾರೆ.


ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.


ನನ್ನ ಮಾತುಗಳು ಪರಿಪೂರ್ಣವಾಗಿದ್ದ ಕಾರಣ ಅದಕ್ಕೆ ಬೇರೇನೂ ಸೇರಿಸಲು ಅವರಿಗೆ ಸಾಧ್ಯವಿರಲಿಲ್ಲ. ನನ್ನ ಮಾತುಗಳು ಅವರ ಕಿವಿಗಳಿಗೆ ಕೋಮಲವಾಗಿದ್ದವು.


ನನ್ನ ಬೋಧನೆಯು ಮಳೆಯಂತೆ ಬರುವುದು. ನೆಲದ ಮೇಲೆ ಬೀಳುವ ಇಬ್ಬನಿಯಂತಿರುವುದು; ಮೃದುವಾದ ಹುಲ್ಲಿನ ಮೇಲೆ ಬೀಳುವ ಹದವಾದ ಮಳೆಯಂತಿರುವುದು; ಹಸಿರು ಸಸಿಗಳ ಮೇಲೆ ಬೀಳುವ ಮಳೆಯ ಹನಿಯಂತಿರುವುದು.


ಯೆಹೋವನ ವಾಕ್ಯವು ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,


ಒಳ್ಳೆಯ ಜನರನ್ನೂ ಕೆಟ್ಟ ಜನರನ್ನೂ ನಿನ್ನಿಂದ ಕಡಿದುಹಾಕುವೆನು. ನನ್ನ ಖಡ್ಗವನ್ನು ಒರೆಯಿಂದ ತೆಗೆದು ದಕ್ಷಿಣದಿಂದ ಉತ್ತರದ ತನಕ ಇರುವ ಎಲ್ಲಾ ಜನರಿಗೆ ವಿರುದ್ಧವಾಗಿ ಉಪಯೋಗಿಸುವೆನು.


ಆದ್ದರಿಂದ ನೀನು ನನ್ನ ಪರವಾಗಿ ಅವರೊಂದಿಗೆ ಮಾತನಾಡಬೇಕು. ನರಪುತ್ರನೇ, ನೀನು ಹೋಗಿ ಅವರಿಗೆ ದೈವವಾಣಿ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು