Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:48 - ಪರಿಶುದ್ದ ಬೈಬಲ್‌

48 ಆಗ ಎಲ್ಲಾ ಜನರು ಯೆಹೋವನಾದ ನಾನೇ ಬೆಂಕಿಯನ್ನಿಟ್ಟಿದ್ದು ಎಂದು ತಿಳಿದುಕೊಳ್ಳುವರು. ಆ ಬೆಂಕಿಯು ನಂದಿಸಲ್ಪಡುವುದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅದನ್ನು ಹೊತ್ತಿಸಿದವನು ಯೆಹೋವನಾದ ನಾನೇ ಎಂಬುದು ಸಕಲ ನರಪ್ರಾಣಿಗಳಿಗೂ ಗೋಚರವಾಗುವುದು; ಅದು ಆರಿಹೋಗದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಅದನ್ನು ಹೊತ್ತಿಸಿದವನು ಸರ್ವೇಶ್ವರನಾದ ನಾನೇ ಎಂದು ಸಕಲ ನರಪ್ರಾಣಿಗಳಿಗೆ ಆಗ ಗೋಚರವಾಗುವುದು; ಅದು ಆರಿಹೋಗದು’.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಅದನ್ನು ಹೊತ್ತಿಸಿದವನು ಯೆಹೋವನಾದ ನಾನೇ ಎಂಬದು ಸಕಲನರಪ್ರಾಣಿಗಳಿಗೂ ಗೋಚರವಾಗುವದು; ಅದು ಆರಿಹೋಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಯೆಹೋವ ದೇವರಾದ ನಾನೇ ಅದನ್ನು ಹಚ್ಚಿದೆನೆಂದು ಪ್ರತಿಯೊಬ್ಬರೂ ತಿಳಿದುಕೊಳ್ಳುವರು, ಅದು ಆರಿಹೋಗುವುದಿಲ್ಲ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:48
11 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


“‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”


ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’


“ನೀವು ತಕ್ಕ ಶಿಕ್ಷೆಯನ್ನು ಅನುಭವಿಸುವಿರಿ. ನಾನು ನಿಮ್ಮ ಅರಣ್ಯಗಳಲ್ಲಿ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ನಿಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಸ್ತುವನ್ನು ಸುಟ್ಟುಹಾಕುತ್ತದೆ.”


ಅದರ ಸ್ವಂತ ಕಾಂಡದಿಂದಲೇ ಬೆಂಕಿಯು ಹೊರಟುಬಂದು ಅದರ ಚಿಕ್ಕ ಕೊಂಬೆಗಳನ್ನು ಮತ್ತು ಫಲಗಳನ್ನು ನಾಶಮಾಡಿತು. ಈಗ ಬಲವಾದ ಕಾಂಡ ಅದರಲ್ಲಿಲ್ಲ. ಆಳುವದಕ್ಕೆ ರಾಜದಂಡವೂ ಅದರಲ್ಲಿಲ್ಲ.’ ಇದು ಮರಣದ ಶೋಕಗೀತೆ. ಇದನ್ನು ಶೋಕಗೀತೆಯನ್ನಾಗಿಯೇ ಬಳಸಲಾಗುತ್ತಿದೆ.”


ನೀನು ಬೆಂಕಿಗೆ ಸೌದೆಯಂತೆ ಇರುವಿ. ನಿನ್ನ ರಕ್ತವು ಭೂಮಿಯ ಆಳಕ್ಕೆ ಹರಿಯುವದು. ಜನರು ಇನ್ನು ಮುಂದಕ್ಕೆ ನಿನ್ನನ್ನು ಎಂದಿಗೂ ನೆನಪು ಮಾಡರು. ಇದನ್ನು ಯೆಹೋವನಾದ ನಾನೇ ಹೇಳಿದ್ದೇನೆ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು