Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:15 - ಪರಿಶುದ್ದ ಬೈಬಲ್‌

15 ಅವರ ಹೃದಯಗಳು ಭಯದಿಂದ ಕರಗಿಹೋಗುವುದು. ಬಹು ಜನರು ಪ್ರಜ್ಞೆ ತಪ್ಪಿ ಬೀಳುವರು. ನಗರದ್ವಾರದ ಬಳಿಯಲ್ಲಿದ್ದು ಈ ಖಡ್ಗವು ಬಹು ಜನರನ್ನು ಕೊಲ್ಲುವುದು. ಹೌದು, ಖಡ್ಗವು ಮಿಂಚಿನಂತೆ ಹೊಳೆಯುವುದು. ಜನರನ್ನು ಕೊಲ್ಲುವುದಕ್ಕಾಗಿ ಅದು ಹೊಳಪುಮಾಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀರಾಗುವುದು ಜನರ ಹೃದಯ, ಎಡವಿ ಬೀಳುವರು ಬಹುಜನ. ಪುರದ್ವಾರಗಳಿಗೇ ತಂದಿರುವೆನು ಹತಿಸುವಾ ಖಡ್ಗವ. ಮಿನುಗುತಿಹುದದು ಮಿಂಚಿನಂತೆ ಹರಿತವಿದೆ ವಧೆಗಾಗುವ ಕತ್ತಿಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರ ಹೃದಯವು ನೀರಾಗಿ ಬಹುಜನ ಎಡವಿಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ವಿುಂಚಿನಂತೆ ವಿುಂಚುತ್ತದೆ, ವಧೆಗಾಗಿ ಉಜ್ಜಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರ ಹೃದಯವು ಕರಗುವ ಹಾಗೆಯೂ, ಅವರ ಎಲ್ಲಾ ಬಾಗಿಲುಗಳಲ್ಲಿ ಪತನವು ಹೆಚ್ಚಾಗುವ ಹಾಗೆಯೂ ಖಡ್ಗದ ಮೊನೆ ಇಟ್ಟಿದ್ದೇನೆ. ಆಹಾ, ಮಿಂಚಿನಂತೆ ಹೊಡೆಯಲು ಈ ಬಲೆ ಹೆಣೆಯಲಾಗಿದೆ ಅದನ್ನು ಕೊಲೆಮಾಡುವುದಕ್ಕೆ ಮಸೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:15
15 ತಿಳಿವುಗಳ ಹೋಲಿಕೆ  

ಕೊಲ್ಲುವದಕ್ಕಾಗಿ ಆ ಖಡ್ಗವು ಹರಿತಮಾಡಲ್ಪಟ್ಟಿದೆ, ಮಿಂಚಿನಂತೆ ಹೊಳೆಯುತ್ತಿದೆ. ನನ್ನ ಮಗನೇ, ನಾನು ನಿನ್ನನ್ನು ಶಿಕ್ಷಿಸುತ್ತಿದ್ದ ಬೆತ್ತದಿಂದ ನೀನು ಓಡಿಹೋದೆ. ಬೆತ್ತದ ಶಿಕ್ಷೆಯನ್ನು ಅನುಭವಿಸಲು ನೀನು ಒಪ್ಪಲಿಲ್ಲ.


“‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”


ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರಬಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ.


“ಜೆರುಸಲೇಮನ್ನು ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಬಲಗೈಗೆ ಬರುವುದು. ಅವನು ತನ್ನೊಂದಿಗೆ ಭಿತ್ತಿಭೇದಕ ಯಂತ್ರಗಳನ್ನು ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಆರ್ಭಟ ಮಾಡುವರು. ಆಮೇಲೆ ನಗರದ ಸುತ್ತಲೂ ಮಣ್ಣಿನ ದಿಬ್ಬ ಕಟ್ಟುವರು. ಕೋಟೆಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನ್ನು ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು.


ಆಗ ಅವರು, ‘ನೀನು ದುಃಖದಿಂದ ಅಳುವದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಬೇಕು: ‘ಭೀತಿಯನ್ನು ಉಂಟು ಮಾಡುವ ವಾರ್ತೆ ಬರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿಹೋಗಿರುತ್ತವೆ; ಕೈಗಳು ಬಲಹೀನವಾಗುತ್ತವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೊಣಗಂಟುಗಳು ನೀರಿನಂತಿರುವವು.’ ನೋಡಿ, ಆ ಕೆಟ್ಟ ಸುದ್ದಿಯು ಬರುತ್ತಲಿದೆ. ಇವೆಲ್ಲಾ ನಡೆಯುವವು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


ನೆಗೆವ್ ಅಡವಿಗೆ ಹೀಗೆ ಹೇಳು: ‘ಯೆಹೋವನ ಮಾತುಗಳನ್ನು ಆಲೈಸು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಅಡವಿಯಲ್ಲಿ ಬೆಂಕಿಯನ್ನು ಹಾಕುತ್ತೇನೆ. ಆ ಬೆಂಕಿಯು ಪ್ರತಿಯೊಂದು ಹಸಿರು ಮರವನ್ನೂ ಪ್ರತಿಯೊಂದು ಒಣಗಿದ ಮರವನ್ನೂ ಸುಟ್ಟುಬಿಡುವುದು. ಆ ಬೆಂಕಿಯನ್ನು ನಂದಿಸಲಾಗುವದಿಲ್ಲ. ದಕ್ಷಿಣದಿಂದ ಉತ್ತರದ ತನಕವಿರುವ ಪ್ರತಿಯೊಂದು ಮುಖವು ಅದರ ತಾಪವನ್ನು ಅನುಭವಿಸುವುದು.


“ನಾನು ಅವರನ್ನು ದಂಡಿಸುವೆನು. ಅವರು ಒಂದು ಬೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಬೆಂಕಿಯಿಂದ ಸುಟ್ಟುಹೋಗುವರು. ನಾನು ಅವರನ್ನು ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.


ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ; ನನ್ನ ಮೂಳೆಗಳೆಲ್ಲಾ ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ.


ಆಗ ಸಿಂಹದಂತೆ ಶೂರರಾದ ಜನರು ಸಹ ಹೆದರಿಕೊಳ್ಳುತ್ತಾರೆ. ಏಕೆಂದರೆ ನಿನ್ನ ತಂದೆಯು ರಣವೀರನೆಂದು ಮತ್ತು ಅವನ ಜನರು ಧೈರ್ಯಶಾಲಿಗಳೆಂದು ತಿಳಿದಿದೆ.


ಇವೆಲ್ಲವುಗಳ ಬಗ್ಗೆ ಕೇಳಿ ನಮಗೆ ಅತೀವ ಭಯವಾಗಿದೆ; ನಮ್ಮಲ್ಲಿ ಯಾರಿಗೂ ನಿಮ್ಮೊಂದಿಗೆ ಯುದ್ಧ ಮಾಡಲು ಧೈರ್ಯವಿಲ್ಲ. ಏಕೆಂದರೆ ನಿಮ್ಮ ದೇವರಾದ ಯೆಹೋವನು, ಭೂಪರಲೋಕಗಳನ್ನು ಆಳುವವನಾಗಿದ್ದಾನೆ.


ನಾವು ಕಣ್ಣಿಲ್ಲದವರಂತಿದ್ದೇವೆ. ಕುರುಡರಂತೆ ಗೋಡೆಗೆ ತಾಕುತ್ತಿದ್ದೇವೆ. ರಾತ್ರಿಯಲ್ಲಿ ಎಡವಿಬೀಳುವಂತೆ ಬೀಳುತ್ತಿದ್ದೇವೆ. ಹಗಲಿನಲ್ಲಿಯೂ ನಮಗೆ ಕಾಣದು. ಮಧ್ಯಾಹ್ನದ ಸಮಯದಲ್ಲೂ ಸತ್ತವರಂತೆ ಬೀಳುತ್ತೇವೆ.


ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.


ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನ್ನ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಗರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಗರಿಸುತ್ತಾರೆ. ನನ್ನ ಜನರು ಒಳ್ಳೆಯ ರಾಜಬೀದಿಯ ಮೇಲೆ ನನ್ನನ್ನು ಹಿಂಬಾಲಿಸುವದನ್ನು ತೊರೆದು ಹಾಳಾದ ಹಾದಿಯನ್ನು ಹಿಡಿಯುತ್ತಾರೆ.


ಖಡ್ಗವೇ, ಹರಿತವಾಗು, ಬಲಭಾಗದಲ್ಲಿ ತುಂಡರಿಸು; ಮುಂಭಾಗದಲ್ಲಿ ತುಂಡರಿಸು, ಎಡಭಾಗದಲ್ಲಿ ತುಂಡರಿಸು. ನಿನ್ನ ಖಡ್ಗವು ಯಾವ ಸ್ಥಳಕ್ಕೆ ನುಗ್ಗಬೇಕೆಂದಿದೆಯೋ ಆ ಸ್ಥಳಕ್ಕೆ ಹೋಗು.


“ನರಪುತ್ರನೇ, ಬಾಬಿಲೋನಿನ ರಾಜನ ಖಡ್ಗವು ಇಸ್ರೇಲಿಗೆ ಬರಲು ಎರಡು ಮಾರ್ಗಗಳ ನಕ್ಷೆಯನ್ನು ರಚಿಸು. ಅವರೆಡೂ ಒಂದೇ ಪ್ರದೇಶದಿಂದ (ಬಾಬಿಲೋನಿನಿಂದ) ಆರಂಭವಾಗುತ್ತವೆ. ಪ್ರತಿಯೊಂದು ರಸ್ತೆಯ ಆರಂಭದಲ್ಲಿ ಸೂಚನೆ ಕಂಬವನ್ನು ಚಿತ್ರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು