Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:23 - ಪರಿಶುದ್ದ ಬೈಬಲ್‌

23 ಇಸ್ರೇಲ್ ಜನರಿಗೆ ಆ ಮಂತ್ರತಂತ್ರಗಳ ಗುರುತು ಅರ್ಥವಿಲ್ಲದ್ದಾಗಿದೆ. ಅವರು ಮಾಡಿದ ವಾಗ್ದಾನವು ಅವರೊಂದಿಗಿದೆ. ಆದರೆ ಯೆಹೋವನು ಅವರ ಪಾಪಗಳನ್ನು ನೆನಪಿಗೆ ತರುವನು. ಆಗ ಇಸ್ರೇಲರು ಶತ್ರುವಶವಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವನು ಅವರ ಅಧರ್ಮವನ್ನು ಬಯಲಿಗೆ ತರಲು ಅವನ ಕೈಗೆ ಸಿಕ್ಕಿಬೀಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೆ ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸೆಯಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವರು ತನ್ನ ಕೈಗೆ ಸಿಕ್ಕಿಬೀಳಲೆಂದು ಅವರ ಅಧರ್ಮವನ್ನು ಅವನು ಬೆಳಕಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವನು ಅವರ ಅಧರ್ಮವನ್ನು ಬೈಲಿಗೆ ತರಲು [ಅವನ ಕೈಗೆ] ಸಿಕ್ಕಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಅವರು ತಾವು ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ನಂಬಿಕೆ ಇಟ್ಟಿದ್ದರಿಂದ, ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವುದು. ಆದರೆ ಅವನು ಅವರ ಅಕ್ರಮವನ್ನು ಜ್ಞಾಪಕಪಡಿಸಿ, ಅವರನ್ನು ಸೆರೆಯಾಗಿ ಒಯ್ಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:23
12 ತಿಳಿವುಗಳ ಹೋಲಿಕೆ  

ಅವನು ಅವಳನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು. ಅಲ್ಲದೆ ಅವನು ಮೂರು ಸೇರು ಗೋಧಿಹಿಟ್ಟನ್ನು ಕಾಣಿಕೆಯಾಗಿ ಯಾಜಕನಿಗೆ ತಂದು ಕೊಡಬೇಕು. ಅವನು ಅದರ ಮೇಲೆ ಎಣ್ಣೆ ಹಾಕಬಾರದು; ಅವನು ಅದರ ಮೇಲೆ ಧೂಪಹಾಕಬಾರದು; ಯಾಕೆಂದರೆ ಇದು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆಯಾಗಿದೆ. ಆಕೆಯ ದೋಷವನ್ನು ಹೊರಪಡಿಸಲು ಕೊಟ್ಟಂಥ ಧಾನ್ಯಸಮರ್ಪಣೆ ಇದಾಗಿದೆ.


ಇಸ್ರೇಲರು ಅವರ ಮೇಲೆ ಇನ್ನು ಎಂದಿಗೂ ಭರವಸವಿಡುವುದಿಲ್ಲ. ಇಸ್ರೇಲರು ಸಹಾಯಕ್ಕಾಗಿ ದೇವರ ಬಳಿಗೆ ಹೋಗದೆ ಈಜಿಪ್ಟಿನವರ ಮೇಲೆ ಭರವಸವಿಟ್ಟಿದ್ದ ಪಾಪವನ್ನು ಅರಿತುಕೊಳ್ಳುವರು. ಆಗ ಅವರು ನಾನೇ ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.”


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀನು ಅನೇಕ ದುಷ್ಕೃತ್ಯಗಳನ್ನು ಮಾಡಿರುವೆ. ನಿನ್ನ ಪಾಪಗಳು ಬಹಳ ಸ್ಪಷ್ಟವಾಗಿವೆ. ನೀನು ದೋಷಿ ಎಂಬುದನ್ನು ನಾನು ನೆನಪುಮಾಡಿಕೊಳ್ಳುವಂತೆ ಮಾಡುವೆ. ವೈರಿಯು ನಿನ್ನನ್ನು ಹಿಡಿಯುವನು.


ಆ ಮಹಾನಗರವು ಒಡೆದು ಮೂರು ಭಾಗವಾಯಿತು. ಜನಾಂಗಗಳ ನಗರಗಳು ನಾಶವಾದವು. ಮಹಾನಗರವಾದ ಬಾಬಿಲೋನನ್ನು ದೇವರು ದಂಡಿಸದೆ ಬಿಡಲಿಲ್ಲ. ಆತನು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕುಡಿಯಲು ಕೊಟ್ಟನು.


“ನರಪುತ್ರನೇ, ‘ಸಂಕಷ್ಟದ ದಿನಗಳು ಉರುಳುತ್ತಿವೆ; ಎಲ್ಲಾ ದರ್ಶನಗಳು ನೆರವೇರುವುದಿಲ್ಲ’ ಎಂಬ ಈ ಗಾದೆಯನ್ನು ಇಸ್ರೇಲ್ ದೇಶದಲ್ಲಿರುವ ನೀವೆಲ್ಲರೂ ಹೇಗೆ ಅರ್ಥಮಾಡಿಕೊಳ್ಳುವಿರಿ?


‘ಮನೆಗಳನ್ನು ಕಟ್ಟುವ ಅಗತ್ಯ ಈಗಿಲ್ಲ. ಪಟ್ಟಣವು ಮಡಕೆಯಂತಿದೆ ಮತ್ತು ನಾವು ಮಾಂಸದಂತಿದ್ದೇವೆ’ ಎಂದು ಸುಳ್ಳು ಹೇಳುತ್ತಿದ್ದಾರೆ.


ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.


ಯೆಹೋವನ ಕೋಪದಿಂದ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಇವೆಲ್ಲವೂ ಸಂಭವಿಸಿದವು. ಹೀಗೆ ಯೆಹೋವನು ಅವರನ್ನು ತನ್ನಿಂದ ದೂರಸರಿಸಿದನು. ಚಿದ್ಕೀಯನು ಬಾಬಿಲೋನ್ ರಾಜನಿಗೆ ವಿರುದ್ಧವಾಗಿ ದಂಗೆ ಎದ್ದನು.


ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು