Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:5 - ಪರಿಶುದ್ದ ಬೈಬಲ್‌

5 ಆಗ, ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ತೆಗೆದಿದ್ದೇನೆಂದು ಎಲ್ಲಾ ಜನರಿಗೆ ಗೊತ್ತಾಗುವುದು. ನನ್ನ ಖಡ್ಗವು ತನ್ನ ಕಾರ್ಯಮಾಡದೆ ತಿರುಗಿ ಒರೆಯೊಳಗೆ ಹೋಗುವದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ’ ಎಂಬುದು ಎಲ್ಲಾ ನರಮನುಷ್ಯರಿಗೂ ಗೊತ್ತಾಗುವುದು; ಅದು ಪುನಃ ಒರೆಗೆ ಸೇರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಸರ್ವೇಶ್ವರನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ ಎಂಬುದು ಎಲ್ಲ ನರಮಾನವರಿಗೂ ತಿಳಿಯುವುದು; ಅದು ಪುನಃ ಒರೆಗೆ ಸೇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ ಎಂಬದು ಎಲ್ಲಾ ನರಮನುಷ್ಯರಿಗೂ ಗೊತ್ತಾಗುವದು; ಅದು ಪುನಃ ಒರೆಗೆ ಸೇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯೆಹೋವ ದೇವರಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹೊರಗೆ ತೆಗೆದೆನೆಂದು ಜನರೆಲ್ಲರಿಗೂ ತಿಳಿಯುವುದು, ಅದು ಮತ್ತೆ ತಿರುಗಿ ಬರುವುದೇ ಇಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:5
14 ತಿಳಿವುಗಳ ಹೋಲಿಕೆ  

“‘ಬಾಬಿಲೋನೇ, ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು. ನೀನು ಎಲ್ಲಿ ನಿರ್ಮಿಸಲ್ಪಟ್ಟಿದ್ದೆಯೋ, ಎಲ್ಲಿ ನೀನು ಜನ್ಮತಾಳಿದೆಯೋ ಅಲ್ಲಿ ನಿನ್ನ ನ್ಯಾಯತೀರಿಸುವೆನು.


ಯೆಹೋವನಿಗೆ ವಿರುದ್ಧವಾಗಿ ಏಕೆ ಯೋಜನೆ ಹಾಕುತ್ತೀರಿ? ನೀವು ಯಾವ ಕುಯುಕ್ತಿಯನ್ನೂ ಮಾಡದ ಹಾಗೆ ಆತನು ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುತ್ತಾನೆ.


ಆಗ ಎಲ್ಲಾ ಜನರು ಯೆಹೋವನಾದ ನಾನೇ ಬೆಂಕಿಯನ್ನಿಟ್ಟಿದ್ದು ಎಂದು ತಿಳಿದುಕೊಳ್ಳುವರು. ಆ ಬೆಂಕಿಯು ನಂದಿಸಲ್ಪಡುವುದಿಲ್ಲ.’”


ಆತನು ಮಾಡಬೇಕೆಂದು ಯೋಜಿಸಿದ್ದನ್ನು ಮಾಡಿ ಮುಗಿಸುವವರೆಗೆ ಆತನ ಕೋಪವು ಕಡಿಮೆಯಾಗುವುದಿಲ್ಲ. ಆ ದಿನವಾದ ಮೇಲೆ ನೀವು ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳುವಿರಿ.


ನಾನು ಇದನ್ನು ಏಲಿ ಮತ್ತು ಅವನ ಕುಟುಂಬದ ವಿರುದ್ಧ ಸಂಪೂರ್ಣವಾಗಿ ಮಾಡುತ್ತೇನೆ.


ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಆ ಕಾರ್ಯಗಳನ್ನು ಮಾಡಿಮುಗಿಸುವವು.


“ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡುತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯುಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡುವನು.


ನನ್ನ ಕೈಗಳನ್ನು ಆಕಾಶದ ಕಡೆಗೆತ್ತಿ ವಚನ ಕೊಡುತ್ತೇನೆ. ನಾನು ನಿತ್ಯಕಾಲಕ್ಕೆ ಜೀವಿಸುವುದು ಎಷ್ಟು ಸತ್ಯವೋ ಅದೇರೀತಿ ಇವೆಲ್ಲವೂ ನೆರವೇರುವವು.


“ಯೆರೆಮೀಯನೇ, ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನಾಂಗಗಳಿಗೆ ಹೇಳು: ‘ನನ್ನ ರೋಷದ ಈ ಪಾತ್ರೆಯಿಂದ ಕುಡಿಯಿರಿ, ಕುಡಿದು ಅಮಲೇರಿ ವಾಂತಿಮಾಡಿಕೊಳ್ಳಿ, ಕೆಳಗೆ ಬಿದ್ದು ಮೇಲಕ್ಕೆ ಏಳದಿರಿ, ಏಕೆಂದರೆ ನಾನು ನಿಮ್ಮನ್ನು ಕೊಲ್ಲಲು ಒಂದು ಖಡ್ಗವನ್ನು ಕಳುಹಿಸುತ್ತಿದ್ದೇನೆ.’


ದೇವರು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಹೃದಯ ಒಡೆದ ಮನುಷ್ಯನು ದುಃಖದಿಂದಿರುವಾಗ ಅಳುವ ಶಬ್ದವನ್ನು ಮಾಡು. ಈ ಶಬ್ದವನ್ನು ಜನರ ಮುಂದೆ ಮಾಡು.


“ನರಪುತ್ರನೇ, ಈ ಕಥೆಯನ್ನು ಇಸ್ರೇಲ್ ಜನಾಂಗಕ್ಕೆ ಹೇಳು. ಇದರ ಅರ್ಥವೇನೆಂದು ಅವರನ್ನು ಕೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು