Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:6 - ಪರಿಶುದ್ದ ಬೈಬಲ್‌

6 ದೇವರು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಹೃದಯ ಒಡೆದ ಮನುಷ್ಯನು ದುಃಖದಿಂದಿರುವಾಗ ಅಳುವ ಶಬ್ದವನ್ನು ಮಾಡು. ಈ ಶಬ್ದವನ್ನು ಜನರ ಮುಂದೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಆದ್ದರಿಂದ ಮನುಷ್ಯಪುತ್ರನೇ, ನರಳಾಡು! ಮುರಿದ ಹೃದಯ ಮತ್ತು ಕಹಿ ದುಃಖದಿಂದ ಅವರ ಮುಂದೆ ನರಳಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:6
21 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು: “ಚಪ್ಪಾಳೆ ತಟ್ಟು, ನಿನ್ನ ಕಾಲುಗಳನ್ನು ನೆಲಕ್ಕೆ ಒದ್ದು, ‘ಅಯ್ಯೋ, ಬೇಡ!’ ಎಂದು ಹೇಳು. ಯಾಕೆಂದರೆ ಇಸ್ರೇಲ್ ಜನರು ಎಲ್ಲಾ ಅಸಹ್ಯಕರವಾದ ಮತ್ತು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಅವರು ಯುದ್ಧದಿಂದಲೂ ಕ್ಷಾಮದಿಂದಲೂ ಭಯಂಕರವಾದ ಕಾಯಿಲೆಗಳಿಂದಲೂ ಸಾಯುವರು.


ಆದ್ದರಿಂದ ನಾನು ಹೇಳುವುದೇನೆಂದರೆ: “ನೀವು ನನ್ನ ಕಡೆಗೆ ನೋಡಬೇಡಿ! ನನ್ನನ್ನು ಅಳಲು ಬಿಡಿರಿ! ಜೆರುಸಲೇಮಿನ ನಾಶನದ ಕುರಿತಾಗಿ ನನ್ನನ್ನು ಕೂಡಲೇ ಸಂತೈಸಬೇಡಿರಿ.”


ಆ ವಿಷಯವನ್ನು ಕೇಳಿದಾಗ ನನ್ನ ಶರೀರವೆಲ್ಲಾ ನಡುಗಿತು. ಆಶ್ಟರ್ಯದಿಂದ ನಾನು ಸಿಳ್ಳುಹಾಕಿದೆ. ನನ್ನ ಎಲುಬುಗಳ ಬಲಹೀನತೆಯಿಂದ ನಾನು ನಡುಗುವವನಾಗಿ ನಿಂತೆನು. ಅವರು ಜನರ ಮೇಲೆ ಬೀಳಲು ಬರುವಾಗ ನಾನು ಅವರ ನಾಶನದ ದಿವಸವನ್ನು ಎದುರುನೋಡುತ್ತಿದ್ದೇನೆ.


ಈಗ ನಿನೆವೆಯು ಖಾಲಿಯಾಯಿತು. ಎಲ್ಲಾ ದೋಚಲ್ಪಟ್ಟಿತು. ನಗರವು ನಾಶವಾಯಿತು. ಜನರು ತಮ್ಮ ಧೈರ್ಯ ಕಳೆದುಕೊಂಡಿದ್ದಾರೆ. ಭಯದಿಂದ ಅವರ ಹೃದಯವು ಕರಗುತ್ತಿದೆ. ಮೊಣಕಾಲುಗಳು ನಡುಗುತ್ತಿದೆ. ಅವರ ದೇಹವು ಅಲ್ಲಾಡುತ್ತಿದೆ. ಭಯದಿಂದ ಅವರ ಮುಖವು ರಕ್ತಹೀನವಾಗಿದೆ.


ದಾನಿಯೇಲನೆಂಬ ನಾನು ಬಹಳ ಅಶಕ್ತನಾದೆನು. ಆ ದರ್ಶನದ ತರುವಾಯ ಹಲವಾರು ದಿವಸ ನಾನು ಕಾಯಿಲೆ ಬಿದ್ದೆನು. ಆಮೇಲೆ ನಾನು ಗುಣಹೊಂದಿ ರಾಜಕಾರ್ಯವನ್ನು ಪ್ರಾರಂಭಿಸಿದೆನು. ಆದರೆ ಆ ದರ್ಶನದಿಂದ ನನ್ನ ಮನಸ್ಸು ಕಲಕಿತು. ಆ ದರ್ಶನದ ಅರ್ಥವೇನೆಂಬುದು ನನಗೆ ತಿಳಿಯಲಿಲ್ಲ.


ರಾಜನಾದ ಬೇಲ್ಶಚ್ಚರನು ಬಹಳ ಹೆದರಿದನು. ಭಯದಿಂದ ಅವನ ಮುಖವು ಕಳೆಗುಂದಿತು; ಮತ್ತು ಅವನ ಮೊಣಕಾಲುಗಳು ನಡುಗಿ ಒಂದಕ್ಕೊಂದು ಬಡಿಯುತ್ತಿದ್ದವು. ಅವನ ಕಾಲುಗಳು ತುಂಬ ಬಲಹೀನವಾಗಿ ಅವನಿಗೆ ನಿಲ್ಲಲಾಗಲಿಲ್ಲ.


“ಆ ದಂಡಗಳನ್ನು ಕೈಯಲ್ಲಿ ಹಿಡಿದುಕೊಂಡು ನಿನ್ನೆದುರಿಗೆ ಚಾಚು. ನೀನು ಅವುಗಳ ಮೇಲೆ ಹೆಸರು ಬರೆದಿರುವೆ.


“‘ಬೊಬ್ಬೆಹಾಕು, ಕಿರುಚು, ಓ ನರಪುತ್ರನೇ, ಯಾಕೆಂದರೆ ಖಡ್ಗವು ನನ್ನ ಜನರ ಮೇಲೆ ಮತ್ತು ಇಸ್ರೇಲಿನ ಎಲ್ಲಾ ಅಧಿಪತಿಗಳ ಮೇಲೆ ಉಪಯೋಗಿಸಲ್ಪಡುವುದು. ಇಸ್ರೇಲನ್ನು ಆಳುವವರಿಗೆ ಯುದ್ಧವು ಬೇಕು. ಆಗ ಅವರು ಖಡ್ಗವು ಬಂದಾಗ ನನ್ನ ಜನರೊಂದಿಗೆ ಇರಬಹುದು. ಆದ್ದರಿಂದ ನಿನ್ನ ತೊಡೆಗೆ ಬಡಿದು ಗಟ್ಟಿಯಾದ ಸ್ವರದಿಂದ ನಿನ್ನ ದುಃಖವನ್ನು ಪ್ರದರ್ಶಿಸು.


ಆಗ ಯೆಹೋವನು ಅವನಿಗೆ, “ಜೆರುಸಲೇಮ್ ನಗರದಲ್ಲೆಲ್ಲಾ ತಿರುಗಾಡು. ಜೆರುಸಲೇಮಿನಲ್ಲಿ ನಡೆಯುತ್ತಿರುವ ಅಸಹ್ಯವಾದ ದುಷ್ಕೃತ್ಯಗಳ ಬಗ್ಗೆ ನರಳಾಡುತ್ತಿರುವವರ ಮತ್ತು ನಿಟ್ಟುಸಿರುಬಿಡುತ್ತಿರುವವರ ಹಣೆಯ ಮೇಲ್ಗಡೆ ಒಂದು ಗುರುತನ್ನಿಡು” ಎಂದು ಹೇಳಿದನು.


ನೀನು ಬಾರ್ಲಿ ರೊಟ್ಟಿಗಳನ್ನು ಮಾಡುವಂತೆ ತಿನ್ನುವದಕ್ಕಾಗಿ ನೀನು ಪ್ರತಿದಿನ ರೊಟ್ಟಿಯನ್ನು ಮಾಡಬೇಕು. ಒಣಗಿದ ಮನುಷ್ಯನ ಮಲದಲ್ಲಿ ಅದನ್ನು ಸುಡಬೇಕು. ಈ ಬೆಂಕಿಯ ಮೇಲೆ ರೊಟ್ಟಿಯನ್ನು ಕಾಯಿಸಬೇಕು. ನೀನು ಈ ರೊಟ್ಟಿಯನ್ನು ಜನರ ಮುಂದೆ ಮಾಡಿ ತಿನ್ನಬೇಕು.”


“ಈ ಪ್ರಶ್ನೆಯನ್ನು ಕೇಳಿ ಪರಿಶೀಲಿಸಿರಿ. ಪುರುಷನು ಮಗುವಿಗೆ ಜನ್ಮಕೊಡಬಲ್ಲನೆ? ಖಂಡಿತವಾಗಿಯೂ ಇಲ್ಲ. ಹಾಗಾದರೆ ಪ್ರತಿಯೊಬ್ಬ ಬಲಿಷ್ಠನೂ ಪ್ರಸವವೇದನೆಪಡುತ್ತಿರುವ ಸ್ತ್ರೀಯಂತೆ ತನ್ನ ಹೊಟ್ಟೆಯನ್ನು ಏಕೆ ಹಿಡಿದುಕೊಂಡಿದ್ದಾನೆ? ಪ್ರತಿಯೊಬ್ಬನ ಮುಖವು ಸತ್ತವನ ಮುಖದಂತೆ ಏಕೆ ಬಿಳಿಚಿದೆ? ಏಕೆಂದರೆ ಜನರು ಬಹಳ ಭಯಪಟ್ಟಿದ್ದಾರೆ.


“ಯೆರೆಮೀಯನೇ, ನೀನು ಜನರಿಗೆ ಆ ವಿಷಯಗಳನ್ನು ಹೇಳು. ಅವರು ಗಮನವಿಟ್ಟು ಕೇಳುತ್ತಿರುವಾಗ ಆ ಮಣ್ಣಿನ ಕೊಡವನ್ನು ಒಡೆದುಹಾಕಿ


ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. ನೋವಿನಿಂದ ನಾನು ಬಾಗಿಹೋಗಿದ್ದೇನೆ. ನಾನು ತುಂಬ ಹೆದರಿಕೊಂಡಿದ್ದೇನೆ. ನನ್ನ ಹೃದಯವು ಒಳಗೆ ತಳಮಳಗೊಳ್ಳುತ್ತಿದೆ. ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಬ್ದವನ್ನು ಕೇಳಿದ್ದೇನೆ. ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ.


ನಾನು ಆ ಭಯಂಕರ ಸಂಗತಿಗಳನ್ನು ನೋಡಿದ್ದರಿಂದ ಈಗ ಭಯಪೀಡಿತನಾಗಿದ್ದೇನೆ. ಭಯದಿಂದ ನನ್ನ ಹೊಟ್ಟೆಯು ನೋಯುತ್ತಿದೆ. ಆ ನೋವು ಪ್ರಸವವೇದನೆಯಂತಿದೆ. ನಾನು ಕೇಳುವ ವಿಷಯಗಳು ನನ್ನನ್ನು ಭಯಪಡಿಸಿವೆ; ನಾನು ನೋಡುವ ವಿಷಯಗಳು ನನ್ನನ್ನು ನಡುಗಿಸುತ್ತಿವೆ.


ನಾನು ಮೋವಾಬಿಗಾಗಿ ತುಂಬಾ ದುಃಖದಲ್ಲಿದ್ದೇನೆ. ನಾನು ಕೀರ್‌ಹೆರೆಸಿಗಾಗಿಯೂ ತುಂಬಾ ದುಃಖದಲ್ಲಿದ್ದೇನೆ. ಈ ನಗರಗಳಿಗಾಗಿ ನಾನು ಬಹಳವಾಗಿ ದುಃಖದಲ್ಲಿದ್ದೇನೆ.


ಆಗ, ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ತೆಗೆದಿದ್ದೇನೆಂದು ಎಲ್ಲಾ ಜನರಿಗೆ ಗೊತ್ತಾಗುವುದು. ನನ್ನ ಖಡ್ಗವು ತನ್ನ ಕಾರ್ಯಮಾಡದೆ ತಿರುಗಿ ಒರೆಯೊಳಗೆ ಹೋಗುವದಿಲ್ಲ.’”


ಆಗ ಅವರು, ‘ನೀನು ದುಃಖದಿಂದ ಅಳುವದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಬೇಕು: ‘ಭೀತಿಯನ್ನು ಉಂಟು ಮಾಡುವ ವಾರ್ತೆ ಬರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿಹೋಗಿರುತ್ತವೆ; ಕೈಗಳು ಬಲಹೀನವಾಗುತ್ತವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೊಣಗಂಟುಗಳು ನೀರಿನಂತಿರುವವು.’ ನೋಡಿ, ಆ ಕೆಟ್ಟ ಸುದ್ದಿಯು ಬರುತ್ತಲಿದೆ. ಇವೆಲ್ಲಾ ನಡೆಯುವವು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


“ನರಪುತ್ರನೇ, ಈಜಿಪ್ಟಿನ ಜನರಿಗಾಗಿ ಗೋಳಾಡು. ಪಾತಾಳಕ್ಕೆ ಇಳಿದುಹೋಗಿರುವ ಇತರ ಎಲ್ಲರೊಡನೆ ಇರುವದಕ್ಕಾಗಿ ಈಜಿಪ್ಟನ್ನು ಮತ್ತು ಇತರ ಜನಾಂಗಗಳ ಉಳಿದ ಪಟ್ಟಣಗಳನ್ನು ಸಮಾಧಿಗೆ ಕಳುಹಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು