Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:13 - ಪರಿಶುದ್ದ ಬೈಬಲ್‌

13 ದೇವರು ಹೀಗೆ ಹೇಳಿದನು: “‘ನೋಡಿರಿ, ನಾನು ಕೈಯನ್ನು ಬಡಿದು ನಿಮ್ಮನ್ನು ನಿಲ್ಲಿಸಿ ಬಿಡುವೆನು. ನೀವು ಮೋಸ ಮಾಡಿದ್ದಕ್ಕಾಗಿಯೂ, ಜನರನ್ನು ಕೊಲೆ ಮಾಡಿದ್ದಕ್ಕಾಗಿಯೂ ನಿಮ್ಮನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “‘ಇಗೋ, ನೀನು ದೋಚಿಕೊಂಡ ಲಾಭವನ್ನೂ, ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಎತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಇಗೋ, ನೀನು ದೋಚಿಕೊಂಡ ಲಾಭವನ್ನೂ ನೀನು ಸುರಿದ ರಕ್ತವನ್ನೂ ನೋಡಿ ಕೈ ಎತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಗೋ, ನೀನು ದೋಚಿಕೊಂಡ ಲಾಭವನ್ನೂ ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈಬಡಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಆದ್ದರಿಂದ ನೀನು ಮಾಡಿದ ಈ ದುರ್ಲಾಭದಿಂದಲೂ, ನಿನ್ನಲ್ಲಿರುವ ನಿನ್ನ ರಕ್ತಾಪರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:13
16 ತಿಳಿವುಗಳ ಹೋಲಿಕೆ  

“ಆಗ ನಾನೂ ಚಪ್ಪಾಳೆ ಬಡಿದು ನನ್ನ ಕೋಪವನ್ನು ನಿಲ್ಲಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”


ಪ್ರಾಮಾಣಿಕರಾಗಿರುವ ನೀತಿವಂತರು ಹಣಕ್ಕಾಗಿ ಇತರರಿಗೆ ಹಾನಿಮಾಡದವರಾಗಿದ್ದಾರೆ. ಅವರು ಆ ಬೆಂಕಿಯಲ್ಲಿ ವಾಸಿಸುವರು. ಅವರು ಲಂಚ ತೆಗೆದುಕೊಳ್ಳಲು ನಿರಾಕರಿಸುವರು. ಇತರರನ್ನು ಕೊಲೆಮಾಡುವ ಯೋಜನೆಯನ್ನು ಕೇಳಲು ಅವರು ಇಷ್ಟಪಡುವುದಿಲ್ಲ. ಅವರು ಕೆಟ್ಟಕಾರ್ಯಗಳ ಯೋಜನೆಗಳನ್ನು ನೋಡುವುದಿಲ್ಲ.


“ಜೆರುಸಲೇಮಿನ ನಾಯಕರು ತಾನು ಹಿಡಿದ ಪ್ರಾಣಿಯನ್ನು ತಿನ್ನುವ ತೋಳಕ್ಕೆ ಸಮಾನರಾಗಿದ್ದಾರೆ. ಅವರು ಧನಿಕರಾಗುವದಕ್ಕಾಗಿ ಜನರನ್ನು ಹಿಡಿದು ಕೊಲ್ಲುವರು.


ಆತನು ಹೀಗೆ ಹೇಳಿದನು: “ನರಪುತ್ರನೇ, ಕೈತಟ್ಟಿ ನನ್ನ ಪರವಾಗಿ ಜನರೊಂದಿಗೆ ಮಾತನಾಡು. “ಖಡ್ಗವು ಎರಡು ಬಾರಿ ಕೆಳಕ್ಕೆ ಹಾಕಲ್ಪಡಲಿ, ಹೌದು, ಮೂರು ಬಾರಿ! ಈ ಖಡ್ಗವು ಜನರನ್ನು ಕೊಲ್ಲುವದಕ್ಕಾಗಿಯೇ ಇದೆ. ಇದು ಮಹಾಹತ್ಯೆ ಮಾಡುವದಕ್ಕಾಗಿ ಇದೆ. ಈ ಖಡ್ಗವು ಅವರನ್ನು ತೂರಿಹೋಗುವುದು.


ಈ ವಿಷಯದಲ್ಲಿ ನಿಮ್ಮಲ್ಲಿ ಯಾರೂ ಕ್ರಿಸ್ತನಲ್ಲಿ ಸಹೋದರನಾದವನನ್ನು ವಂಚಿಸಿ ಕೇಡುಮಾಡಬಾರದು. ನಾವು ಈಗಾಗಲೇ ನಿಮಗೆ ಹೇಳಿದಂತೆ ಮತ್ತು ಎಚ್ಚರಿಕೆ ನೀಡಿದಂತೆ ಇವೆಲ್ಲವುಗಳ ವಿಷಯದಲ್ಲಿ ದೇವರು ದಂಡಿಸುತ್ತಾನೆ.


ಬಡವರಿಗೆ ಮೋಸಮಾಡಿ ಗಳಿಸಿದ ಐಶ್ವರ್ಯ ಕಳೆದುಹೋಗುವುದು; ಬಡವರಿಗೆ ದಯೆ ತೋರುವವನಿಗೆ ಅದು ದೊರೆಯುವುದು.


ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.


ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.


“ನರಪುತ್ರನೇ, ಬಾಬಿಲೋನಿನ ರಾಜನ ಖಡ್ಗವು ಇಸ್ರೇಲಿಗೆ ಬರಲು ಎರಡು ಮಾರ್ಗಗಳ ನಕ್ಷೆಯನ್ನು ರಚಿಸು. ಅವರೆಡೂ ಒಂದೇ ಪ್ರದೇಶದಿಂದ (ಬಾಬಿಲೋನಿನಿಂದ) ಆರಂಭವಾಗುತ್ತವೆ. ಪ್ರತಿಯೊಂದು ರಸ್ತೆಯ ಆರಂಭದಲ್ಲಿ ಸೂಚನೆ ಕಂಬವನ್ನು ಚಿತ್ರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು