Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:16 - ಪರಿಶುದ್ದ ಬೈಬಲ್‌

16 ಜೆರುಸಲೇಮೇ, ನಿನಗೆ ಸಂಭವಿಸುವ ಸಂಗತಿಗಳಿಂದ ಜನಾಂಗಗಳ ಮುಂದೆ ನಿನ್ನ ಕೀರ್ತಿಯು ಹಾಳಾಗುವುದು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜನಾಂಗಗಳ ದೃಷ್ಟಿಯಲ್ಲಿ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವೆ; ನಾನೇ ಸರ್ವೇಶ್ವರ ಎಂದು ಆಗ ನಿನಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ನೀನು ಇತರ ಜನಾಂಗಗಳ ಮುಂದೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:16
17 ತಿಳಿವುಗಳ ಹೋಲಿಕೆ  

ಜನರು ನಿಮ್ಮ ಮಧ್ಯದಲ್ಲಿ ಕೊಲ್ಲಲ್ಪಟ್ಟು ಬೀಳುವರು. ಆಗ ನೀನು, ನಾನು ಯೆಹೋವನೆಂದು ತಿಳಿಯುವಿ.’”


ಇಸ್ರೇಲ್ ಜನರ ಮನೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಅತೀ ದುಷ್ಟ ಜನಾಂಗಗಳನ್ನು ಬರಮಾಡುವೆನು. ನಾನು ಗರ್ವಿಷ್ಠರ ಸೊಕ್ಕನ್ನು ಮುರಿಯುವೆನು; ಅವರ ಆರಾಧನೆಯ ಸ್ಥಳಗಳು ಅಪರಿಶುದ್ಧಗೊಳ್ಳುವವು.


ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.


ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.


ನಾನು ಅವರ ಒಡೆಯನಾದ ಯೆಹೋವನೆಂದು ತಿಳಿಯುವರು. ಯಾಕೆಂದರೆ ನಾನು, ಅವರನ್ನು ಅವರ ಸ್ವದೇಶವನ್ನು ಬಿಟ್ಟು ಸೆರೆಹಿಡಿಯಲ್ಪಟ್ಟವರಾಗಿ ಬೇರೆ ದೇಶಗಳಿಗೆ ಹೋಗುವಂತೆ ಮಾಡಿದೆನು. ಆಮೇಲೆ ತಿರುಗಿ ಅವರನ್ನು ಒಟ್ಟುಗೂಡಿಸಿ ಅವರ ದೇಶಕ್ಕೆ ಹಿಂದಕ್ಕೆ ಕರೆಸಿದೆನು.


ಅಮ್ಮೋನಿಯರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನ ಮಾತುಗಳನ್ನು ಕೇಳಿರಿ. ಆತನು ಹೇಳುವುದೇನೆಂದರೆ, ನನ್ನ ಪವಿತ್ರಾಲಯವು ಅಪವಿತ್ರಗೊಂಡಾಗಲೂ ಇಸ್ರೇಲ್ ದೇಶವು ನಾಶವಾದಾಗಲೂ ಯೆಹೂದದ ಜನರು ಸೆರೆ ಒಯ್ಯಲ್ಪಟ್ಟಾಗಲೂ ನೀವು ಸಂತೋಷಪಟ್ಟಿರಿ.


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ಪರಿಶುದ್ಧವಾಗಿ ಆಳುವ ನಿನ್ನವರನ್ನು ನಾನು ಅಪರಿಶುದ್ಧ ಮಾಡುವೆನು. ಯಾಕೋಬನನ್ನು ಸಂಪೂರ್ಣವಾಗಿ ನಾಶಮಾಡುವೆನು. ಇಸ್ರೇಲಿಗೆ ಕೆಟ್ಟ ವಿಷಯಗಳು ಸಂಭವಿಸುವವು.”


ಆದರೆ ನೀನು ನಮ್ಮ ದೇವರಾದ ಯೆಹೋವನು. ಆದ್ದರಿಂದ ದಯಮಾಡಿ ನಮ್ಮನ್ನು ಅಶ್ಶೂರದ ಅರಸನ ಕೈಯಿಂದ ರಕ್ಷಿಸು. ಆಗ ಭೂಮಿಯ ಎಲ್ಲಾ ರಾಜ್ಯಗಳೂ ಯೆಹೋವನಾದ ನೀನೇ ದೇವರೆಂದು ತಿಳಿದುಕೊಳ್ಳುವವು.”


ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು.


ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಹೀಗೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದ್ದರಿಂದ ಈ ಮಹಾಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!’”


ಅದೇ ಸಮಯಕ್ಕೆ ಒಬ್ಬ ಪ್ರವಾದಿಯು ರಾಜನಾದ ಅಹಾಬನ ಬಳಿಗೆ ಹೋಗಿ, “ರಾಜನಾದ ಅಹಾಬನೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ. ‘ಆ ಮಹಾಸೇನೆಯನ್ನು ನೀನು ನೋಡಿದೆಯಾ! ಯೆಹೋವನಾದ ನಾನು, ಈ ದಿನ ಆ ಸೇನೆಯನ್ನು ಸೋಲಿಸುವಂತೆ ನಿನಗೆ ಅವಕಾಶ ಮಾಡುತ್ತೇನೆ. ಅನಂತರ ನಾನೇ ಯೆಹೋವನೆಂಬುದು ನಿನಗೆ ತಿಳಿಯುತ್ತದೆ’” ಎಂದು ಹೇಳಿದನು.


ಆದರೆ ನಾನು ಈಜಿಪ್ಟಿನವರೊಡನೆ ವರ್ತಿಸುವಂತೆ ಇಸ್ರೇಲರೊಡನೆ ವರ್ತಿಸುವುದಿಲ್ಲ. ನನ್ನ ಜನರು ವಾಸಿಸುವ ಗೋಷೆನ್ ಪ್ರದೇಶದಲ್ಲಿ ಯಾವ ಹುಳವೂ ಇರುವುದಿಲ್ಲ. ನಾನೇ ಭೂಲೋಕವನ್ನು ಆಳುವ ಯೆಹೋವನೆಂದು ಆಗ ನೀನು ತಿಳಿದುಕೊಳ್ಳುವೆ.


ಯೆಹೋವನ ವಾಕ್ಯವು ನನಗೆ ಬಂತು. ಆತನು ಹೀಗೆಂದನು:


ದೇವರನ್ನು ಅಲಕ್ಷ್ಯ ಮಾಡುವ ಜನರೆಲ್ಲ ಕೆಟ್ಟವರು. ಅವರು ಮರಣದ ಸ್ಥಳಕ್ಕೆ ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು