Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:21 - ಪರಿಶುದ್ದ ಬೈಬಲ್‌

21 ನಾನು ನಿಮ್ಮನ್ನು ಆ ಬೆಂಕಿಯಲ್ಲಿ ಹಾಕುವೆನು. ನನ್ನ ರೌದ್ರವೆಂಬ ಬೆಂಕಿಯನ್ನು ಊದಿ ಶಾಖ ಹೆಚ್ಚಿಸುವೆನು. ಆಗ ನೀವು ಕರಗಲು ಪ್ರಾರಂಭಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಹಾಕಿ, ಊದಲು ನೀವು ಅದರೊಳಗೆ ಕರಗಿ ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಹಾಕಿ ಊದಲು ನೀವು ಅದರೊಳಗೆ ಕರಗಿಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಕೂಡಿಸಿ ಊದಲು ನೀವು ಅದರೊಳಗೆ ಕರಗಿಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ನಿಮ್ಮನ್ನು ಕೂಡಿಸಿ, ನನ್ನ ರೋಷದ ಬೆಂಕಿಯನ್ನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:21
20 ತಿಳಿವುಗಳ ಹೋಲಿಕೆ  

ಅವರ ಬೆಳ್ಳಿಬಂಗಾರಗಳು ಅವರ ಸಹಾಯಕ್ಕೆ ಬಾರವು. ಆ ಸಮಯದಲ್ಲಿ ಯೆಹೋವನು ಕೋಪಾಗ್ನಿಯಿಂದ ತುಂಬಿದವನಾಗುವನು. ಯೆಹೋವನು ಇಡೀ ಪ್ರಪಂಚವನ್ನೇ ನಾಶಮಾಡುವನು. ಭೂಮಿಯ ಮೇಲಿರುವ ಪ್ರತಿಯೊಬ್ಬನನ್ನು ಯೆಹೋವನು ಸಂಪೂರ್ಣವಾಗಿ ನಾಶಮಾಡುವನು.”


ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.


ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’


ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಜನರು ಲೋಹವನ್ನು ಪುಟಕ್ಕಿಟ್ಟು ಪರೀಕ್ಷಿಸುವಂತೆ ನಾನು ಯೆಹೂದದ ಜನರನ್ನು ಪರೀಕ್ಷಿಸುತ್ತೇನೆ. ನನಗೆ ಬೇರೆ ಮಾರ್ಗವೇ ಇಲ್ಲ. ನನ್ನ ಜನರು ಪಾಪವನ್ನು ಮಾಡಿದ್ದಾರೆ.


ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ.


ಒಣಎಲೆಯು ಸುಟ್ಟುಹೋಗುವಂತೆ ಪರ್ವತಗಳು ಸುಟ್ಟು ಭಸ್ಮವಾಗುವವು. ಬೆಂಕಿಯಲ್ಲಿ ನೀರು ಕುದಿಯುವಂತೆ ಪರ್ವತಗಳು ಕುದಿಯುವವು. ಆಗ ನಿನ್ನ ಶತ್ರುಗಳು ನಿನ್ನ ವಿಷಯವಾಗಿ ತಿಳಿಯುವರು. ಆಗ ಜನಾಂಗದವರೆಲ್ಲಾ ನಿನ್ನನ್ನು ನೋಡಿ ಭಯದಿಂದ ನಡುಗುವರು.


ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.


ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. ಅವರ ದುರಾಶೆಯು ಈಡೇರದು.


ಗಾಳಿ ಬಡಿದುಕೊಂಡು ಹೋಗುವ ಹೊಗೆಯಂತೆ ನಿನ್ನ ಶತ್ರುಗಳು ಚದರಿಹೋಗಲಿ. ಬೆಂಕಿಯಲ್ಲಿ ಕರಗಿಹೋಗುವ ಮೇಣದಂತೆ ನಿನ್ನ ಶತ್ರುಗಳು ನಾಶವಾಗಲಿ.


ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸುವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು.


ಯೆಹೋವನೇ, ನೀನು ರಾಜನೊಂದಿರುವಾಗ ಅವನು ಉರಿಯುವ ಕುಲಿಮೆಯಂತಿರುವನು. ಅವನ ಕೋಪವು ಧಗಧಗಿಸುವ ಬೆಂಕಿಯಂತೆ ಸುಡುವುದು; ಅವನು ಶತ್ರುಗಳನ್ನು ನಾಶಮಾಡುವನು.


ನೆಬೂಜರದಾನನು ದೇವಾಲಯವನ್ನೂ ರಾಜನ ಅರಮನೆಯನ್ನೂ ಜೆರುಸಲೇಮಿನಲ್ಲಿದ್ದ ಮನೆಗಳನ್ನೆಲ್ಲಾ ಸುಟ್ಟುಹಾಕಿದನು. ಅವನು ಮಹಾಸೌಧಗಳನ್ನು ನಾಶಗೊಳಿಸಿದನು.


ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.


ಯೆಹೋವನು ಆ ಮನುಷ್ಯನನ್ನು ಕ್ಷಮಿಸುವುದಿಲ್ಲ. ಅವನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸುವನು. ಅವನನ್ನು ಇಸ್ರೇಲ್ ಕುಲಗಳಿಂದ ತೆಗೆದುಹಾಕುವನು. ಈ ಪುಸ್ತಕದಲ್ಲಿ ಬರೆದ ಎಲ್ಲಾ ಶಾಪಗಳಿಂದ ಬಾಧಿಸಿ ನಾಶಪಡಿಸುವನು. ಈ ಬೋಧನಾ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಗೆ ಅದು ಸೇರಿರುತ್ತದೆ.


ನೀವು ಇತರ ದೇವರುಗಳನ್ನು ಪೂಜಿಸುವುದನ್ನು ಜೀವಸ್ವರೂಪನಾದ ಯೆಹೋವನು ದ್ವೇಷಿಸುವುದರಿಂದ ಬೆಂಕಿಯಂತೆ ಆತನು ನಿಮ್ಮನ್ನು ದಹಿಸಿ ಬಿಡುವನು.


“ನಾನು ಅವರ ಹಣ್ಣುಗಳನ್ನೂ ಬೆಳೆಗಳನ್ನೂ ಕಿತ್ತುಕೊಂಡು ಅವರಿಗೆ ಸುಗ್ಗಿಯಾಗದಂತೆ ಮಾಡುತ್ತೇನೆ.” ಇದು ಯೆಹೋವನ ನುಡಿ. ದ್ರಾಕ್ಷಿಬಳ್ಳಿಯಲ್ಲಿ ದ್ರಾಕ್ಷಿಗಳಿರುವದಿಲ್ಲ. ಅಂಜೂರದ ಮರದಲ್ಲಿ ಒಂದಾದರೂ ಅಂಜೂರದ ಹಣ್ಣು ಇರುವದಿಲ್ಲ. ಎಲೆಗಳು ಸಹ ಒಣಗಿ ಉದುರುವವು. ನಾನು ಅವರಿಗೆ ಕೊಟ್ಟ ವಸ್ತುಗಳನ್ನು ಕಿತ್ತುಕೊಳ್ಳುವೆನು.


ನಿನ್ನ ಮೇಲೆ ನನ್ನ ರೌದ್ರವನ್ನು ಸುರಿಸುವೆನು. ನನ್ನ ರೌದ್ರವು ಬಿಸಿಗಾಳಿಯಂತೆ ನಿನ್ನನ್ನು ಸುಡುವದು. ನಾನು ನಿನ್ನನ್ನು ಕ್ರೂರ ಮನುಷ್ಯರ ಕೈಗೆ ಒಪ್ಪಿಸುವೆನು. ಅವರು ಜನರನ್ನು ಕೊಲ್ಲುವುದರಲ್ಲಿ ನಿಪುಣರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು