Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:29 - ಪರಿಶುದ್ದ ಬೈಬಲ್‌

29 “ಸಾಮಾನ್ಯ ಜನರು ಮೋಸ ಮಾಡುತ್ತಾರೆ ಮತ್ತು ದರೋಡೆ ಮಾಡುತ್ತಾರೆ. ತಾವು ಧನಿಕರಾಗುವದಕ್ಕೆ ನಿಸ್ಸಹಾಯಕರಾದ ಭಿಕ್ಷೆಗಾರರನ್ನು ಸುಲುಕೊಳ್ಳುವರು. ಅವರು ಪರದೇಶಿಗಳಿಗೆ ಮೋಸಮಾಡಿ ಅವರಿಗೆ ಅನ್ಯಾಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿದೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಜನಸಾಮಾನ್ಯರೂ ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿದ್ದಾರೆ, ವಿದೇಶಿಗಳನ್ನು ಅನ್ಯಾಯವಾಗಿ ನಸುಕಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸಾಧಾರಣರು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ ವಿದೇಶಿಗಳನ್ನು ಅನ್ಯಾಯವಾಗಿ ಅರೆದು ಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ದೇಶದ ಜನರು ಬಲಾತ್ಕಾರದಿಂದ ಸೂರೆಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ, ದರಿದ್ರರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯ ಕೊಡದೆ ವಿದೇಶಿಯರನ್ನು ಬಲಾತ್ಕಾರ ಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:29
21 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು.


“ನೀವು ಪರದೇಶಸ್ಥರಿಗೆ ತೊಂದರೆ ಕೊಡಬಾರದು. ನೀವು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ಸರ್ವಶಕ್ತನಾದ ಯೆಹೋವನ ದ್ರಾಕ್ಷಿತೋಟವೇ ಇಸ್ರೇಲ್ ದೇಶ. ಯೆಹೋವನು ಪ್ರೀತಿಸುವ ದ್ರಾಕ್ಷಿಬಳ್ಳಿಯೇ ಯೆಹೂದದ ಪ್ರಜೆ. ಯೆಹೋವನು ನ್ಯಾಯವನ್ನು ಅಪೇಕ್ಷಿಸಿದರೂ ಸಿಕ್ಕಿದ್ದು ನರಹತ್ಯವೇ. ಯೆಹೋವನು ಧರ್ಮವನ್ನು ಅಪೇಕ್ಷಿಸಿದರೂ ದೊರಕಿದ್ದು ಗೋಳಾಟವೇ.


ನಮ್ಮ ದೇಶದಲ್ಲಿ ವಾಸವಾಗಿರುವ ವಿಧವೆಯರನ್ನೂ ವಿದೇಶಿಯರನ್ನೂ ಆ ದುಷ್ಟರು ಕೊಲ್ಲುತ್ತಾರೆ. ಅವರು ಅನಾಥ ಮಕ್ಕಳನ್ನೂ ಕೊಲೆ ಮಾಡುವರು.


“ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಗೆ ಕೆಟ್ಟದ್ದನ್ನು ಮಾಡಬೇಡಿರಿ.


“ನೀವು ಮೊದಲು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದದ್ದನ್ನು ಜ್ಞಾಪಕಮಾಡಿಕೊಳ್ಳಿ. ಆದ್ದರಿಂದ ನೀವು ಮೋಸಮಾಡಬಾರದು; ನಿಮ್ಮ ದೇಶದಲ್ಲಿರುವ ಯಾವ ಪರದೇಶಸ್ಥನಿಗೂ ಕೇಡು ಮಾಡಬಾರದು.


ಅವರು ಬಡವರಿಗೆ ನ್ಯಾಯವಂತರಾಗಿರುವುದಿಲ್ಲ. ಅವರು ಬಡಜನರ ಹಕ್ಕನ್ನು ತೆಗೆದುಬಿಡುವರು. ಜನರು ವಿಧವೆಯರಿಂದಲೂ ಅನಾಥರಿಂದಲೂ ಹಣ ಕಿತ್ತುಕೊಳ್ಳುವಂತೆ ಮಾಡುವರು.


ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ನಿಮ್ಮ ಮನೆಯೊಳಕ್ಕೆ ಸೇರಿಸಿಕೊಳ್ಳಲಿಲ್ಲ. ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು ಮತ್ತು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡಿಕೊಳ್ಳಲಿಲ್ಲ’ ಎಂದು ಹೇಳುವನು.


ನೀವು ನನ್ನ ಜನರ ದೇಹದಿಂದ ಚರ್ಮ ತೆಗೆದು ಎಲುಬುಗಳನ್ನು ತುಂಡುಮಾಡಿ ಅವರನ್ನು ನಾಶಮಾಡುತ್ತೀರಿ. ತಪ್ಪಲೆಯೊಳಗೆ ಬೇಯಿಸಲು ಮಾಂಸ ತುಂಡುಮಾಡಿ ಹಾಕುವಂತೆ ನೀವು ಅವರ ಎಲುಬುಗಳನ್ನು ತುಂಡುಮಾಡುತ್ತೀರಿ.


ಅವರಿಗೆ ಹೊಲಗದ್ದೆಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಅವರಿಗೆ ಮನೆಮಠಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಒಬ್ಬನಿಗೆ ಮೋಸಮಾಡಿ ಅವನ ಮನೆಯನ್ನು ಕಿತ್ತುಕೊಳ್ಳುವರು. ಇನ್ನೊಬ್ಬನಿಗೆ ಮೋಸಮಾಡಿ ಅವನ ಹೊಲಗದ್ದೆಗಳನ್ನು ಕಿತ್ತುಕೊಳ್ಳುವರು.


ಬಡ, ನಿಸ್ಸಹಾಯಕರಾದ ಜನರಿಗೆ ಕಿರುಕುಳ ಕೊಟ್ಟಿರಬಹುದು. ಜನರ ನಿಸ್ಸಹಾಯಕತೆಯ ಪ್ರಯೋಜನ ಪಡೆಯುತ್ತಿರಬಹುದು. ಒತ್ತೆಗೆ ತೆಗೆದುಕೊಂಡ ವಸ್ತುವನ್ನು ಹಿಂದಕ್ಕೆ ಕೊಡದೆ ಇದ್ದಿರಬಹುದು. ಆ ಮಗನು ವಿಗ್ರಹಗಳಿಗೆ ಪ್ರಾರ್ಥಿಸಿ ಇನ್ನೂ ಅನೇಕ ಭಯಂಕರ ಕೃತ್ಯಗಳನ್ನೂ ಮಾಡಿದ್ದಿರಬಹುದು.


“ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.


ಅನ್ಯಾಯದಿಂದ ಸಂಪಾದಿಸಿದ್ದರಲ್ಲಿ ನಂಬಿಕೆ ಇಡಬೇಡಿ. ಕದ್ದವಸ್ತುಗಳಲ್ಲಿ ಜಂಬಪಡಬೇಡಿ. ಐಶ್ವರ್ಯವು ಅಧಿಕವಾಗುತ್ತಿದ್ದರೂ ಅದರಲ್ಲಿ ಮನಸ್ಸಿಡಬೇಡಿ.


ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ಜನರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅಪರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗೆಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವುದಿಲ್ಲ.’


“ನಿಮ್ಮ ನೆರೆಯವನಿಗೆ ಕೆಡುಕುಗಳನ್ನು ಮಾಡಬಾರದು. ನೀವು ಅವನನ್ನು ಸುಲಿಗೆ ಮಾಡಬಾರದು. ನಿಮ್ಮ ಕೂಲಿಯವರ ಕೂಲಿಯನ್ನು ಮರುದಿನದ ಮುಂಜಾನೆಯವರೆಗೆ ಹಿಡಿದಿಟ್ಟುಕೊಳ್ಳಬಾರದು.


ಪಟ್ಟಣದ ಧನಿಕರು ಕ್ರೂರವಾದ ಮತ್ತು ದುಷ್ಟತ್ವದ ಕೃತ್ಯಗಳನ್ನು ಇನ್ನೂ ಮಾಡುತ್ತಿದ್ದಾರೆ. ಆ ಪಟ್ಟಣದಲ್ಲಿರುವ ಜನರು ಇನ್ನೂ ಸುಳ್ಳು ಹೇಳುತ್ತಾರೆ. ಹೌದು, ಆ ಜನರು ತಮ್ಮ ಸುಳ್ಳನ್ನು ಪ್ರದರ್ಶಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು