Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:24 - ಪರಿಶುದ್ದ ಬೈಬಲ್‌

24 ಅವರು ನಿನ್ನ ವಿರುದ್ಧವಾಗಿ ರಥಗಳಲ್ಲಿಯೂ ಅರಸರೂಢರಾಗಿಯೂ ಅಂತರಾಷ್ಟ್ರೀಯ ಸೈನ್ಯವಾಗಿ ಬರುವರು. ಅವರ ಕೈಯಲ್ಲಿ ಬರ್ಜಿ, ಗುರಾಣಿ, ಶಿರಸ್ತ್ರಾಣಗಳಿರುವವು. ಅವರು ನಿನ್ನನ್ನು ಸುತ್ತುವರಿಯುವರು. ನೀನು ನನಗೆ ಏನು ಮಾಡಿದ್ದೀ ಎಂದು ನಾನು ಹೇಳಿದಾಗ ಅವರು ತಮ್ಮ ಇಷ್ಟಪ್ರಕಾರ ನಿನ್ನನ್ನು ಶಿಕ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ರಥಗಳ ಸಂಗಡವಾಗಿಯೂ, ಬಂಡಿಗಳ ಸಂಗಡ ಜನಗಳ ಸಮೂಹದ ಸಂಗಡ, ಬಲವುಳ್ಳವರಾಗಿ ನಿನ್ನ ವಿರುದ್ಧವಾಗಿ ಬರುವರು; ಸುತ್ತಲೂ ಗುರಾಣಿಗಳನ್ನೂ, ಶಿರಸ್ತ್ರಾಣವನ್ನೂ, ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯ ತೀರಿಸುವ ಅಧಿಕಾರವನ್ನು ಕೊಡುವೆನು. ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವರು ಆಯುಧ, ರಥ, ಸರಕುಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಗಳನ್ನು ಧರಿಸಿ, ನಿನಗೆ ವಿರುದ್ಧ ಸುತ್ತುಮುತ್ತಲು ವ್ಯೂಹ ಕಟ್ಟುವರು. ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಕೊಡುವೆನು; ಅವರು ತಮ್ಮ ನ್ಯಾಯಾನುಸಾರ ತೀರ್ಪುನೀಡಿ ನಿನ್ನನ್ನು ದಂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಆಯುಧ, ರಥ, ಚಕ್ಕಡಿಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಳನ್ನು ಧರಿಸಿ ನಿನಗೆ ವಿರುದ್ಧವಾಗಿ ಸುತ್ತುಮುತ್ತಲು ವ್ಯೂಹಕಟ್ಟುವರು; ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಒಪ್ಪಿಸಲು ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸಿ ನಿನ್ನನ್ನು ದಂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವರು ರಥಗಳ ಸಂಗಡವಾಗಿಯೂ ಬಂಡಿಗಳ ಸಂಗಡವಾಗಿಯೂ ಜನಗಳ ಸಮೂಹದ ಸಂಗಡವಾಗಿಯೂ ಬಲವುಳ್ಳವರಾಗಿ ತಮ್ಮ ಆಯುಧಗಳೊಂದಿಗೆ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣವನ್ನೂ ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯತೀರ್ಪಿನ ಅಧಿಕಾರ ಕೊಡುವೆನು. ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:24
12 ತಿಳಿವುಗಳ ಹೋಲಿಕೆ  

ಅವನ ಕುದುರೆಗಳ ಗೊರಸುಗಳಿಂದ ಹೊರಟ ಧೂಳು ನಿನ್ನನ್ನು ಮುಚ್ಚಿಬಿಡುವದು. ಅವರ ರಾಹುತರ, ಚಕ್ಕಡಿಗಳ, ರಥಗಳ ಶಬ್ದದಿಂದ ನಿನ್ನ ಗೋಡೆಗಳು ನಡುಗುವವು. ಕೋಟೆಗೋಡೆಗಳು ಕೆಡವಲ್ಪಡುವದರಿಂದ ಅವರು ನಗರದೊಳಗೆ ನುಗ್ಗುವರು.


“ನೀತಿವಂತರು ಅವರನ್ನು ವ್ಯಭಿಚಾರ ಮಾಡಿದ ಮತ್ತು ಕೊಲೆ ಮಾಡಿದ ಅಪರಾಧಿಗಳೆಂದು ತೀರ್ಪು ನೀಡುವರು. ಯಾಕೆಂದರೆ, ಒಹೊಲ ಮತ್ತು ಒಹೊಲೀಬಳ ವ್ಯಭಿಚಾರವನ್ನು ಆಚರಣೆ ಮಾಡುತ್ತಾರೆ ಮತ್ತು ರಕ್ತವು ಅವರ ಕೈಗಳ ಮೇಲಿದೆ.”


ಬಳಿಕ, ಕೊಲೆಗಾರ್ತಿಯರೂ ವ್ಯಭಿಚಾರಿಣಿಯರೂ ಶಿಕ್ಷಿಸಲ್ಪಡುವಂತೆ ನಾನು ನಿನ್ನನ್ನು ದಂಡಿಸುವೆನು. ನನ್ನ ಭಯಂಕರವಾದ ಕೋಪದಿಂದ ನಿನಗೆ ಮರಣದಂಡನೆಯನ್ನು ವಿಧಿಸುವೆನು.


ಅವರು ವೇಗವಾಗಿ ಓಡುವ ಕುದುರೆಗಳ ಶಬ್ಧವನ್ನು ಕೇಳುವರು. ಅವರು ರಭಸವಾಗಿ ಚಲಿಸುವ ರಥಗಳ ಶಬ್ಧವನ್ನು ಕೇಳುವರು. ಅವರು ಚಕ್ರಗಳ ಗಡಗಡ ಶಬ್ಧವನ್ನು ಕೇಳುವರು. ತಂದೆಗಳು ತಮ್ಮತಮ್ಮ ಮಕ್ಕಳಿಗೆ ಸುರಕ್ಷಣೆಯನ್ನು ಕೊಡಲಾಗದಷ್ಟು ದುಬರ್ಲರಾಗಿರುವರು.


ದಾವೀದನು ಗಾದನಿಗೆ, “ನಾನು ನಿಜವಾಗಿಯೂ ತೊಂದರೆಗೆ ಒಳಗಾದೆ! ಆದರೆ ಯೆಹೋವನು ಕೃಪಾಪೂರ್ಣನಾಗಿದ್ದಾನೆ. ಆದ್ದರಿಂದ ಆತನು ನನ್ನನ್ನು ದಂಡಿಸಲಿ; ಆದರೆ ಅದು ಜನರಿಂದ ಬಾರದಿರಲಿ” ಎಂದು ಹೇಳಿದನು.


ಇಸ್ರೇಲ್ ಜನರಿಗೆ ಆ ಮಂತ್ರತಂತ್ರಗಳ ಗುರುತು ಅರ್ಥವಿಲ್ಲದ್ದಾಗಿದೆ. ಅವರು ಮಾಡಿದ ವಾಗ್ದಾನವು ಅವರೊಂದಿಗಿದೆ. ಆದರೆ ಯೆಹೋವನು ಅವರ ಪಾಪಗಳನ್ನು ನೆನಪಿಗೆ ತರುವನು. ಆಗ ಇಸ್ರೇಲರು ಶತ್ರುವಶವಾಗುವರು.”


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಉತ್ತರ ದಿಕ್ಕಿನಿಂದ ಒಬ್ಬ ಶತ್ರುವನ್ನು ನಾನು ತೂರಿಗೆ ವಿರುದ್ಧವಾಗಿ ಬರಮಾಡುವೆನು. ಅವನೇ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು. ಅವನು ಲೆಕ್ಕವಿಲ್ಲದಷ್ಟು ಕುದುರೆ ಸವಾರರು, ರಥಗಳು, ಕಾಲ್ಬಲವುಳ್ಳ ದೊಡ್ಡ ಸೈನ್ಯವನ್ನು ತೆಗೆದುಕೊಂಡು ಬರುವನು. ಅವನ ಸೈನಿಕರೆಲ್ಲಾ ಬೇರೆಬೇರೆ ಜನಾಂಗದವರು.


ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬಂಧಿಸಿ ಅವನನ್ನು ರಿಬ್ಲದಲ್ಲಿದ್ದ ತಮ್ಮ ರಾಜನ ಬಳಿಗೆ ಹಿಡಿದುಕೊಂಡು ಹೋದರು. ರಿಬ್ಲವು ಹಮಾತ್ ಪ್ರದೇಶದಲ್ಲಿದೆ. ರಿಬ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಬಗ್ಗೆ ತನ್ನ ತೀರ್ಪನ್ನು ಪ್ರಕಟಪಡಿಸಿದನು.


ತರುವಾಯ ಬಾಬಿಲೋನಿನ ರಾಜನು ಚಿದ್ಕೀಯನ ಕಣ್ಣುಗಳನ್ನು ಸಹ ಕೀಳಿಸಿದನು. ಅವನಿಗೆ ಕಂಚಿನ ಸರಪಳಿಗಳನ್ನು ಬಿಗಿಸಿದನು. ಆಮೇಲೆ ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಬಾಬಿಲೋನಿನಲ್ಲಿ ಚಿದ್ಕೀಯನನ್ನು ಸೆರೆಮನೆಯಲ್ಲಿ ಇಟ್ಟನು. ಚಿದ್ಕೀಯನು ಸಾಯುವವರೆಗೆ ಸೆರೆಮನೆಯಲ್ಲಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು