Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:35 - ಪರಿಶುದ್ದ ಬೈಬಲ್‌

35 “ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: ‘ಜೆರುಸಲೇಮೇ, ನೀನು ನನ್ನನ್ನು ಮರೆತುಬಿಟ್ಟೆ. ನೀನು ನನ್ನನ್ನು ತೊರೆದುಬಿಟ್ಟೆ; ಆದ್ದರಿಂದ ನೀನು ನನ್ನನ್ನು ತೊರೆದ ಸೂಳೆಯಂತೆ ಜೀವಿಸಿದ್ದಕ್ಕೆ ಶಿಕ್ಷೆ ಅನುಭವಿಸಬೇಕು. ನಿನ್ನ ನೀಚ ನಡತೆಗಾಗಿ ನೀನು ಕಷ್ಟ ಅನುಭವಿಸಬೇಕು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನನ್ನು ಬೆನ್ನಿನ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ. ‘ನೀನು ನನ್ನನ್ನು ಮರೆತು, ನನಗೆ ಬೆನ್ನುಮಾಡಿದ್ದರಿಂದ ನಿನ್ನ ಲಂಪಟತನದ ಮತ್ತು ಸೂಳೆತನದ ಫಲವನ್ನು ಅನುಭವಿಸಬೇಕು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನನ್ನು ಬೆನ್ನ ಹಿಂದಕ್ಕೆ ಎಸೆದು ಮರೆತುಬಿಟ್ಟದ್ದರಿಂದ ನಿನ್ನ ಪುಂಡಾಟದ ಮತ್ತು ಸೂಳೆತನದ ಫಲವನ್ನು ನೀನೂ ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನಿನ ಮೇಲೆ ಮರೆಮಾಡಿದ ಮೇಲೆ ನೀನು ನಿನ್ನ ದುಷ್ಕರ್ಮವನ್ನೂ ವ್ಯಭಿಚಾರದ ಪ್ರತಿಫಲವನ್ನೂ ಅನುಭವಿಸಲೇಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:35
22 ತಿಳಿವುಗಳ ಹೋಲಿಕೆ  

ಆದರೆ ನೀನು ಅನೇಕ ಪಾಪಗಳನ್ನು ಮಾಡಿರುವೆ. ನಿನಗಿಂತಲೂ ಮೊದಲು ಆಳಿದವರ ಪಾಪಗಳಿಗಿಂತ ನಿನ್ನ ಪಾಪಗಳು ಹೆಚ್ಚು ಭಯಂಕರವಾಗಿವೆ. ನೀನು ನನ್ನನ್ನು ಅನುಸರಿಸುವುದನ್ನು ಬಿಟ್ಟುಬಿಟ್ಟೆ. ನೀನು ವಿಗ್ರಹಗಳನ್ನು ಮತ್ತು ಅನ್ಯದೇವರುಗಳನ್ನು ನಿರ್ಮಿಸಿದೆ. ಇದು ನನ್ನಲ್ಲಿ ಹೆಚ್ಚು ಕೋಪವುಂಟುಮಾಡಿತು.


ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನ್ನೆ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತುಬಿಟ್ಟಿರುವಿರಿ.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.


“ಆ ಜನರು ಸಹಾಯಕೋರಿ ನನ್ನಲ್ಲಿಗೆ ಬರಬೇಕಾಗಿತ್ತು. ಆದರೆ ಅವರು ನನಗೆ ವಿಮುಖರಾದರು. ನಾನು ಮತ್ತೆಮತ್ತೆ ಅವರಿಗೆ ಬುದ್ಧಿಕಲಿಸುವ ಪ್ರಯತ್ನ ಮಾಡಿದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನಾನು ಅವರನ್ನು ತಿದ್ದುವ ಪ್ರಯತ್ನ ಮಾಡಿದೆ, ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ.


ಬೋಳುಪರ್ವತದ ಮೇಲೆ ಅಳುವ ಧ್ವನಿಯನ್ನು ನೀವು ಕೇಳಬಹುದು. ಇಸ್ರೇಲಿನ ಜನರು ಕಣ್ಣೀರು ಸುರಿಸಿ ಕರುಣೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಅವರು ತುಂಬಾ ಕೆಟ್ಟುಹೋಗಿ ತಮ್ಮ ದೇವರಾದ ಯೆಹೋವನನ್ನು ಮರೆತರು.


ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.


ನಾನು ಇಸ್ರೇಲರಿಗೆ ಆಹಾರ ಒದಗಿಸಿದೆನು. ಅವರು ಆ ಆಹಾರವನ್ನು ಉಂಡು ತಿಂದು ತೃಪ್ತರಾಗಿ ಕೊಬ್ಬೇರಿದ್ದರಿಂದ ನನ್ನನ್ನು ಮರೆತರು.


ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು. ಆದರೆ ಅದರ ನಿರ್ಮಾಣಿಕನನ್ನು ಮರೆತರು. ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಆ ಬೆಂಕಿಯು ಅರಮನೆಗಳನ್ನು ನಾಶಮಾಡುವದು.”


ಯುವತಿಯು ತನ್ನ ಆಭರಣಗಳನ್ನು ಮರೆಯುವಳೇ? ಇಲ್ಲ. ವಧುವು ಮದುವೆಯ ಉಡುಪನ್ನು ಧರಿಸಿಕೊಳ್ಳಲು ಮರೆಯುವಳೇ? ಇಲ್ಲ. ಆದರೆ ನನ್ನ ಜನರು ನನ್ನನ್ನು ಅಸಂಖ್ಯಾತ ದಿನಗಳವರೆಗೆ ಮರೆತುಬಿಟ್ಟಿದ್ದಾರೆ.


ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲವತ್ತು ದಿನಗಳಿಗೆ ಸಮನಾಗಿ, ದಿನ ಒಂದಕ್ಕೆ ಒಂದು ಸಂವತ್ಸರದ ಮೇರೆಗೆ ನಲವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸುವಿರಿ. ನನ್ನನ್ನು ತಿರಸ್ಕರಿಸುವುದೆಂದರೆ ಏನೆಂಬುದು ನಿಮಗೆ ಗೊತ್ತಾಗುತ್ತದೆ.’


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ಗತಕಾಲದಲ್ಲಿ ಇಸ್ರೇಲರು ನನ್ನನ್ನು ತ್ಯಜಿಸಿದಾಗ ಲೇವಿಯರು ನನ್ನನ್ನು ಬಿಟ್ಟುಹೋದರು. ಇಸ್ರೇಲರು ನನ್ನನ್ನು ಬಿಟ್ಟು ವಿಗ್ರಹಗಳನ್ನು ಪೂಜಿಸಿದರು. ಲೇವಿಯರು ಮಾಡಿದ ಪಾಪಕ್ಕಾಗಿ ಶಿಕ್ಷಿಸಲ್ಪಡುವರು.


ನಿನಗೆ ನಾನು ಇನ್ನು ಕರುಣೆಯನ್ನು ತೋರಿಸೆನು. ನಿನ್ನ ವಿಷಯದಲ್ಲಿ ನಾನು ದುಃಖಿಸುವದಿಲ್ಲ. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನಿನ್ನನ್ನು ಶಿಕ್ಷಿಸುವೆನು. ನೀನು ಅಂಥಾ ಭಯಂಕರ ಕೃತ್ಯಗಳನ್ನು ಮಾಡಿದ್ದೀ. ಈಗ ನಾನೇ ಯೆಹೋವನೆಂದು ನೀನು ತಿಳಿಯುವಿ.”


ಯೆಹೂದದ ಜನರು ನನ್ನ ಹೆಸರನ್ನು ಮರೆಯುವಂತೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಈ ಸುಳ್ಳು ಕನಸುಗಳ ಬಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತಂತೆಯೇ ನನ್ನ ಜನರು ಸಹ ನನ್ನನ್ನು ಮರೆಯಲೆಂದು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತು ಸುಳ್ಳುದೇವರಾದ ಬಾಳನನ್ನು ಪೂಜಿಸಿದರು.


ನಿಮ್ಮ ಗತಿ ಹೀಗಾಗುವುದು. ನನ್ನ ಯೋಜನೆಗಳಲ್ಲಿ ಇದು ನಿಮ್ಮ ಪಾತ್ರ.” ಇದು ಯೆಹೋವನ ನುಡಿ. “ಏಕೆ ಹೀಗಾಗುವದು? ಏಕೆಂದರೆ ನೀವು ನನ್ನನ್ನು ಮರೆತುಬಿಟ್ಟಿರಿ. ಸುಳ್ಳುದೇವರುಗಳನ್ನು ನಂಬಿದಿರಿ.


ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.


ಈಗಿನಿಂದ ಇಸ್ರೇಲರು ದೇವದರ್ಶನಗುಡಾರದೊಳಗೆ ಅತಿಕ್ರಮಿಸಿ ಬರಕೂಡದು; ಬಂದರೆ ತಮ್ಮ ಮೇಲೆ ದಂಡನೆಯನ್ನು ಬರಮಾಡಿಕೊಂಡು ಸಾಯುವರು.


ನೀನು ಇಸ್ರೇಲರಿಗೆ ಹೀಗೆ ಹೇಳಬೇಕು: ದೇವದೂಷಣೆ ಮಾಡಿದವನಿಗೆ ಶಿಕ್ಷೆಯಾಗಬೇಕು.


ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.


“‘ನಿಮ್ಮ ಅಪನಂಬಿಗಸ್ತಿಕೆಯ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನೀವು ಸಾಯುವತನಕ ನಲವತ್ತು ವರ್ಷ ಮರುಭೂಮಿಯಲ್ಲಿ ಅಲೆದಾಡುವರು.


ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು.


“ನಾನು ನಿಮ್ಮನ್ನು ಅನೇಕ ಅಮೂಲ್ಯವಸ್ತುಗಳಿಂದ ಕೂಡಿದ ಫಲವತ್ತಾದ ಭೂಮಿಗೆ ಕರೆದುತಂದೆ. ಅಲ್ಲಿ ಬೆಳೆಯುವ ಫಲಗಳನ್ನು ತಿನ್ನಲಿ ಎಂಬ ಉದ್ದೇಶದಿಂದ ನಾನು ಕರೆದುತಂದೆ. ಆದರೆ ನೀವು ಬಂದು ನನ್ನ ಭೂಮಿಯನ್ನು ಹೊಲಸು ಮಾಡಿದಿರಿ. ನಾನು ಆ ಭೂಮಿಯನ್ನು ನಿಮಗೆ ಕೊಟ್ಟೆ, ಆದರೆ ನೀವು ಅದನ್ನು ಕೆಟ್ಟ ಸ್ಥಳವನ್ನಾಗಿ ಮಾಡಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು