Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:45 - ಪರಿಶುದ್ದ ಬೈಬಲ್‌

45 “ನೀತಿವಂತರು ಅವರನ್ನು ವ್ಯಭಿಚಾರ ಮಾಡಿದ ಮತ್ತು ಕೊಲೆ ಮಾಡಿದ ಅಪರಾಧಿಗಳೆಂದು ತೀರ್ಪು ನೀಡುವರು. ಯಾಕೆಂದರೆ, ಒಹೊಲ ಮತ್ತು ಒಹೊಲೀಬಳ ವ್ಯಭಿಚಾರವನ್ನು ಆಚರಣೆ ಮಾಡುತ್ತಾರೆ ಮತ್ತು ರಕ್ತವು ಅವರ ಕೈಗಳ ಮೇಲಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯರಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಹರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಸಿಕ್ತವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ಅವರಿಗೆ ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ನೀತಿಯುಳ್ಳ ನ್ಯಾಯಾಧೀಶರು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು. ಏಕೆಂದರೆ ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:45
17 ತಿಳಿವುಗಳ ಹೋಲಿಕೆ  

ನಾನು ಪ್ರವಾದಿಗಳ ಮೂಲಕ ಜನರಿಗೆ ಕಟ್ಟಳೆಗಳನ್ನು ವಿಧಿಸಿದೆನು. ನನ್ನ ಅಪ್ಪಣೆಯ ಮೇರೆಗೆ ಜನರು ಕೊಲ್ಲಲ್ಪಟ್ಟರು.


“ಒಬ್ಬನು ನೆರೆಯವನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಹೊಂದಿದರೆ, ಆಗ ಅವರಿಬ್ಬರೂ ವ್ಯಭಿಚಾರ ಮಾಡಿದ ದೋಷಿಗಳಾಗಿದ್ದಾರೆ. ಆದ್ದರಿಂದ ಅವರಿಬ್ಬರಿಗೂ ಅಂದರೆ ಗಂಡಸಿಗೂ ಹೆಂಗಸಿಗೂ ಮರಣಶಿಕ್ಷೆಯಾಗಬೇಕು!


ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”


ಯೆಹೋವನೇ, ಸರ್ವಶಕ್ತನಾದ ದೇವರು. ಆತನು ಹೀಗೆನ್ನುತ್ತಾನೆ: “ನಾನು ಶಿಕ್ಷಿಸುವದಿಲ್ಲವೆಂದು ಆ ಜನರು ಹೇಳಿದರು. ಆದ್ದರಿಂದ ಯೆರೆಮೀಯನೇ, ನಾನು ನಿನಗೆ ಹೇಳುವ ಮಾತುಗಳು ಬೆಂಕಿಯಂತೆ ಇರುವವು. ಅವರು ಸೌದೆಯಂತೆ ಆಗುವರು. ಬೆಂಕಿಯು ಎಲ್ಲಾ ಸೌದೆಯನ್ನು ಸುಟ್ಟುಬಿಡುವದು.”


“ಯಾಜಕನ ಮಗಳು ವೇಶ್ಯೆಯಾಗಿದ್ದರೆ, ಅವಳು ತನ್ನ ಗೌರವವನ್ನು ಹಾಳುಮಾಡಿಕೊಂಡವಳೂ ತನ್ನ ತಂದೆಗೆ ಅವಮಾನವನ್ನು ಉಂಟುಮಾಡಿದವಳೂ ಆಗಿದ್ದಾಳೆ. ಅವಳನ್ನು ಸುಟ್ಟುಹಾಕಬೇಕು.


ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನ ಮಾತುಗಳಿವು. ಈ ನಗರವು ಕೊಲೆಗಾರರಿಂದ ತುಂಬಿದೆ. ಆದ್ದರಿಂದ ಆಕೆಯ ಶಿಕ್ಷೆಯ ದಿನವು ಬಂದಿದೆ. ಆಕೆ ತನಗೋಸ್ಕರ ಹೊಲಸು ವಿಗ್ರಹಗಳನ್ನು ಮಾಡಿ ತನ್ನನ್ನು ಹೊಲಸು ಮಾಡಿಕೊಂಡಿದ್ದಾಳೆ.


ಅವರು ನಿನ್ನ ವಿರುದ್ಧವಾಗಿ ರಥಗಳಲ್ಲಿಯೂ ಅರಸರೂಢರಾಗಿಯೂ ಅಂತರಾಷ್ಟ್ರೀಯ ಸೈನ್ಯವಾಗಿ ಬರುವರು. ಅವರ ಕೈಯಲ್ಲಿ ಬರ್ಜಿ, ಗುರಾಣಿ, ಶಿರಸ್ತ್ರಾಣಗಳಿರುವವು. ಅವರು ನಿನ್ನನ್ನು ಸುತ್ತುವರಿಯುವರು. ನೀನು ನನಗೆ ಏನು ಮಾಡಿದ್ದೀ ಎಂದು ನಾನು ಹೇಳಿದಾಗ ಅವರು ತಮ್ಮ ಇಷ್ಟಪ್ರಕಾರ ನಿನ್ನನ್ನು ಶಿಕ್ಷಿಸುವರು.


ಆದರೆ ಅವರು ಒಬ್ಬ ವೇಶ್ಯೆಯ ಬಳಿಗೆ ಹೋಗುವಂತೆಯೇ ಅವರ ಬಳಿಗೆ ಹೋದರು. ಹೌದು ಒಹೊಲ ಮತ್ತು ಒಹೊಲೀಬ ಎಂಬ ಕಾಮುಕ ಸ್ತ್ರೀಯರ ಬಳಿಗೆ ಅವರು ತಿರುಗಿ ಮತ್ತೆಮತ್ತೆ ಹೋದರು.


“ನಿಮ್ಮ ತಾಯಿಯೊಂದಿಗೆ ವಾದಿಸಿರಿ. ಯಾಕೆಂದರೆ ಆಕೆ ನನ್ನ ಹೆಂಡತಿಯಲ್ಲ. ನಾನು ಆಕೆಯ ಗಂಡನಲ್ಲ. ವೇಶ್ಯೆಯ ಹಾಗೆ ಆಕೆ ವರ್ತಿಸುವದನ್ನು ನಿಲ್ಲಿಸು ಎಂದು ಹೇಳಿರಿ. ಆಕೆಯ ಸ್ತನಗಳ ಮಧ್ಯದಿಂದ ಆಕೆಯ ಪ್ರಿಯತಮರನ್ನು ತೆಗೆದುಹಾಕಲು ಹೇಳಿರಿ.


ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’”


ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.


ಆದ್ದರಿಂದ ಆ ಪ್ರವಾದಿಗಳು ಮತ್ತು ಯಾಜಕರು ಕುರುಡರಂತೆ ಬೀದಿಗಳಲ್ಲಿ ಅಲೆದಾಡಿದರು. ಅವರು ರಕ್ತದಿಂದ ಹೊಲಸಾಗಿದ್ದರು. ಅವರು ಹೊಲಸಾಗಿದ್ದದರಿಂದ ಅವರ ಬಟ್ಟೆಯನ್ನು ಮುಟ್ಟುವುದಕ್ಕೂ ಯಾರಿಗೂ ಸಾಧ್ಯವಿರಲಿಲ್ಲ.


ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಯಾಕೆಂದರೆ ಆಕೆ ಸುರಿಸಿದ ರಕ್ತದ ಕಲೆಗಳು ಇನ್ನೂ ಇವೆ. ಆಕೆಯು ಆ ರಕ್ತವನ್ನು ನೆಲದ ಮೇಲೆ ಸುರಿಯದೆ ಬಂಡೆಯ ಮೇಲೆ ಸುರಿದು ಅದಕ್ಕೆ ಮಣ್ಣನ್ನೂ ಮುಚ್ಚಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು