47 ಆ ಬಳಿಕ ಜನರ ಗುಂಪು ಅವರ ಮೇಲೆ ಕಲ್ಲೆಸೆದು ಅವರನ್ನು ಕೊಲ್ಲುವುದು. ಆಮೇಲೆ ತಮ್ಮ ಖಡ್ಗಗಳಿಂದ ಅವರನ್ನು ತುಂಡುತುಂಡು ಮಾಡುವರು. ಅವರ ಮಕ್ಕಳನ್ನು ಕೊಂದು ಅವರ ಮನೆಗಳನ್ನು ಸುಟ್ಟುಹಾಕುವರು.
ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.
“‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರ ಪಟ್ಟಣವಾದ ಜೆರುಸಲೇಮಿಗೆ ಆಪತ್ತು ಬರುವುದು. ಕೊಲೆಗಾರರ ನಗರಕ್ಕೆ ಕೇಡಾಗುವದು. ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಆ ಕಿಲುಬಿನ ಕಲೆಯನ್ನು ತೆಗೆಯಲಾಗುವುದೇ ಇಲ್ಲ. ಆ ಹಂಡೆಯು ಅಶುದ್ಧವಾಗಿರುವುದರಿಂದ ಅದರೊಳಗಿರುವ ಮಾಂಸವನ್ನೆಲ್ಲಾ ಹೊರಗೆ ತೆಗೆದುಬಿಡು. ಆ ಮಾಂಸವನ್ನು ನೀನಾಗಲಿ ಯಾಜಕರಾಗಲಿ ತಿನ್ನಕೂಡದು.
ಆಗ ಅವರು ನಿನ್ನನ್ನು ಎಷ್ಟು ದ್ವೇಷಿಸುವರೆಂದು ನಿನಗೆ ತೋರಿಸುವರು. ನೀನು ದುಡಿದವುಗಳನ್ನೆಲ್ಲ ಅವರು ಕಿತ್ತುಕೊಳ್ಳುವರು. ನಿನ್ನನ್ನು ಬೆತ್ತಲೆಮಾಡಿ ಬಿಟ್ಟುಬಿಡುವರು. ಜನರು ನಿನ್ನ ಪಾಪಗಳನ್ನು ಪರಿಪೂರ್ಣವಾಗಿ ನೋಡುವರು. ನೀನು ಸೂಳೆಯಂತೆ ವರ್ತಿಸಿದ್ದನ್ನು ಅವರು ನೋಡುವರು. ನಿನ್ನ ನೀಚತನವೂ ನಿನ್ನ ಸೂಳೆತನವೂ
ನಾನು ನಿನ್ನ ವಿರುದ್ಧವಾಗಿ ನನ್ನ ಈರ್ಷೆಯ ಕೋಪವನ್ನು ನಿನ್ನ ಮೇಲೆ ಸುರಿಸುವೆನು. ಅವರಿಗೆ ಸಿಟ್ಟು ಬಂದು ನಿನ್ನನ್ನು ಹಿಂಸಿಸುವರು. ನಿನ್ನ ಕಿವಿ ಮೂಗುಗಳನ್ನು ಕತ್ತರಿಸಿಹಾಕುವರು. ತಮ್ಮ ಖಡ್ಗದಿಂದ ನಿನ್ನನ್ನು ಸಂಹರಿಸುವರು. ಆಮೇಲೆ ನಿನ್ನ ಮಕ್ಕಳನ್ನು ತೆಗೆದುಕೊಳ್ಳುವರು ಮತ್ತು ನಿನ್ನಲ್ಲಿ ಉಳಿದಿರುವುದನ್ನೆಲ್ಲ ಸುಟ್ಟುಹಾಕುವರು.
ನೆಬೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು.
ನೀವು ಆ ಪಟ್ಟಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಪಟ್ಟಣದ ಮಧ್ಯದಲ್ಲಿ ತಂದುಹಾಕಿ ಅದಕ್ಕೆ ಬೆಂಕಿಹೊತ್ತಿಸಿ ಇಡೀ ಪಟ್ಟಣವನ್ನು ಬೆಂಕಿಯಿಂದ ಸುಡಬೇಕು. ಇದು ದೇವರಾದ ಯೆಹೋವನಿಗೆ ಸರ್ವಾಂಗಹೋಮವಾಗುವುದು. ಆ ಪಟ್ಟಣವು ಕಲ್ಲುಗಳ ರಾಶಿಯಾಗಿ ಪರಿಣಮಿಸುವುದು ಮತ್ತು ಯಾರೂ ಆ ಪಟ್ಟಣವನ್ನು ಮತ್ತೆ ಕಟ್ಟಬಾರದು.
“ಒಬ್ಬನು ನೆರೆಯವನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಹೊಂದಿದರೆ, ಆಗ ಅವರಿಬ್ಬರೂ ವ್ಯಭಿಚಾರ ಮಾಡಿದ ದೋಷಿಗಳಾಗಿದ್ದಾರೆ. ಆದ್ದರಿಂದ ಅವರಿಬ್ಬರಿಗೂ ಅಂದರೆ ಗಂಡಸಿಗೂ ಹೆಂಗಸಿಗೂ ಮರಣಶಿಕ್ಷೆಯಾಗಬೇಕು!
ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.