Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:9 - ಪರಿಶುದ್ದ ಬೈಬಲ್‌

9 ಆಕೆಯ ಪ್ರಿಯತಮರಿಗೆ ನಾನು ಆಕೆಯನ್ನು ಬಿಟ್ಟುಕೊಟ್ಟೆನು. ಆಕೆಗೆ ಅಶ್ಶೂರದವರು ಬೇಕಾಯಿತು. ನಾನು ಆಕೆಯನ್ನು ಅವರಿಗೆ ಬಿಟ್ಟುಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಆದಕಾರಣ ನಾನು ಅವಳನ್ನು ಅವಳ ಪ್ರಿಯರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದಕಾರಣ ನಾನು ಅವಳನ್ನು ಅವಳ ಮಿಂಡರ ಕೈಗೆ ಅಂದರೆ, ಅವಳು ಮೋಹಿಸಿದ ಅಸ್ಸೀರಿಯರ ಕೈಗೆ ಒಪ್ಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದಕಾರಣ ನಾನು ಅವಳನ್ನು ಅವಳ ವಿುಂಡರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆದ್ದರಿಂದ ನಾನು ಅವಳನ್ನು ಮೋಹಿಸಿದ ಅವಳ ಪ್ರಿಯರ ಕೈಗೆ ಅಸ್ಸೀರಿಯರ ಕೈಗೆ ಒಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:9
13 ತಿಳಿವುಗಳ ಹೋಲಿಕೆ  

“ದೇವರ ಕಡೆಗೆ ಹಿಂದಿರುಗಲು ಇಸ್ರೇಲರಿಗೆ ಮನಸ್ಸಿಲ್ಲ. ಆದ್ದರಿಂದ ಅವರು ಈಜಿಪ್ಟಿಗೆ ಹೋಗುವರು. ಅಶ್ಶೂರದ ಅರಸನು ಅವರಿಗೆ ಅರಸನಾಗುವನು.


ಯೆಹೋವನು ಇಸ್ರೇಲನ್ನು ತನ್ನ ದೃಷ್ಟಿಯಿಂದ ದೂರ ತಳ್ಳುವವರೆಗೆ, ಅವರು ಈ ಪಾಪಗಳನ್ನು ಮಾಡುವುದನ್ನು ನಿಲ್ಲಿಸಲೇ ಇಲ್ಲ. ಇದು ಸಂಭವಿಸುತ್ತದೆಂದು ಯೆಹೋವನು ಹೇಳಿದ್ದನು! ಆತನು ಜನರಿಗೆ ಇದನ್ನು ಮುಂಚೆಯೇ ತಿಳಿಸಲು ತನ್ನ ಪ್ರವಾದಿಗಳನ್ನು ಕಳುಹಿಸಿದ್ದನು. ಆದ್ದರಿಂದಲೇ ಇಸ್ರೇಲರನ್ನು ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಹಿಡಿದು ಒಯ್ದರು. ಅವರು ಇಂದಿಗೂ ಅಲ್ಲಿಯೇ ಇದ್ದಾರೆ.


ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.


ನೀನು ನೋಡಿದ ಆ ಮೃಗ ಮತ್ತು ಅದರ ಹತ್ತು ಕೊಂಬುಗಳು (ರಾಜರುಗಳು) ಆ ವೇಶ್ಯೆಯನ್ನು ದ್ವೇಷಿಸುತ್ತವೆ. ಅವಳಲ್ಲಿರುವುದನ್ನೆಲ್ಲ ಅವರು ಕಿತ್ತುಕೊಂಡು, ಅವಳನ್ನು ನಗ್ನಾವಸ್ಥೆಯಲ್ಲಿ ಬಿಡುತ್ತಾರೆ. ಅವರು ಅವಳ ದೇಹವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ.


ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.


ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.


ಈ ಕಾರಣದಿಂದ, ನೀನು ಸುಖ ಕೊಟ್ಟಿರುವ ನಿನ್ನ ಎಲ್ಲಾ ಪ್ರಿಯರನ್ನು ಅಂದರೆ ಈಗಿನ ಪ್ರಿಯರನ್ನು ಮತ್ತು ನೀನು ತಿರಸ್ಕರಿಸಿರುವ ಹಿಂದಿನ ಪ್ರಿಯರನ್ನೂ ಒಟ್ಟಾಗಿ ಸೇರಿಸಿ, ನಿನ್ನ ಬೆತ್ತಲೆತನವನ್ನು ಅವರು ನೋಡುವಂತೆ ಮಾಡುವೆನು. ಅವರು ನಿನ್ನನ್ನು ಪೂರ್ತಿಯಾಗಿ ನೋಡುವರು.


“ತಾನು ಅಪನಂಬಿಗಸ್ತಳೆಂದು ಎಲ್ಲರೂ ತನ್ನನ್ನು ಗುರುತಿಸುವಂತೆ ಒಹೊಲೀಬಳು ಮಾಡಿದಳು. ಆಕೆಯು ತನ್ನ ನಗ್ನ ಶರೀರವನ್ನು ತೋರಿಸಿದಳು. ಆದ್ದರಿಂದ ಅವಳ ಅಕ್ಕ ನನಗೆ ಹೇಗೆ ಅಸಹ್ಯವಾದಳೋ ಅದೇ ರೀತಿ ಈಕೆಯೂ ನನಗೆ ಅಸಹ್ಯವಾದಳು. ನನಗೆ ಆಕೆಯ ಅಕ್ಕನ ಮೇಲಿದ್ದ ಅನುರಾಗ ಹೇಗೆ ತೊಲಗಿಹೋಯಿತೋ ಹಾಗೆಯೇ ಈಕೆಯ ಮೇಲಿನ ಅನುರಾಗವೂ ತೊಲಗಿಹೋಯಿತು.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ಓಹೊಲೀಬಳೇ, ನಿನ್ನ ಪ್ರಿಯತಮರಲ್ಲಿ ಕೆಲವರು ನಿನಗೆ ಅಸಹ್ಯವಾಗಿದ್ದಾರೆ. ಆದರೆ ನಾನು ಆ ಪ್ರಿಯತಮರನ್ನು ಇಲ್ಲಿಗೆ ಕರೆದುಕೊಂಡು ಬರುವೆ. ಅವರು ನಿನ್ನನ್ನು ಸುತ್ತುವರಿಯುವರು.


ಇಸ್ರೇಲ್ ಎಂಬಾಕೆಯು ನನಗೆ ವಿಶ್ವಾಸದ್ರೋಹ ಮಾಡಿದ್ದಳು. ನಾನು ಏಕೆ ಹೊರಗೆ ಹಾಕಿದೆ ಎಂಬುದು ಅವಳಿಗೆ ಗೊತ್ತಿತ್ತು. ಅವಳ ಜಾರತನ ಎಂಬ ಪಾಪದ ಬಗ್ಗೆ ನನಗೆ ತಿಳಿದಿದೆ ಎಂದು ಇಸ್ರೇಲಳಿಗೆ ಗೊತ್ತಾಗಿತ್ತು. ಆದರೆ ಅದರಿಂದ ಅವಳ ವಂಚಕಳಾದ ಸೋದರಿಗೆ ಭಯವಾಗಲಿಲ್ಲ. ಯೆಹೂದ ಭಯಪಡಲಿಲ್ಲ. ಆಕೆಯು ಸಹ ವೇಶ್ಯೆಯರಂತೆ ವರ್ತಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು