Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:10 - ಪರಿಶುದ್ದ ಬೈಬಲ್‌

10 ಅವನ ಕುದುರೆಗಳ ಗೊರಸುಗಳಿಂದ ಹೊರಟ ಧೂಳು ನಿನ್ನನ್ನು ಮುಚ್ಚಿಬಿಡುವದು. ಅವರ ರಾಹುತರ, ಚಕ್ಕಡಿಗಳ, ರಥಗಳ ಶಬ್ದದಿಂದ ನಿನ್ನ ಗೋಡೆಗಳು ನಡುಗುವವು. ಕೋಟೆಗೋಡೆಗಳು ಕೆಡವಲ್ಪಡುವದರಿಂದ ಅವರು ನಗರದೊಳಗೆ ನುಗ್ಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನ ಲೆಕ್ಕವಿಲ್ಲದ ಕುದುರೆಗಳಿಂದ ಏಳುವ ಧೂಳಿನಿಂದ ನಿನ್ನನ್ನು ಮುಸುಕುವನು; ಒಡಕು ಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನ ಲೆಕ್ಕವಿಲ್ಲದ ಕುದುರೆಗಳಿಂದೆದ್ದ ಧೂಳು ನಿನ್ನನ್ನು ಮುಸುಕುವುದು; ಒಡಕು ಬಿದ್ದ ಕೋಟೆಯೊಳಗೆ ಶತ್ರು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಸರಕುಗಾಡಿ, ರಥ, ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಅದರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನ ಲೆಕ್ಕವಿಲ್ಲದ ಕುದುರೆಗಳಿಂದೆದ್ದ ದೂಳು ನಿನ್ನನ್ನು ಮುಸುಕುವದು; ಒಡಕುಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಲುಗಳೊಳಗೆ ನುಗ್ಗುವಾಗ ರಾಹುತ, ಚಕ್ಕಡಿಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಸುಕುವದು, ಒಡಕು ಬಿದ್ದ ಕೋಟೆಯೊಳಗೆ ಶತ್ರುಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲುಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:10
11 ತಿಳಿವುಗಳ ಹೋಲಿಕೆ  

“‘ನಿನ್ನ ವ್ಯಾಪಾರಿಗಳನ್ನು ನೀನು ಬಹುದೂರ ಕಳುಹಿಸುವೆ. ಆ ಸ್ಥಳಗಳು ನಿನ್ನ ಹಡಗಿನ ನಾವಿಕನ ಕೂಗಾಟವನ್ನು ಕೇಳಿ ಭಯದಿಂದ ತತ್ತರಿಸುವವು.


ಒಡೆಯನಾದ ಯೆಹೋವನು ತೂರಿಗೆ ಹೇಳುವುದೇನೆಂದರೆ, “ಭೂಮದ್ಯ ಸಮುದ್ರ ಕರಾವಳಿಯಲ್ಲಿರುವ ದೇಶದವರು ನೀನು ಕೆಳಗೆ ಬೀಳುವ ಶಬ್ದ ಕೇಳಿ ನಡುಗುವರು. ಅದು ನಿನ್ನ ಜನರು ಗಾಯಗೊಂಡು ಸಾಯುವಾಗ ಆಗುವದು.


ಅವರು ವೇಗವಾಗಿ ಓಡುವ ಕುದುರೆಗಳ ಶಬ್ಧವನ್ನು ಕೇಳುವರು. ಅವರು ರಭಸವಾಗಿ ಚಲಿಸುವ ರಥಗಳ ಶಬ್ಧವನ್ನು ಕೇಳುವರು. ಅವರು ಚಕ್ರಗಳ ಗಡಗಡ ಶಬ್ಧವನ್ನು ಕೇಳುವರು. ತಂದೆಗಳು ತಮ್ಮತಮ್ಮ ಮಕ್ಕಳಿಗೆ ಸುರಕ್ಷಣೆಯನ್ನು ಕೊಡಲಾಗದಷ್ಟು ದುಬರ್ಲರಾಗಿರುವರು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಉತ್ತರ ದಿಕ್ಕಿನಿಂದ ಒಬ್ಬ ಶತ್ರುವನ್ನು ನಾನು ತೂರಿಗೆ ವಿರುದ್ಧವಾಗಿ ಬರಮಾಡುವೆನು. ಅವನೇ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು. ಅವನು ಲೆಕ್ಕವಿಲ್ಲದಷ್ಟು ಕುದುರೆ ಸವಾರರು, ರಥಗಳು, ಕಾಲ್ಬಲವುಳ್ಳ ದೊಡ್ಡ ಸೈನ್ಯವನ್ನು ತೆಗೆದುಕೊಂಡು ಬರುವನು. ಅವನ ಸೈನಿಕರೆಲ್ಲಾ ಬೇರೆಬೇರೆ ಜನಾಂಗದವರು.


ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. ಇದು ನಮಗೆ ತುಂಬ ಅಪಾಯಕಾರಿಯಾಗಿದೆ; ನಾವು ಹಾಳಾಗಿಹೋದೆವು.


ಯಾಜಕರು ತುತ್ತೂರಿಗಳನ್ನು ಊದಿದಾಗ ಜನರು ಆರ್ಭಟಿಸತೊಡಗಿದರು. ಆಗ ಗೋಡೆಗಳು ಬಿದ್ದವು; ಜನರು ನೇರವಾಗಿ ನಗರದೊಳಗೆ ನುಗ್ಗಿದರು. ಹೀಗೆ ಇಸ್ರೇಲರು ನಗರವನ್ನು ಸ್ವಾಧೀನಪಡಿಸಿಕೊಂಡರು.


ಯಾಜಕರ ತುತ್ತೂರಿ ಧ್ವನಿಯನ್ನು ಕೇಳಿದಾಗ ಜನರು ಆರ್ಭಟಿಸಬೇಕು. ಆಗ ನಗರದ ಗೋಡೆಗಳು ಬೀಳುವವು; ಆಗ ನೀವು ನೇರವಾಗಿ ನಗರದೊಳಗೆ ಹೋಗಿರಿ” ಅಂದನು.


ಆಗ ಬಾಬಿಲೋನಿನ ಎಲ್ಲಾ ರಾಜ್ಯಾಧಿಕಾರಿಗಳು ಜೆರುಸಲೇಮ್ ನಗರವನ್ನು ಪ್ರವೇಶಿಸಿದರು. ಅವರು ಒಳಗೆ ಬಂದು ಮಧ್ಯ ದ್ವಾರದಲ್ಲಿ ಕುಳಿತುಕೊಂಡರು. ಅವರು ಯಾರೆಂದರೆ: ಸಮ್ಗರ್ ನೆಬೋದದ ಅಧಿಪತಿಯಾದ ನೇರ್ಗಲ್ ಸರೆಚರ್; ಇನ್ನೊಬ್ಬ ದೊಡ್ಡ ಅಧಿಕಾರಿಯಾದ ಸೆರ್ಸೆಕೀಮ್ ಮತ್ತು ಬೇರೆಬೇರೆ ದೊಡ್ಡ ಅಧಿಕಾರಿಗಳು ಕೂಡ ಅಲ್ಲಿದ್ದರು.


ಅವರು ನಿನ್ನ ವಿರುದ್ಧವಾಗಿ ರಥಗಳಲ್ಲಿಯೂ ಅರಸರೂಢರಾಗಿಯೂ ಅಂತರಾಷ್ಟ್ರೀಯ ಸೈನ್ಯವಾಗಿ ಬರುವರು. ಅವರ ಕೈಯಲ್ಲಿ ಬರ್ಜಿ, ಗುರಾಣಿ, ಶಿರಸ್ತ್ರಾಣಗಳಿರುವವು. ಅವರು ನಿನ್ನನ್ನು ಸುತ್ತುವರಿಯುವರು. ನೀನು ನನಗೆ ಏನು ಮಾಡಿದ್ದೀ ಎಂದು ನಾನು ಹೇಳಿದಾಗ ಅವರು ತಮ್ಮ ಇಷ್ಟಪ್ರಕಾರ ನಿನ್ನನ್ನು ಶಿಕ್ಷಿಸುವರು.


ಅವನು ಮರದ ತೊಲೆಗಳನ್ನು ತಂದು ನಿನ್ನ ಗೋಡೆಗಳನ್ನು ಕೆಡವಿಬಿಡುವನು. ಗುದ್ದಲಿಗಳಿಂದ ನಿನ್ನ ಬುರುಜುಗಳನ್ನು ಕೆಡವಿಹಾಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು