Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:12 - ಪರಿಶುದ್ದ ಬೈಬಲ್‌

12 ನೆಬೂಕದ್ನೆಚ್ಚರನ ಸೈನ್ಯವು ನಿನ್ನ ಐಶ್ವರ್ಯವನ್ನು ದೋಚಿಕೊಳ್ಳುವದು. ನೀನು ಮಾರಬೇಕೆಂದಿದ್ದ ವಸ್ತುಗಳನ್ನು ಅವರು ದೋಚಿಕೊಳ್ಳುವರು. ನಿನ್ನ ಗೋಡೆಗಳನ್ನು ಒಡೆದು ಅಂದವಾದ ನಿನ್ನ ಮನೆಗಳನ್ನು ಹಾಳು ಮಾಡುವರು. ನಿನ್ನ ಮರದಿಂದ ಮತ್ತು ಕಲ್ಲುಗಳಿಂದ ಮಾಡಿದ ಮನೆಗಳನ್ನು ಕಸದಂತೆ ಸಮುದ್ರಕ್ಕೆ ಎಸೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ವಿನೋದಭವನಗಳನ್ನು ಕೆಡವಿ, ನಿನ್ನ ಕಲ್ಲುಮರಮಣ್ಣುಗಳನ್ನು ಸಮುದ್ರದ ಪಾಲುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು ನಿನ್ನ ಸರಕುಗಳನ್ನು ಕೊಳ್ಳೆಹೊಡೆದು ನಿನ್ನ ಗೋಡೆಗಳನ್ನು ಉರುಳಿಸಿ ನಿನ್ನ ವಿನೋದಭವನಗಳನ್ನು ಕಿತ್ತುಹಾಕಿ ನಿನ್ನ ಕಲ್ಲುಮರಮಣ್ಣುಗಳನ್ನು ಸಮುದ್ರದ ಪಾಲುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಒಡೆದು, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ ನಿನ್ನ ಮರಗಳನ್ನೂ ಧೂಳನ್ನೂ ನೀರಿನಲ್ಲಿ ಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:12
19 ತಿಳಿವುಗಳ ಹೋಲಿಕೆ  

ತೂರ್ ಪಟ್ಟಣವು ಅನೇಕ ಗಣ್ಯವ್ಯಕ್ತಿಗಳನ್ನು ಕೊಟ್ಟಿರುತ್ತದೆ. ಅಲ್ಲಿಯ ವರ್ತಕರಿಗೆ ಪ್ರಪಂಚದ ಎಲ್ಲಾ ಕಡೆಯೂ ಗೌರವವಿದೆ. ಆದ್ದರಿಂದ ಇಂಥ ತೂರ್ ವಿರುದ್ಧ ಯೋಜನೆ ಮಾಡಿದವರಾರು?


ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.


ಹಿಜ್ಕೀಯನಿಗೆ ಬೇಕಾದಷ್ಟು ಧನೈಶ್ವರ್ಯಗಳಿದ್ದವು. ಅವನು ಬೆಳ್ಳಿಬಂಗಾರಗಳನ್ನೂ ಸುಗಂಧವಸ್ತುಗಳನ್ನೂ ಗುರಾಣಿಗಳನ್ನೂ ಬೆಲೆಬಾಳುವ ಆಭರಣಗಳನ್ನೂ ಇಡಲು ಸ್ಥಳವನ್ನು ಏರ್ಪಡಿಸಿದನು.


ನಾನು ಇತರ ಜನಾಂಗಗಳನ್ನು ಬಿರುಗಾಳಿಯಂತೆ ಅವರ ಬಳಿಗೆ ಕಳುಹಿಸುವೆನು. ಆ ರಾಷ್ಟ್ರಗಳನ್ನು ಅವರು ತಿಳಿದಿರಲಿಲ್ಲ. ಆದರೆ ಆ ದೇಶಗಳವರು ಇವರ ದೇಶವನ್ನು ದಾಟಿಹೋಗುವಾಗ ಆ ಸುಂದರವಾದ ದೇಶವು ನಾಶವಾಗುವದು.”


ನಿನೆವೆಯನ್ನು ನಾಶಮಾಡುವ ಸೈನಿಕರೇ, ಬೆಳ್ಳಿಬಂಗಾರಗಳನ್ನು ತೆಗೆದುಕೊಳ್ಳಿರಿ. ತೆಗೆದುಕೊಳ್ಳಲು ಎಷ್ಟೋ ವಸ್ತುಗಳಿವೆ. ಎಷ್ಟೋ ನಿಕ್ಷೇಪಗಳಿವೆ.


ಇಸ್ರೇಲ್ ತನ್ನ ಸಹೋದರರ ಮಧ್ಯದಲ್ಲಿ ಬೆಳೆಯುವನು. ಒಂದು ಬಲವಾದ ಪೂರ್ವದಿಕ್ಕಿನ ಗಾಳಿಯು ಬರುವದು. ಯೆಹೋವನ ಗಾಳಿಯು ಮರುಭೂಮಿಯಿಂದ ಬೀಸುವದು. ಅವನ ನೀರಿನ ಒರತೆಯು ಒಣಗಿಹೋಗುವದು, ಆ ಗಾಳಿಯು ಇಸ್ರೇಲರ ಐಶ್ವರ್ಯವನ್ನೆಲ್ಲಾ ಎತ್ತಿಕೊಂಡು ಹೋಗಿಬಿಡುವದು.


ಅವನು ಅವರ ವಿಗ್ರಹಗಳನ್ನು ತೆಗೆದುಕೊಳ್ಳುವನು. ಅವನು ಅವರ ಲೋಹದ ಪ್ರತಿಮೆಗಳನ್ನು ಮತ್ತು ಅವುಗಳ ಬೆಲೆಬಾಳುವ ಬೆಳ್ಳಿ ಮತ್ತು ಬಂಗಾರದ ವಸ್ತುಗಳನ್ನು ತೆಗೆದುಕೊಳ್ಳುವನು. ಆ ವಸ್ತುಗಳನ್ನೆಲ್ಲಾ ಈಜಿಪ್ಟಿಗೆ ತೆಗೆದುಕೊಂಡು ಹೋಗುವನು. ಆಮೇಲೆ ಕೆಲವು ವರ್ಷಗಳವರೆಗೆ ಅವನು ಉತ್ತರದ ರಾಜನಿಗೆ ಕಿರುಕುಳ ಕೊಡುವದಿಲ್ಲ.


ನಿನ್ನ ಘನತೆಯನ್ನು ಕೆಡಿಸಿಬಿಡುವರು. ಸಮಾಧಿಗೆ ನಿನ್ನನ್ನು ತರುವರು. ಸಮುದ್ರದಲ್ಲಿ ಸತ್ತ ನಾವಿಕನ ಸ್ಥಿತಿಯು ನಿನ್ನದಾಗುವದು.


ಬೆಸ್ತರು ತಮ್ಮ ಬಲೆಗಳನ್ನು ಹರಡಿ ಒಣಗಿಸುವ ಸ್ಥಳವನ್ನಾಗಿ ಮಾಡುವೆನು. ಇದು ನನ್ನ ನುಡಿ.” ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಸೈನಿಕರು ಯುದ್ಧದ ಸಮಯದಲ್ಲಿ ಬೆಲೆಬಾಳುವ ವಸ್ತುವನ್ನು ಕೊಳ್ಳೆ ಮಾಡುವಂತೆ ತೂರ್ ಇದೆ.


ಕುರುಬರೇ, ನೀವು ಕುರಿಗಳಿಗೆ (ಜನಗಳಿಗೆ) ಮುಂದಾಳಾಗಿ ನಡೆಯಬೇಕು. ಮಹಾನಾಯಕರೇ, ನೀವು ಗೋಳಾಡಲು ಪ್ರಾರಂಭಿಸಿರಿ. ಕುರಿಗಳ ಮುಂದಾಳುಗಳಾದ ನೀವು ನೋವಿನಿಂದ ನೆಲದ ಮೇಲೆ ಹೊರಳಾಡಿರಿ. ಏಕೆಂದರೆ ಈಗ ನಿಮ್ಮನ್ನು ವಧಿಸುವ ಕಾಲ ಬಂದಿದೆ. ನಾನು ನಿಮ್ಮ ಕುರಿಗಳನ್ನು ದಿಕ್ಕಾಪಾಲು ಮಾಡಿಬಿಡುತ್ತೇನೆ. ಅವುಗಳು ಒಡೆದ ಪಾತ್ರೆಯ ಚೂರುಗಳಂತೆ ಚೆಲ್ಲಾಪಿಲ್ಲಿಯಾಗುತ್ತವೆ.


ಶೋಕವಸ್ತ್ರಗಳನ್ನು ದುಃಖದಿಂದ ತುಂಬಿದ ನಿಮ್ಮ ಎದೆಗಳ ಮೇಲೆ ಹಾಕಿಕೊಳ್ಳಿ. ನಿಮ್ಮ ಹೊಲಗಳು ನಿಷ್ಪ್ರಯೋಜಕವಾಗಿರುವದಕ್ಕಾಗಿ ಅಳಿರಿ. ನಿಮ್ಮ ದ್ರಾಕ್ಷಿತೋಟವು ಒಳ್ಳೆಯ ಫಲ ಕೊಡುತ್ತಿತ್ತು. ಆದರೆ ಈಗ ತೋಟವು ಬರಿದಾಗಿದೆ.


ಯೆಹೋವನು ಸಮುದ್ರದ ಮೇಲೆ ತನ್ನ ಕೈಯನ್ನು ಚಾಚಿದ್ದಾನೆ. ಆತನು ತೂರಿಗೆ ವಿರುದ್ಧವಾಗಿ ಯುದ್ಧಮಾಡಲು ರಾಜ್ಯಗಳನ್ನು ಒಟ್ಟುಗೂಡಿಸುತ್ತಾನೆ. ಯೆಹೋವನು ಕಾನಾನಿಗೆ ತೂರಿನ ಆಶ್ರಯಸ್ಥಳಗಳನ್ನು ನಾಶಮಾಡಲು ಆಜ್ಞಾಪಿಸುತ್ತಾನೆ.


ವಸಂತ ಕಾಲದಲ್ಲಿ ನೆಬೂಕದ್ನೆಚ್ಚರನು ತನ್ನ ಸೇವಕರನ್ನು ಕಳುಹಿಸಿ ಯೆಹೋಯಾಕೀನನನ್ನು ಕರೆಯಿಸಿದನು. ಆ ಸೇವಕರು ದೇವಾಲಯದ ಕೆಲವು ವಸ್ತುಗಳನ್ನೂ ಅವನ ಜೊತೆಯಲ್ಲಿ ಬಾಬಿಲೋನಿಗೆ ತೆಗೆದುಕೊಂಡು ಹೋದರು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿಗೆ ಚಿದ್ಕೀಯನನ್ನು ಹೊಸ ಅರಸನನ್ನಾಗಿ ಮಾಡಿದನು. ಚಿದ್ಕೀಯನು ಯೆಹೋಯಾಕೀನನ ಸಂಬಂಧಿಕನಾಗಿದ್ದನು.


ಬಾಬಿಲೋನಿನ ಇಡೀ ಸೈನ್ಯವು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆದುಹಾಕಿತು. ಆ ಸೈನ್ಯವು ರಾಜನ ವಿಶೇಷ ರಕ್ಷಕದಳದ ಅಧಿಪತಿಯ ಅಧಿನದಲ್ಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು