Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:15 - ಪರಿಶುದ್ದ ಬೈಬಲ್‌

15 ಒಡೆಯನಾದ ಯೆಹೋವನು ತೂರಿಗೆ ಹೇಳುವುದೇನೆಂದರೆ, “ಭೂಮದ್ಯ ಸಮುದ್ರ ಕರಾವಳಿಯಲ್ಲಿರುವ ದೇಶದವರು ನೀನು ಕೆಳಗೆ ಬೀಳುವ ಶಬ್ದ ಕೇಳಿ ನಡುಗುವರು. ಅದು ನಿನ್ನ ಜನರು ಗಾಯಗೊಂಡು ಸಾಯುವಾಗ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, “ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರನಾದ ದೇವರು ಟೈರ್ ನಗರಕ್ಕೆ ಹೀಗೆ ಹೇಳುತ್ತಾರೆ - “ನಿನ್ನ ಮಧ್ಯದಲ್ಲಿ ಕಗ್ಗೊಲೆಯುಂಟಾಗಿ, ಗಾಯಗೊಂಡವರು ನರಳುತ್ತಿರಲು, ನೀನು ಧಡಮ್ಮನೆ ಬೀಳುವ ಶಬ್ದಕ್ಕೆ ದ್ವೀಪಗಳು ಅದರುವವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ - ನಿನ್ನ ಮಧ್ಯದಲ್ಲಿ ಕೊಲೆಯುಂಟಾಗಿ ಗಾಯಪಟ್ಟವರು ನರಳುತ್ತಿರಲು ನೀನು ಧಡಮ್ಮನೆ ಬೀಳುವ ಶಬ್ದಕ್ಕೆ ದ್ವೀಪಗಳು ಅದರುವವಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಸಾರ್ವಭೌಮ ಯೆಹೋವ ದೇವರು ಟೈರಿಗೆ ಹೀಗೆ ಹೇಳುತ್ತಾರೆ: ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ಸಮುದ್ರತೀರದ ಪ್ರದೇಶಗಳು ನಡುಗುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:15
11 ತಿಳಿವುಗಳ ಹೋಲಿಕೆ  

ಕರಾವಳಿಯಲ್ಲಿ ವಾಸಿಸುವ ಜನರೆಲ್ಲರೂ ನಿನ್ನ ವಾರ್ತೆಯನ್ನು ಕೇಳಿ ಚಕಿತರಾದರು. ಅವರ ರಾಜರು ದಂಗುಬಡಿದವರಾಗಿ ಭಯಭೀತರಾಗುವರು.


ಎದೋಮ್ಯರ ಪತನದ ಶಬ್ಧಕ್ಕೆ ಭೂಮಿಯು ನಡುಗುವುದು. ಅವರ ಗೋಳಾಟದ ಧ್ವನಿಯು ಕೆಂಪು ಸಮುದ್ರದವರೆಗೂ ಕೇಳಿಸುವುದು.


ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.


ನೀನು ಬಿದ್ದ ದಿವಸ ಕರಾವಳಿಯಲ್ಲಿರುವ ದೇಶಗಳೆಲ್ಲಾ ನಡುಗುವವು. ನೀನು ಕರಾವಳಿಯಲ್ಲಿ ಅನೇಕ ವಸಾಹತುಗಳನ್ನು ನಿರ್ಮಿಸಿದ್ದೀ. ನೀನು ಹೋದ ಬಳಿಕ ಅವರು ಭಯಗ್ರಸ್ತರಾಗುವರು.’”


ಅನೇಕ ಮಂದಿ ನಿನಗೆ ಸಂಭವಿಸಿದ್ದನ್ನು ನೋಡಿ ಚಕಿತರಾಗುವರು. ನಾನು ನಿನ್ನ ಕಡೆಗೆ ಖಡ್ಗ ಬೀಸುವಾಗ ಅವರ ಅರಸರು ಬಹಳ ಭಯಗ್ರಸ್ತರಾಗುವರು; ನೀನು ಬೀಳುವ ದಿವಸದಲ್ಲಿ ಅರಸರು ಹೆದರಿ ನಡುಗುವರು. ಪ್ರತಿಯೊಬ್ಬ ರಾಜನು ತನ್ನ ಜೀವವನ್ನು ಉಳಿಸಿಕೊಳ್ಳಲು ಆತುರಪಡುವನು.”


“‘ನಿನ್ನ ವ್ಯಾಪಾರಿಗಳನ್ನು ನೀನು ಬಹುದೂರ ಕಳುಹಿಸುವೆ. ಆ ಸ್ಥಳಗಳು ನಿನ್ನ ಹಡಗಿನ ನಾವಿಕನ ಕೂಗಾಟವನ್ನು ಕೇಳಿ ಭಯದಿಂದ ತತ್ತರಿಸುವವು.


ಜನರು ಬಂಡೆಗಳ ಸಂದುಗಳಲ್ಲಿಯೂ ನೆಲದ ಬಿರುಕುಗಳಲ್ಲಿಯೂ ಅಡಗಿಕೊಳ್ಳುವರು. ಜನರು ಯೆಹೋವನಿಗೂ ಆತನ ಪರಾಕ್ರಮಕ್ಕೂ ಭಯಪಡುವರು. ಯೆಹೋವನು ಎದ್ದು ಈ ಪ್ರಪಂಚವನ್ನು ಅಲುಗಾಡಿಸುವಾಗ ಇವೆಲ್ಲಾ ಸಂಭವಿಸುವವು.


ದೂರ ಸ್ಥಳಗಳವರೇ, ನೋಡಿರಿ, ಭಯಗೊಳ್ಳಿರಿ. ಭೂಮಿಯ ಕಟ್ಟಕಡೆಗಿರುವ ದೇಶಗಳೇ, ಭಯದಿಂದ ನಡುಗಿರಿ. ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿರಿ ಎಂದಾಗ ಅವರು ಬಂದರು.


ಅವನ ಕುದುರೆಗಳ ಗೊರಸುಗಳಿಂದ ಹೊರಟ ಧೂಳು ನಿನ್ನನ್ನು ಮುಚ್ಚಿಬಿಡುವದು. ಅವರ ರಾಹುತರ, ಚಕ್ಕಡಿಗಳ, ರಥಗಳ ಶಬ್ದದಿಂದ ನಿನ್ನ ಗೋಡೆಗಳು ನಡುಗುವವು. ಕೋಟೆಗೋಡೆಗಳು ಕೆಡವಲ್ಪಡುವದರಿಂದ ಅವರು ನಗರದೊಳಗೆ ನುಗ್ಗುವರು.


ನಿನಗಾದ ಸ್ಥಿತಿಯನ್ನು ನೋಡಿ ಬೇರೆ ಜನರು ಭಯಗ್ರಸ್ತರಾಗುವರು. ನಿನ್ನ ಅಂತ್ಯವು ಆಯಿತು. ಜನರು ನಿನಗಾಗಿ ಹುಡುಕಾಡುವರು. ಆದರೆ ಅವರು ನಿನ್ನನ್ನು ಕಂಡುಹಿಡಿಯುವುದೇ ಇಲ್ಲ.” ಇವು ಒಡೆಯನಾದ ಯೆಹೋವನ ಮಾತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು