Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:19 - ಪರಿಶುದ್ದ ಬೈಬಲ್‌

19 ಇದು ನನ್ನ ಒಡೆಯನಾದ ಯೆಹೋವನ ನುಡಿ. “ತೂರ್, ನಾನು ನಿನ್ನನ್ನು ನಾಶಮಾಡುವೆನು. ಆಗ ನೀನು ಬರಿದಾದ ನಗರವಾಗಿರುವೆ. ಯಾರೂ ಅಲ್ಲಿ ವಾಸ ಮಾಡುವದಿಲ್ಲ. ನಿನ್ನ ಮೇಲೆ ಸಮುದ್ರವು ತುಂಬುವಂತೆ ಮಾಡುವೆನು. ಆ ಮಹಾಸಾಗರವು ನಿನ್ನನ್ನು ಮುಚ್ಚಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳು ಊರನ್ನಾಗಿ ಮಾಡಿ, ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಳುಗಿ ಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನಪಟ್ಟಣಗಳ ಗತಿಗೆ ತಂದು ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧ ಜಲರಾಶಿಯನ್ನು ನಿನ್ನ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:19
7 ತಿಳಿವುಗಳ ಹೋಲಿಕೆ  

ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ತೂರೇ, ನಾನು ನಿನಗೆ ಮ್ಯುಯಿತೀರಿಸುವೆನು. ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅನೇಕ ರಾಜ್ಯಗಳನ್ನು ಎಬ್ಬಿಸುತ್ತೇನೆ. ಅವರು ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿನಗೆ ವಿರುದ್ಧವಾಗಿ ಬರುವರು.”


ನಂತರ ದೇವದೂತನು ನನಗೆ ಹೀಗೆ ಹೇಳಿದನು: “ಆ ವೇಶ್ಯೆಯು ಕುಳಿತುಕೊಳ್ಳುವ ನೀರುಗಳನ್ನು ನೀನು ನೋಡಿದೆ. ಈ ನೀರುಗಳು ಈ ಲೋಕದ ಅನೇಕ ಜನರನ್ನೂ ವಿವಿಧ ಜನಾಂಗಗಳನ್ನೂ ಪ್ರಜೆಗಳನ್ನೂ ಭಾಷೆಗಳನ್ನೂ ಸೂಚಿಸು ತ್ತವೆ.


“ಅಂತ್ಯಕಾಲದ ಸಮಯಕ್ಕೆ ದಕ್ಷಿಣದ ರಾಜನು ಉತ್ತರದ ರಾಜನೊಂದಿಗೆ ಯುದ್ಧ ಮಾಡುವನು. ಉತ್ತರದ ರಾಜನು ಅವನ ಮೇಲೆ ಧಾಳಿ ಮಾಡುವನು. ಅವನ ರಥ, ಕುದುರೆ ಸವಾರರು, ಹಡಗುಪಡೆಯೊಂದಿಗೆ ಧಾಳಿ ಮಾಡುವನು. ಆ ಉತ್ತರದ ರಾಜನು ಪ್ರವಾಹದಂತೆ ರಭಸದಿಂದ ದೇಶದಲ್ಲೆಲ್ಲ ಮುನ್ನುಗ್ಗುವನು.


ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.


ನಿನ್ನನ್ನು ಹುಟ್ಟುಹಾಕುವವರು ಸಮುದ್ರದ ಬಹುದೂರ ನಿನ್ನನ್ನು ನಡಿಸಿದರು. ಆದರೆ ಪೂರ್ವದಿಂದ ಬಂದ ಬಲವುಳ್ಳ ಗಾಳಿಯು ನಿನ್ನನ್ನು ಮುರಿಯುವದು.


ಆಗ ನನ್ನ ಒಡೆಯನಾದ ಯೆಹೋವನು ನನ್ನೊಡನೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳಿಗೆ ತಿರುಗಿ ಜೀವ ಬಂದೀತೋ?” ಅದಕ್ಕೆ ನಾನು, “ನನ್ನ ಒಡೆಯನಾದ ಯೆಹೋವನೇ, ನೀನೇ ಬಲ್ಲೆ. ಈ ಪ್ರಶ್ನೆಗೆ ಉತ್ತರ ನಿನಗೇ ಗೊತ್ತಿದೆ” ಎಂದು ಉತ್ತರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು