Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:21 - ಪರಿಶುದ್ದ ಬೈಬಲ್‌

21 ನಿನಗಾದ ಸ್ಥಿತಿಯನ್ನು ನೋಡಿ ಬೇರೆ ಜನರು ಭಯಗ್ರಸ್ತರಾಗುವರು. ನಿನ್ನ ಅಂತ್ಯವು ಆಯಿತು. ಜನರು ನಿನಗಾಗಿ ಹುಡುಕಾಡುವರು. ಆದರೆ ಅವರು ನಿನ್ನನ್ನು ಕಂಡುಹಿಡಿಯುವುದೇ ಇಲ್ಲ.” ಇವು ಒಡೆಯನಾದ ಯೆಹೋವನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಿನ್ನನ್ನು ಪೂರ್ತಿಯಾಗಿ ಧ್ವಂಸಮಾಡುವೆನು; ನೀನು ಇಲ್ಲವಾಗುವೆ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವದಿಲ್ಲ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನೂ ನಿನ್ನನ್ನು ಭಯಂಕರವಾದ ಅಂತ್ಯಕ್ಕೆ ತರುವೆನು. ಇನ್ನು ಮೇಲೆ ನೀನು ಇರುವುದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡುಕಿದರೂ ನೀನು ಸಿಗುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:21
9 ತಿಳಿವುಗಳ ಹೋಲಿಕೆ  

ಬೇರೆ ದೇಶಗಳಲ್ಲಿರುವ ವ್ಯಾಪಾರಿಗಳು ಆಶ್ಚರ್ಯದಿಂದ ಸಿಳ್ಳು ಹಾಕಿದರು. ನಿನಗೆ ಸಂಭವಿಸಿದ ವಿಷಯಗಳು ಜನರಿಗೆ ಭೀತಿಯನ್ನುಂಟುಮಾಡಿತು. ಯಾಕೆಂದರೆ ನಿನ್ನ ಕಥೆ ಮುಗಿಯಿತು. ನಿನಗೆ ಅಂತ್ಯವಾಯಿತು. ಇನ್ನು ನೀನು ಕಾಣುವದಿಲ್ಲ.’”


ನಂತರ ಬಲಿಷ್ಠನಾದ ದೇವದೂತನೊಬ್ಬನು ಒಂದು ದೊಡ್ಡ ಬಂಡೆಯನ್ನು ಎತ್ತಿಕೊಂಡನು. ಆ ಬಂಡೆಯು ಒಂದು ದೊಡ್ಡ ಬೀಸುವ ಕಲ್ಲಿನಂತಿತ್ತು. ದೇವದೂತನು ಆ ಬಂಡೆಯನ್ನು ಸಮುದ್ರದಲ್ಲಿ ಎಸೆದು ಹೀಗೆ ಹೇಳಿದನು: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಕೆಳಕ್ಕೆ ಎಸೆಯಲ್ಪಡುವುದು. ಆ ನಗರಿಯು ಮತ್ತೆಂದಿಗೂ ಕಾಣಿಸುವುದಿಲ್ಲ.


“‘ಬೇರೆ ಜನಾಂಗಗಳ ಜನರು ನಿನಗೆ ಆದದ್ದನ್ನು ನೋಡಿ ಬೆಚ್ಚಿಬೆರಗಾದರು. ನಿನಗಾದ ದುಸ್ಥಿತಿಯು ಜನರನ್ನು ಭಯಪಡಿಸಿತು. ನಿನ್ನ ಅಂತ್ಯವಾಯಿತು!’”


ಸ್ವಲ್ಪಕಾಲದ ಮೇಲೆ ಅವನು ಇಲ್ಲವಾದನು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ.


ಆಮೇಲೆ ‘ಇದೇ ರೀತಿಯಲ್ಲಿ ಬಾಬಿಲೋನ್ ಕೂಡ ಮುಳುಗಿಹೋಗುವುದು. ಬಾಬಿಲೋನ್ ಎಂದಿಗೂ ಮೇಲಕ್ಕೆ ಏಳುವದಿಲ್ಲ. ಅಲ್ಲಿ ನಾನು ಬರಮಾಡುವ ಅನೇಕ ವಿಪತ್ತುಗಳಿಂದಾಗಿ ಬಾಬಿಲೋನ್ ಮುಳುಗಿಹೋಗುವುದು’” ಎಂದು ಹೇಳು. ಯೆರೆಮೀಯನ ಸಂದೇಶ ಇಲ್ಲಿಗೆ ಮುಗಿಯುತ್ತದೆ.


ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.


ಯೆಹೋವನ ವಾಕ್ಯವು ನನಗೆ ತಿರುಗಿ ಬಂತು. ಆತನು ಹೇಳಿದ್ದೇನೆಂದರೆ,


“ಅದಾದ ಮೇಲೆ ಉತ್ತರದ ರಾಜನು ತನ್ನ ದೇಶದ ಭದ್ರವಾದ ಕೋಟೆಗಳಿಗೆ ಹಿಂದಿರುಗುವನು. ಆದರೆ ಅವನು ದುರ್ಬಲನಾಗಿ ಬಿದ್ದುಹೋಗುವನು; ಕೊನೆಗೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು