Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:13 - ಪರಿಶುದ್ದ ಬೈಬಲ್‌

13 ಗ್ರೀಸ್, ತುರ್ಕಿ ಮತ್ತು ಕಪ್ಪು ಸಮುದ್ರದ ಸುತ್ತಲಿರುವ ದೇಶಗಳವರು ನಿನ್ನಲ್ಲಿಗೆ ವ್ಯಾಪಾರಕ್ಕಾಗಿ ಬಂದರು. ಅವರು ನಿನ್ನ ವಸ್ತುಗಳಿಗೆ ಬದಲಾಗಿ ಗುಲಾಮರನ್ನೂ ತಾಮ್ರವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯಾವಾನಿನವರು, ತೂಬಲಿನವರು ಮತ್ತು ಮೆಷೆಕಿನವರು ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನು ಹಾಗು ತಾಮ್ರದ ಪಾತ್ರೆಗಳನ್ನು ನಿನಗೆ ಸರಬರಾಜು ಮಾಡುತ್ತಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯಾವಾನಿನವರೂ ತೂಬಲಿನವರೂ ಮೆಷೆಕಿನವರೂ ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನೂ ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಯಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ನರಪ್ರಾಣಿಗಳನ್ನೂ ಕಂಚಿನ ಪಾತ್ರೆಗಳನ್ನೂ ನಿನ್ನ ಬಜಾರಿನಲ್ಲಿ ಮಾರಾಟಕ್ಕಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:13
17 ತಿಳಿವುಗಳ ಹೋಲಿಕೆ  

ಯೆಫೆತನ ಗಂಡುಮಕ್ಕಳು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.


ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.


ಆ ವರ್ತಕರು ದಾಲ್ಚಿನ್ನಿ, ಸಾಂಬಾರ ಪದಾರ್ಥಗಳು, ಧೂಪ, ಪರಿಮಳತೈಲ, ಸಾಂಬ್ರಾಣಿ, ದ್ರಾಕ್ಷಾರಸ ಮತ್ತು ಆಲಿವ್‌ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು, ಕುರಿ, ಕುದುರೆಗಳು, ರಥಗಳು, ಗುಲಾಮರು ಮತ್ತು ಮಾನವ ಪ್ರಾಣಗಳನ್ನು ಮಾರುತ್ತಾರೆ. ವರ್ತಕರು ಅಳುತ್ತಾ ಹೀಗೆ ಹೇಳುವರು:


“ನರಪುತ್ರನೇ, ನನ್ನ ಪರವಾಗಿ ಗೋಗನಿಗೆ ವಿರುದ್ಧವಾಗಿ ಹೇಳು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆಂದು ಅವನಿಗೆ ಹೇಳು: ‘ಗೋಗನೇ, ನೀನು ಮೆಷೆಕ್ ಮತ್ತು ತೂಬಲ್ ದೇಶಗಳ ಪ್ರಮುಖ ನಾಯಕನು. ಆದರೆ ನಾನು ನಿನಗೆ ವಿರುದ್ಧವಾಗಿದ್ದೇನೆ.


ಯೆಫೆತನ ಗಂಡುಮಕ್ಕಳು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.


ನನ್ನ ಜನರಿಗಾಗಿ ಚೀಟು ಹಾಕಿದರು. ಅವರು ಹುಡುಗರನ್ನು ಮಾರಿ ಸೂಳೆಯನ್ನು ಕೊಂಡುಕೊಂಡರು; ಹುಡುಗಿಯರನ್ನು ಮಾರಿ ದ್ರಾಕ್ಷಾರಸವನ್ನು ಕೊಂಡುಕೊಂಡರು.


“ಮೆಷಕ್, ತೂಬಲ್ ಮತ್ತು ಅವರ ಎಲ್ಲಾ ಸೈನ್ಯದವರು ಅಲ್ಲಿದ್ದಾರೆ. ಅವರ ಸಮಾಧಿಗಳು ಸುತ್ತಲೂ ಇವೆ. ಅವರೆಲ್ಲಾ ಯುದ್ಧದಲ್ಲಿ ಸತ್ತವರು. ಅವರು ಜೀವಿಸಿದ್ದಾಗ ಜನರಿಗೆ ಹೆದರಿಕೆಯನ್ನು ಉಂಟುಮಾಡಿದ್ದರು.


“ದಾನಿಯೇಲನೇ, ಈಗ ನಾನು ನಿನಗೆ ಸತ್ಯಾಂಶವನ್ನು ಹೇಳುತ್ತೇನೆ ಕೇಳು. ಪಾರಸಿಯ ದೇಶದಲ್ಲಿ ಇನ್ನೂ ಮೂರು ಜನ ರಾಜರು ಆಳುವರು. ಆಮೇಲೆ ನಾಲ್ಕನೆಯ ರಾಜನು ಬರುವನು. ನಾಲ್ಕನೆಯ ರಾಜನು ತನಗಿಂತ ಮುಂಚೆ ಆಗಿ ಹೋದ ಪಾರಸಿಯ ದೇಶದ ಎಲ್ಲ ರಾಜರಿಗಿಂತ ಅಧಿಕ ಧನವಂತನಾಗಿರುವನು. ಆ ನಾಲ್ಕನೆಯ ರಾಜನು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳುವದಕ್ಕೆ ಧನವನ್ನು ಬಳಸಿಕೊಳ್ಳುವನು. ಎಲ್ಲರೂ ಗ್ರೀಸ್ ರಾಜ್ಯದ ವಿರುದ್ಧವಾಗುವಂತೆ ಮಾಡುವನು.


ಆಗ ಅವನು, “ದಾನಿಯೇಲನೇ, ನಾನು ಏಕೆ ಬಂದಿದ್ದೇನೆಂಬುದು ನಿನಗೆ ಗೊತ್ತಿಲ್ಲವೇ? ತಕ್ಷಣ ನಾನು ಪಾರಸಿಯ ರಾಜ್ಯದ ದಿವ್ಯಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಹೋದಮೇಲೆ ಗ್ರೀಕ್ ರಾಜ್ಯದ ದಿವ್ಯಪಾಲಕನು ಬರುವನು.


ಆ ಹೋತವು ಗ್ರೀಕ್ ರಾಜ್ಯ. ಅದರ ಎರಡು ಕಣ್ಣುಗಳ ಮಧ್ಯದ ಕೊಂಬು ಮೊದಲನೆಯ ಅರಸ.


ಅಲ್ಲದೆ ಊಜಾಲಿನ ದ್ರಾಕ್ಷಾರಸವನ್ನು, ಉಕ್ಕನ್ನು, ದಾಲ್ಚಿನ್ನಿ ಮತ್ತು ಕಬ್ಬನ್ನು ಆ ವಸ್ತುಗಳಿಗಾಗಿ ವ್ಯಾಪಾರ ಮಾಡಿದರು.


ಯಾವಾನನ ಗಂಡುಮಕ್ಕಳು: ಎಲೀಷ, ತಾರ್ಷೀಷ್, ಕಿತ್ತೀಮ್ ಮತ್ತು ದೋದಾನೀಮ್.


ಯಾವಾನನ ಗಂಡುಮಕ್ಕಳು: ಎಲೀಷಾ, ತಾರ್ಷೀಸ್, ಕಿತ್ತೀಮ್ ಮತ್ತು ದೋದಾನೀಮ್.


ಸುಳ್ಳುಗಾರರಾದ ನಿಮ್ಮ ಸಮೀಪದಲ್ಲಿ ವಾಸಿಸುವುದು ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ ವಾಸಿಸುವಂತಿರುವುದು.


“‘ತಾರ್ಷೀಷ್ ನಿನ್ನ ಉತ್ತಮ ವ್ಯಾಪಾರ ಕೇಂದ್ರವಾಗಿತ್ತು. ಅವರು ತಮ್ಮ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸ ಲೋಹಗಳನ್ನು ಕೊಟ್ಟು ನಿನ್ನಿಂದ ವಸ್ತುಗಳನ್ನು ಕೊಂಡುಕೊಂಡರು.


“ನೀವು ಯೆಹೂದ ಮತ್ತು ಜೆರುಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿರಿ. ಆ ರೀತಿಯಾಗಿ ಅವರನ್ನು ಅವರ ದೇಶದಿಂದ ಬಹಳ ದೂರ ತೆಗೆದುಬಿಟ್ಟಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು