Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:23 - ಪರಿಶುದ್ದ ಬೈಬಲ್‌

23 ಮತ್ತು ಹಾರಾನ್‌ಕನ್ನೆ, ಎದೆನ್, ಶೆಬದ ವ್ಯಾಪಾರಿಗಳು, ಅಶ್ಶೂರ್ ಮತ್ತು ಕಿಲ್ಮದ್ ಊರಿನವರು ನಿನ್ನೊಂದಿಗೆ ವ್ಯಾಪಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹಾರಾನ್, ಕನ್ನೆ, ಎದೆನ್ ಸ್ಥಳಗಳವರೂ, ಶೆಬ, ಅಶ್ಶೂರ್ ಕಿಲ್ಮದ್ ಪ್ರಾಂತ್ಯಗಳವರೂ ನಿನ್ನ ವರ್ತಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹಾರಾನ್ ಕನ್ನೆ, ಏದೆನ್ ಸ್ಥಳಗಳವರು ಹಾಗೂ ಶೆಬ, ಅಸ್ಸೀರಿಯಾ, ಕಿಲ್ಮದ್ ಪ್ರಾಂತ್ಯಗಳ ವರ್ತಕರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹಾರಾನ್ ಕನ್ನೆ ಎದೆನ್ ಸ್ಥಳಗಳವರೂ ಶೆಬ ಅಶ್ಶೂರ್‍ಕಿಲ್ಮದ್ ಪ್ರಾಂತಗಳ ವರ್ತಕರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ ‘ಹಾರಾನ್, ಕನ್ನೆ, ಏದೆನ್, ಶೆಬ, ಅಸ್ಸೀರಿಯ ಮತ್ತು ಕಿಲ್ಮದ್ ನಿನ್ನ ವ್ಯಾಪಾರಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:23
22 ತಿಳಿವುಗಳ ಹೋಲಿಕೆ  

ಆ ರಾಜ್ಯಗಳ ದೇವರುಗಳು ತಮ್ಮ ಜನರನ್ನು ರಕ್ಷಿಸಲಾಗಲಿಲ್ಲ. ನನ್ನ ಪೂರ್ವಿಕರು ಅವರನ್ನೆಲ್ಲ ನಾಶಗೊಳಿಸಿದರು. ಅವರು ಗೋಜಾನ್, ಖಾರಾನ್, ರೆಚೆಫ್ ಮತ್ತು ತೆಲಸ್ಸಾರ್‌ನ ಎದೆನಿನ ಜನರನ್ನು ನಾಶಗೊಳಿಸಿದರು!


ಅವರ ದೇವರುಗಳು ಅವರನ್ನು ರಕ್ಷಿಸಿದರೋ? ಇಲ್ಲ! ನನ್ನ ಪೂರ್ವಿಕರು ಅವರನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್‌ನಲ್ಲಿ ವಾಸವಾಗಿದ್ದ ಎದೆನಿನ ಜನರನ್ನೂ ನಾಶಮಾಡಿದರು.


“ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದುಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದೆನ್‌ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತುಹಾಕುವೆನು. ಆಗ ಅರಾಮ್ಯರು ಸೋಲಿಸಲ್ಪಟ್ಟವರಾಗಿ ಕೀರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.”


ಶೇಮನ ಗಂಡುಮಕ್ಕಳು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್ ಮತ್ತು ಅರಾಮ್.


“ಆದ್ದರಿಂದ ಅಬ್ರಹಾಮನು ಖಾಲ್ದೆಯ ದೇಶವನ್ನು ಬಿಟ್ಟು ಹಾರಾನಿನಲ್ಲಿ ವಾಸಿಸಲು ಹೋದನು. ಅಬ್ರಹಾಮನ ತಂದೆ ಸತ್ತಮೇಲೆ ದೇವರು ಅವನನ್ನು ಈಗ ನೀವು ವಾಸಿಸುತ್ತಿರುವ ಈ ಸ್ಥಳಕ್ಕೆ ಕಳುಹಿಸಿದನು.


ಹೋಗಿ ಕಲ್ನೆಯ ಕಡೆಗೆ ದಿಟ್ಟಿಸಿರಿ. ಅಲ್ಲಿಂದ ದೊಡ್ಡ ಪಟ್ಟಣವಾದ ಹಾಮಾತಿಗೆ ಹೋಗಿರಿ. ಫಿಲಿಷ್ಟಿಯರ ಗತ್ ಪಟ್ಟಣಕ್ಕೆ ಹೋಗಿರಿ. ಆ ಜನಾಂಗಗಳಿಗಿಂತ ನೀವು ಉತ್ತಮರೋ? ಇಲ್ಲ. ಅವರ ರಾಜ್ಯವು ನಿಮಗಿಂತ ವಿಸ್ತಾರವಾಗಿದೆ.


ಕಲ್ನೋ ನಗರವು ಕರ್ಕೆಮೀಷ್ ಹಾಗೆ ಇರುವದು. ಹಮಾತ್ ನಗರವು ಅರ್ಪದ್ ನಗರದಂತಿರುವದು. ಸಮಾರ್ಯಪಟ್ಟಣವು ದಮಸ್ಕದಂತಿರುವದು.


ಯೆಹೋವನು ಅಶ್ಶೂರದವರ ಮೂಲಕ ಯೆಹೂದವನ್ನು ಶಿಕ್ಷಿಸುವನು. ಆತನು ಅಶ್ಶೂರವನ್ನು ಬಾಡಿಗೆಗೆ ತೆಗೆದುಕೊಂಡ ಕ್ಷೌರಿಕನ ಕತ್ತಿಯಂತೆ ತೆಗೆದುಕೊಂಡು ಯೆಹೂದದ ತಲೆಕೂದಲನ್ನೂ ಕೈಕಾಲುಗಳ ಕೂದಲನ್ನೂ ಗಡ್ಡವನ್ನೂ ಬೋಳಿಸಿಬಿಡುವನು.


“ಆ ಸಮಯದಲ್ಲಿ ಯೆಹೋವನು ನೊಣಗಳನ್ನು ಕರೆಯುವನು. ಆ ನೊಣಗಳು ಈಗ ಈಜಿಪ್ಟಿನ ನದಿಗಳ ಸಮೀಪದಲ್ಲಿವೆ. ಯೆಹೋವನು ದುಂಬಿಗಳನ್ನು ಕರೆಯುವನು. ಆ ದುಂಬಿಗಳು ಈಗ ಅಶ್ಶೂರ್ ದೇಶದಲ್ಲಿವೆ. ಈ ವೈರಿಗಳು ನಿಮ್ಮ ದೇಶಕ್ಕೆ ಬಂದು


ಅಶ್ಶೂರ್ಯದವರು ಸಹ ಅವರೊಡನೆ ಸೇರಿಕೊಂಡು ಲೋಟನ ಸಂತತಿಯವರನ್ನು ಪ್ರಬಲರನ್ನಾಗಿ ಮಾಡಿದ್ದಾರೆ.


ಆದರೆ ಶೆಬ ದೇಶದವರು ನಮ್ಮ ಮೇಲೆ ಆಕ್ರಮಣ ಮಾಡಿ ನಿನ್ನ ಪಶುಗಳನ್ನೆಲ್ಲಾ ಹೊಡೆದುಕೊಂಡು ಹೋದರು; ನಿನ್ನ ಸೇವಕರುಗಳನ್ನೆಲ್ಲಾ ಕೊಂದು ಹಾಕಿದರು; ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಈ ವಿಷಯವನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.


ಆದರೆ ಕೇನ್ಯರೇ, ಅಶ್ಶೂರ್ಯವು ನಿಮ್ಮನ್ನು ಸೆರೆ ಒಯ್ಯುವಾಗ ಅದು ನಾಶವಾಗುವುದು.”


ಆ ರಾತ್ರಿ, ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ತನ್ನ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಗಂಡುಮಕ್ಕಳನ್ನೂ ಕರೆದುಕೊಂಡು ಹೊರಟು ಯಬ್ಬೋಕ್ ಹೊಳೆಯನ್ನು ದಾಟತಕ್ಕ ಸ್ಥಳಕ್ಕೆ ಬಂದನು.


ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರ ತಂದೆ. ದೆದಾನನ ಸಂತತಿಯವರು: ಅಶ್ಶೂರ್ಯರು ಲೆಟೂಶ್ಯರು ಮತ್ತು ಲೆಯುಮ್ಯರು.


ಆದ್ದರಿಂದ ಅಬ್ರಾಮನು ಯೆಹೋವನಿಗೆ ವಿಧೇಯನಾದನು. ಅವನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟನು. ಅವನೊಡನೆ ಲೋಟನು ಸಹ ಹೋದನು. ಆಗ ಅಬ್ರಾಮನಿಗೆ ಎಪ್ಪತ್ತೈದು ವರ್ಷ ವಯಸ್ಸಾಗಿತ್ತು.


ನಿಮ್ರೋದನ ರಾಜ್ಯವು ಶಿನಾರ್ ದೇಶದಲ್ಲಿರುವ ಬಾಬಿಲೋನಿನಲ್ಲಿ, ಯೆರೆಕ್‌ನಲ್ಲಿ ಮತ್ತು ಅಕ್ಕದ್ ಮತ್ತು ಕಲ್ನೇ ಎಂಬ ಪಟ್ಟಣಗಳಲ್ಲಿ ಪ್ರಾರಂಭವಾಯಿತು.


ದೇವರಾದ ಯೆಹೋವನು ಪೂರ್ವ ದಿಕ್ಕಿನಲ್ಲಿದ್ದ ಏದೆನ್ ಸೀಮೆಯಲ್ಲಿ ಒಂದು ತೋಟವನ್ನು ಮಾಡಿ ತಾನು ಸೃಷ್ಟಿಸಿದ ಮನುಷ್ಯನನ್ನು ಆ ತೋಟದಲ್ಲಿರಿಸಿದನು.


ಅವರು ನಿನ್ನೊಂದಿಗೆ ಉತ್ತಮ ಬಟ್ಟೆಗಳು, ಕಸೂತಿ ಕೆಲಸಗಳು, ಬಣ್ಣಬಣ್ಣದ ಜಮಖಾನೆಗಳು, ಹುರಿದ ಹಗ್ಗಗಳು, ದೇವದಾರು ಮರಗಳಿಂದ ಮಾಡಿದ ವಸ್ತುಗಳು ಇವುಗಳೊಂದಿಗೆ ವ್ಯಾಪಾರ ನಡಿಸಿದರು.


“ಅಶ್ಶೂರವೂ ಅದರ ಎಲ್ಲಾ ಸೈನ್ಯವೂ ಆ ಪಾತಾಳದಲ್ಲಿರುವದು. ಅವರ ಸ್ಥಳವು ಆಳವಾದ ಗುಂಡಿಯಲ್ಲಿರುವದು. ಆ ಅಶ್ಶೂರದ ಸೈನಿಕರೆಲ್ಲಾ ರಣರಂಗದಲ್ಲಿ ಮಡಿದವರೇ. ಅವರ ಸಮಾಧಿಗಳು ಅಶ್ಶೂರದ ಸಮಾಧಿಯ ಸುತ್ತಮುತ್ತ ಇವೆ. ಅವರು ಜೀವಂತರಾಗಿರುವಾಗ ಜನರನ್ನು ಭೀತಿಗೊಳಿಸುತ್ತಿದ್ದರು. ಆದರೆ ಈಗ ಮೌನವಾಗಿದ್ದಾರೆ. ಅವರೆಲ್ಲಾ ಯುದ್ಧದಲ್ಲಿ ಸತ್ತರು.


“ಶೆಬ, ದೆದಾನ್, ತಾರ್ಷೀಷಿನ ವ್ಯಾಪಾರಿಗಳು ಮತ್ತು ಇತರ ವಾಣಿಜ್ಯ ನಗರಗಳ ಜನರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲು ಬಂದಿರುವಿಯಾ? ಬೆಳ್ಳಿಬಂಗಾರಗಳನ್ನೂ ಪಶುಗಳನ್ನೂ ಬೆಲೆಬಾಳುವ ವಸ್ತುಗಳನ್ನೂ ಕೊಳ್ಳೆಹೊಡೆಯಲು ನಿನ್ನ ಸೈನ್ಯಸಮೇತವಾಗಿ ಬಂದಿರುವೆಯಾ?’” ಎಂದು ವಿಚಾರಿಸುವರು.


ಓಬಾಲ್, ಅಬೀಮಯೇಲ್, ಶೆಬಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು