Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:27 - ಪರಿಶುದ್ದ ಬೈಬಲ್‌

27 ನಿನ್ನ ಎಲ್ಲಾ ಐಶ್ವರ್ಯವು, ನಿನ್ನ ದಿನಸುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಕಿಂಡಿಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನ ಎಲ್ಲಾ ಸೈನಿಕರು, ನಿನ್ನ ಎಲ್ಲಾ ಸಿಬ್ಬಂದಿ ವರ್ಗದವರು ನಾಶನದ ದಿನದಲ್ಲಿ ಸಮುದ್ರದೊಳಗೆ ಮುಳುಗಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಿನ್ನ ಆಸ್ತಿಯು, ನಿನ್ನ ವಸ್ತುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಒಡಕುಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನಲ್ಲಿನ ಸಮಸ್ತ ಸೈನಿಕರು, ಅಂತು ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶದ ದಿನದಲ್ಲಿ ಸಮುದ್ರದೊಳಗೆ ಮುಳುಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ವಿನಾಶದಿನದೊಳು ಮುಳುಗಿಹೋಗುವುವು ಸಮುದ್ರದೊಳು ನಿನ್ನ ಆಸ್ತಿ, ನಿನ್ನ ದಿನಸು, ನಿನ್ನ ಸರಕುಗಳು ನಿನ್ನ ನಾವಿಕರು, ಅಂಬಿಗರು, ಕಂಡಿ ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ಸೈನಿಕರೆಲ್ಲರು, ನಿನ್ನ ಸಿಬ್ಬಂದಿಯೆಲ್ಲವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಿನ್ನ ಆಸ್ತಿಯು, ನಿನ್ನ ದಿನಸುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಕಂಡಿಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನಲ್ಲಿನ ಸಮಸ್ತ ಸೈನಿಕರು, ಅಂತು ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ಮುಣುಗಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಿನ್ನ ನಾವಿಕರೂ ನಿನ್ನ ಅಂಬಿಗರೂ ನಿನ್ನ ಒಡಕುಗಳನ್ನು ಮುಚ್ಚುವವರೂ ನಿನ್ನ ವ್ಯಾಪಾರಿಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:27
19 ತಿಳಿವುಗಳ ಹೋಲಿಕೆ  

ದೇವರು ಜನರಿಗೆ ನ್ಯಾಯತೀರ್ಪು ಮಾಡುವ ದಿನದಲ್ಲಿ, ಹಣದಿಂದ ಯಾವ ಲಾಭವೂ ಇಲ್ಲ. ಆದರೆ ನೀತಿಯು ಜನರನ್ನು ಮರಣದಿಂದ ಕಾಪಾಡುತ್ತದೆ.


ನೀನು ಈಗ ಸಮುದ್ರದ ನೀರಿನಿಂದ ಮುರಿದುಬಿದ್ದಿರುವೆ. ಆಳವಾದ ನೀರಿನಲ್ಲಿ ಮುಳುಗಿಸಲ್ಪಟ್ಟಿರುವೆ. ನೀನು ಮಾರುವ ಸರಕುಗಳೂ ನಿನ್ನ ಜನರೂ ಬಿದ್ದುಹೋದರು.


ಅವರು ನಿನ್ನೊಂದಿಗೆ ಉತ್ತಮ ಬಟ್ಟೆಗಳು, ಕಸೂತಿ ಕೆಲಸಗಳು, ಬಣ್ಣಬಣ್ಣದ ಜಮಖಾನೆಗಳು, ಹುರಿದ ಹಗ್ಗಗಳು, ದೇವದಾರು ಮರಗಳಿಂದ ಮಾಡಿದ ವಸ್ತುಗಳು ಇವುಗಳೊಂದಿಗೆ ವ್ಯಾಪಾರ ನಡಿಸಿದರು.


ಶೆಬ ಮತ್ತು ರಗ್ಮದ ವ್ಯಾಪಾರಿಗಳು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನಗೆ ಸಂಬಾರ ಜೀನಸು, ರತ್ನಗಳು ಮತ್ತು ಚಿನ್ನವನ್ನು ಬದಲಿಕೊಟ್ಟರು.


“‘ತಾರ್ಷೀಷ್ ನಿನ್ನ ಉತ್ತಮ ವ್ಯಾಪಾರ ಕೇಂದ್ರವಾಗಿತ್ತು. ಅವರು ತಮ್ಮ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸ ಲೋಹಗಳನ್ನು ಕೊಟ್ಟು ನಿನ್ನಿಂದ ವಸ್ತುಗಳನ್ನು ಕೊಂಡುಕೊಂಡರು.


ನಿನಗಾದ ಸ್ಥಿತಿಯನ್ನು ನೋಡಿ ಬೇರೆ ಜನರು ಭಯಗ್ರಸ್ತರಾಗುವರು. ನಿನ್ನ ಅಂತ್ಯವು ಆಯಿತು. ಜನರು ನಿನಗಾಗಿ ಹುಡುಕಾಡುವರು. ಆದರೆ ಅವರು ನಿನ್ನನ್ನು ಕಂಡುಹಿಡಿಯುವುದೇ ಇಲ್ಲ.” ಇವು ಒಡೆಯನಾದ ಯೆಹೋವನ ಮಾತು.


ನಾನು ನಿನ್ನನ್ನು ಬರಿದಾದ ಬಂಡೆಯನ್ನಾಗಿ ಮಾಡುವೆನು. ಸಮುದ್ರದ ತೀರದಲ್ಲಿ ಬಲೆಗಳನ್ನು ಹರಡುವ ಸ್ಥಳವಾಗಿ ನೀನು ಮಾರ್ಪಡುವೆ. ನೀನು ತಿರುಗಿ ಕಟ್ಟಲ್ಪಡುವದಿಲ್ಲ. ಇದು ಒಡೆಯನಾದ ಯೆಹೋವನ ನುಡಿ.” ನನ್ನ ಒಡೆಯನಾದ ಯೆಹೋವನು ಇದನ್ನು ನನಗೆ ತಿಳಿಸಿದನು.


ನೆಬೂಕದ್ನೆಚ್ಚರನ ಸೈನ್ಯವು ನಿನ್ನ ಐಶ್ವರ್ಯವನ್ನು ದೋಚಿಕೊಳ್ಳುವದು. ನೀನು ಮಾರಬೇಕೆಂದಿದ್ದ ವಸ್ತುಗಳನ್ನು ಅವರು ದೋಚಿಕೊಳ್ಳುವರು. ನಿನ್ನ ಗೋಡೆಗಳನ್ನು ಒಡೆದು ಅಂದವಾದ ನಿನ್ನ ಮನೆಗಳನ್ನು ಹಾಳು ಮಾಡುವರು. ನಿನ್ನ ಮರದಿಂದ ಮತ್ತು ಕಲ್ಲುಗಳಿಂದ ಮಾಡಿದ ಮನೆಗಳನ್ನು ಕಸದಂತೆ ಸಮುದ್ರಕ್ಕೆ ಎಸೆಯುವರು.


ನಿನ್ನನ್ನು ಹುಟ್ಟುಹಾಕುವವರು ಸಮುದ್ರದ ಬಹುದೂರ ನಿನ್ನನ್ನು ನಡಿಸಿದರು. ಆದರೆ ಪೂರ್ವದಿಂದ ಬಂದ ಬಲವುಳ್ಳ ಗಾಳಿಯು ನಿನ್ನನ್ನು ಮುರಿಯುವದು.


“‘ನಿನ್ನ ವ್ಯಾಪಾರಿಗಳನ್ನು ನೀನು ಬಹುದೂರ ಕಳುಹಿಸುವೆ. ಆ ಸ್ಥಳಗಳು ನಿನ್ನ ಹಡಗಿನ ನಾವಿಕನ ಕೂಗಾಟವನ್ನು ಕೇಳಿ ಭಯದಿಂದ ತತ್ತರಿಸುವವು.


ನಿನ್ನ ಘನತೆಯನ್ನು ಕೆಡಿಸಿಬಿಡುವರು. ಸಮಾಧಿಗೆ ನಿನ್ನನ್ನು ತರುವರು. ಸಮುದ್ರದಲ್ಲಿ ಸತ್ತ ನಾವಿಕನ ಸ್ಥಿತಿಯು ನಿನ್ನದಾಗುವದು.


ತೂರಿನ ಮತ್ತು ಚೀದೋನಿನ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಬಹಳ ದೂರದೇಶದ ರಾಜರು ಸಹ ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ದೇಶ ಭ್ರಷ್ಟರಾಗಿದ್ದ ಹನ್ನೊಂದನೇ ವರ್ಷದ ತಿಂಗಳ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂತು. ಆತನು ಹೇಳಿದ್ದೇನೆಂದರೆ,


ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ,


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು.


ತೂರ್ ಒಂದು ಕೋಟೆಯಂತೆ ಕಟ್ಟಲ್ಪಟ್ಟಿದೆ. ಅಲ್ಲಿರುವ ಜನರು ಬೆಳ್ಳಿಯನ್ನು ಧೂಳಿನಂತೆ ಸಂಗ್ರಹಿಸಿರುತ್ತಾರೆ. ಬಂಗಾರವಂತೂ ಮಣ್ಣಿನ ತರಹ ಸಾಮಾನ್ಯವಾಗಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು