Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:30 - ಪರಿಶುದ್ದ ಬೈಬಲ್‌

30 ನಿನಗೋಸ್ಕರ ಅವರು ದುಃಖಿಸುತ್ತಾ ಅಳುವರು; ತಲೆಯ ಮೇಲೆ ಧೂಳನ್ನು ತೂರಿಕೊಂಡು ಬೂದಿರಾಶಿಯ ಮೇಲೆ ಹೊರಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿನ್ನ ನಿಮಿತ್ತ ದುಃಖದಿಂದ ಅರಚಿ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ತಮ್ಮ ತಮ್ಮ ಹಡಗುಗಳಿಂದಿಳಿದು, ನೆಲದ ಮೇಲೆ ನಿಂತು. ತಲೆಗೆ ದೂಳೆರಚಿಕೊಂಡು, ಬೂದಿಯಲ್ಲಿ ಹೊರಳಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಿನ್ನ ನಿವಿುತ್ತ ದನಿಗೈದು ದುಃಖದಿಂದರಚಿ ತಲೆಗೆ ದೂಳೆರಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಿನ್ನ ನಿಮಿತ್ತ ಧ್ವನಿಗೈದು ದುಃಖದಿಂದ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಹೊರಳಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:30
15 ತಿಳಿವುಗಳ ಹೋಲಿಕೆ  

ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.


ಚೀಯೋನಿನ ಹಿರಿಯರು ನೆಲದ ಮೇಲೆ ಮೌನವಾಗಿ ಕುಳಿತುಕೊಂಡಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಜೆರುಸಲೇಮಿನ ತರುಣಿಯರು ದುಃಖದಿಂದ ತಲೆ ತಗ್ಗಿಸಿಕೊಂಡಿದ್ದಾರೆ.


ಮೂರನೆಯ ದಿನ ಒಬ್ಬ ಯುವ ಸೈನಿಕನು ಚಿಕ್ಲಗಿಗೆ ಬಂದನು. ಈ ಮನುಷ್ಯನು ಸೌಲನಿದ್ದ ಪಾಳೆಯದಿಂದ ಬಂದವನು. ಅವನು ಬಟ್ಟೆಗಳೆಲ್ಲವನ್ನು ಹರಿದುಕೊಂಡಿದ್ದನು; ತಲೆಯ ಮೇಲೆ ಧೂಳನ್ನು ಹಾಕಿಕೊಂಡಿದ್ದನು. ಅವನು ದಾವೀದನ ಬಳಿಗೆ ಬಂದು ಅವನ ಮುಂದೆ, ತನ್ನ ತಲೆಯನ್ನು ನೆಲಕ್ಕೆ ಬಾಗಿಸಿ ನಮಸ್ಕರಿಸಿದನು.


ನಿನೆವೆಯ ಅರಸನು ಇದನ್ನು ಕೇಳಿ ತಾನು ಮಾಡಿದ ದುಷ್ಕೃತ್ಯಗಳಿಗಾಗಿ ಮನಮರುಗಿದನು. ತಾನು ಸಿಂಹಾಸನದಿಂದಿಳಿದು ರಾಜವಸ್ತ್ರವನ್ನು ತೆಗೆದಿಟ್ಟು ಶೋಕವಸ್ತ್ರವನ್ನು ಧರಿಸಿ ಬೂದಿಯ ಮೇಲೆ ಕುಳಿತುಕೊಂಡನು.


ಅವರು ನಿನ್ನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು: “‘ತೂರ್, ನೀನು ಹೆಸರುವಾಸಿಯಾದ ನಗರವಾಗಿದ್ದೆ. ನಿನ್ನಲ್ಲಿ ವಾಸಮಾಡಲು ಜನರು ಸಮುದ್ರದಾಚೆಯಿಂದ ಬಂದರು. ನೀನು ಪ್ರಸಿದ್ಧಳಾಗಿದ್ದೆ, ಆದರೆ ನೀನೀಗ ಹೋಗಿಬಿಟ್ಟೆ. ದ್ವೀಪವಾಗಿರುವ ನೀನು ಮತ್ತು ನಿನ್ನಲ್ಲಿ ವಾಸವಾಗಿದ್ದ ಜನರು ಸಮುದ್ರದಿಂದ ದೂರದಲ್ಲಿರುವುದರಿಂದ ಬಲಿಷ್ಠರಾಗಿದ್ದೀರಿ. ಭೂಮಿಯ ಮೇಲೆ ವಾಸವಾಗಿದ್ದ ಎಲ್ಲಾ ಜನರನ್ನು ನೀವು ಭಯಗೊಳಿಸಿದಿರಿ.


ಆ ದಿನದಂದು ಬೆನ್ಯಾಮೀನ್ ಕುಲದ ಒಬ್ಬನು ದುಃಖದಿಂದ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಧೂಳನ್ನು ಹಾಕಿಕೊಂಡು, ರಣರಂಗದಿಂದ ತಪ್ಪಿಸಿಕೊಂಡು ಓಡಿಹೋದನು.


ಇದನ್ನು ಗತ್‌ನಲ್ಲಿ ತಿಳಿಸಬೇಡಿ. ಅಕ್ಕೊದಲ್ಲಿ ಅಳಬೇಡಿರಿ. ಬೆತ್ ಒಫ್ರದ ಧೂಳಿನಲ್ಲಿ ಹೊರಳಾಡಿರಿ.


ಕುರುಬರೇ, ನೀವು ಕುರಿಗಳಿಗೆ (ಜನಗಳಿಗೆ) ಮುಂದಾಳಾಗಿ ನಡೆಯಬೇಕು. ಮಹಾನಾಯಕರೇ, ನೀವು ಗೋಳಾಡಲು ಪ್ರಾರಂಭಿಸಿರಿ. ಕುರಿಗಳ ಮುಂದಾಳುಗಳಾದ ನೀವು ನೋವಿನಿಂದ ನೆಲದ ಮೇಲೆ ಹೊರಳಾಡಿರಿ. ಏಕೆಂದರೆ ಈಗ ನಿಮ್ಮನ್ನು ವಧಿಸುವ ಕಾಲ ಬಂದಿದೆ. ನಾನು ನಿಮ್ಮ ಕುರಿಗಳನ್ನು ದಿಕ್ಕಾಪಾಲು ಮಾಡಿಬಿಡುತ್ತೇನೆ. ಅವುಗಳು ಒಡೆದ ಪಾತ್ರೆಯ ಚೂರುಗಳಂತೆ ಚೆಲ್ಲಾಪಿಲ್ಲಿಯಾಗುತ್ತವೆ.


ಯೆಹೋವನೇ, ನನ್ನ ವಿಷಯದಲ್ಲಿ ನನಗೇ ನಾಚಿಕೆಯಾಗಿದೆ. ನನಗೆ ಎಷ್ಟೋ ದುಃಖವಾಗಿದೆ. ನಾನು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಳ್ಳುತ್ತೇನೆ. ನನ್ನ ಹೃದಯವನ್ನೂ ಜೀವಿತವನ್ನೂ ಮಾರ್ಪಡಿಸಿಕೊಳ್ಳುವುದಾಗಿ ನಾನು ನಿನಗೆ ವಾಗ್ದಾನ ಮಾಡುತ್ತೇನೆ.”


ಆದರೆ ಆ ಮೂವರು ಸ್ನೇಹಿತರು ಬಹು ದೂರದಿಂದ ಯೋಬನನ್ನು ಕಂಡಾಗ ಅವನ ಗುರುತೇ ಹಿಡಿಯಲಾರದೆ ಗಟ್ಟಿಯಾಗಿ ಅಳತೊಡಗಿದರು; ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಗಳ ಮೇಲೆ ಸುರಿಸಿಕೊಂಡರು.


ಯೋಬನು ಬೂದಿಯಲ್ಲಿ ಕುಳಿತುಕೊಂಡು ತನ್ನ ಕುರುಗಳನ್ನು ಮಡಕೆಯ ಚೂರಿನಿಂದ ಕೆರೆದುಕೊಳ್ಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು