Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:32 - ಪರಿಶುದ್ದ ಬೈಬಲ್‌

32 “‘ಅಳುತ್ತಾ ನಿನಗೆ ಈ ಶೋಕಗೀತೆಯನ್ನು ಹಾಡುವರು: “‘ತೂರಿನಂತೆ ಯಾರಿಲ್ಲ. ಆದರೆ ತೂರ್ ಹಾಳಾಗಿಹೋಯಿತು, ಸಮುದ್ರ ಮಧ್ಯದಲ್ಲಿ ನಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ರೋದನ ಮಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು, ‘ಸಮುದ್ರದ ನಡುವೆ ಹಾಳಾಗಿರುವ ತೂರಿಗೆ ಯಾವ ಪಟ್ಟಣ ಸಮಾನವಾಗಿದೆ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ರೋಧಿಸುವರು, ಪ್ರಲಾಪಿಸುವರು, ಹಾಡುವರು ಶೋಕಗೀತೆಯನ್ನು; ಕಡಲ ನಡುವೆ ಬಿಕೋ ಎನ್ನುವ ಟೈರನ್ನು ಏತಕೆ ಹೋಲಿಸೋಣ? ಎಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರು ರೋದನಮಾಡುತ್ತಾ ನಿನ್ನ ವಿಷಯವಾಗಿ ಶೋಕಗೀತವನೆತ್ತಿ ಹೀಗೆ ಪ್ರಲಾಪಿಸುವರು - ಸಮುದ್ರದ ನಡುವೆ ಬಿಕೋ ಎನ್ನುವ ತೂರಿಗೆ ಯಾವದು ಸಮಾನ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕಗೀತೆಯನ್ನೆತ್ತಿ ಹೀಗೆ ಪ್ರಲಾಪಿಸುವರು; “ಸಮುದ್ರದ ನಡುವೆ ಹಾಳಾಗಿರುವ ಟೈರ್‌ನಂಥ ಪಟ್ಟಣ ಯಾವುದು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:32
9 ತಿಳಿವುಗಳ ಹೋಲಿಕೆ  

ಅವರು ನಿನ್ನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು: “‘ತೂರ್, ನೀನು ಹೆಸರುವಾಸಿಯಾದ ನಗರವಾಗಿದ್ದೆ. ನಿನ್ನಲ್ಲಿ ವಾಸಮಾಡಲು ಜನರು ಸಮುದ್ರದಾಚೆಯಿಂದ ಬಂದರು. ನೀನು ಪ್ರಸಿದ್ಧಳಾಗಿದ್ದೆ, ಆದರೆ ನೀನೀಗ ಹೋಗಿಬಿಟ್ಟೆ. ದ್ವೀಪವಾಗಿರುವ ನೀನು ಮತ್ತು ನಿನ್ನಲ್ಲಿ ವಾಸವಾಗಿದ್ದ ಜನರು ಸಮುದ್ರದಿಂದ ದೂರದಲ್ಲಿರುವುದರಿಂದ ಬಲಿಷ್ಠರಾಗಿದ್ದೀರಿ. ಭೂಮಿಯ ಮೇಲೆ ವಾಸವಾಗಿದ್ದ ಎಲ್ಲಾ ಜನರನ್ನು ನೀವು ಭಯಗೊಳಿಸಿದಿರಿ.


ಬಾಬಿಲೋನಿನ ದಹನದಿಂದೇರುತ್ತಿದ್ದ ಹೊಗೆಯನ್ನು ನೋಡಿ ಅವರು ಗಟ್ಟಿಯಾದ ಧ್ವನಿಯಲ್ಲಿ, ‘ಈ ಮಹಾನಗರಿಯಂತಹ ನಗರವು ಇರಲೇ ಇಲ್ಲ!’ ಎಂದು ಹೇಳಿದರು.


“ನರಪುತ್ರನೇ, ತೂರಿನ ವಿಷಯವಾದ ಶೋಕಗೀತೆಯನ್ನು ಹಾಡು.


ನಿನ್ನನ್ನು ಹುಟ್ಟುಹಾಕುವವರು ಸಮುದ್ರದ ಬಹುದೂರ ನಿನ್ನನ್ನು ನಡಿಸಿದರು. ಆದರೆ ಪೂರ್ವದಿಂದ ಬಂದ ಬಲವುಳ್ಳ ಗಾಳಿಯು ನಿನ್ನನ್ನು ಮುರಿಯುವದು.


ನನ್ನ ಪ್ರಿಯ ಜೆರುಸಲೇಮೇ, ನಾನು ನಿನ್ನ ಬಗ್ಗೆ ಏನು ಹೇಳಲಿ? ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ? ನೀನು ಎಂಥವಳೆಂದು ಹೇಳಲಿ? ನನ್ನ ಚೀಯೋನೇ, ನಾನು ನಿನ್ನನ್ನು ಹೇಗೆ ಸಂತೈಸಲಿ. ನಿನ್ನ ವಿನಾಶವು ಸಾಗರದಷ್ಟು ಅಪಾರ. ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ.


ರಸ್ತೆಯಲ್ಲಿ ಹಾದುಹೋಗುವ ಜನರೇ, ನೀವು ನನ್ನ ಬಗ್ಗೆ ಯೋಚಿಸುವುದಿಲ್ಲವೆಂದು ತೋರುತ್ತದೆ. ನನ್ನ ಕಡೆಗೆ ಗಮನ ಕೊಡಿ. ನನ್ನ ನೋವಿನಂಥ ನೋವು ಮತ್ತೊಂದು ಇದೆಯೇ? ನನಗೆ ಬಂದಂಥ ನೋವು ಇನ್ನಾವುದಾದರೂ ಇದೆಯೇ? ದಂಡನೆಯಾಗಿ ಯೆಹೋವನು ನನಗೆ ಕೊಟ್ಟ ನೋವಿನಂಥ ನೋವು ಮತ್ತೊಂದು ಇದೆಯೇ? ಆತನು ತನ್ನ ಮಹಾಕೋಪದ ದಿನದಂದು ನನ್ನನ್ನು ದಂಡಿಸಿರುವನು.


ನೆಬೂಕದ್ನೆಚ್ಚರನ ಸೈನ್ಯವು ನಿನ್ನ ಐಶ್ವರ್ಯವನ್ನು ದೋಚಿಕೊಳ್ಳುವದು. ನೀನು ಮಾರಬೇಕೆಂದಿದ್ದ ವಸ್ತುಗಳನ್ನು ಅವರು ದೋಚಿಕೊಳ್ಳುವರು. ನಿನ್ನ ಗೋಡೆಗಳನ್ನು ಒಡೆದು ಅಂದವಾದ ನಿನ್ನ ಮನೆಗಳನ್ನು ಹಾಳು ಮಾಡುವರು. ನಿನ್ನ ಮರದಿಂದ ಮತ್ತು ಕಲ್ಲುಗಳಿಂದ ಮಾಡಿದ ಮನೆಗಳನ್ನು ಕಸದಂತೆ ಸಮುದ್ರಕ್ಕೆ ಎಸೆಯುವರು.


“ನರಪುತ್ರನೇ, ತೂರ್ ದೇಶದ ರಾಜನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ: “‘ನೀನೊಬ್ಬ ಆದರ್ಶ ಮನುಷ್ಯನಾಗಿದ್ದೆ. ಸರ್ವಾಂಗಸುಂದರನೂ ಜ್ಞಾನದಿಂದ ತುಂಬಿದವನೂ ಆಗಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು