Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:17 - ಪರಿಶುದ್ದ ಬೈಬಲ್‌

17 ನಿನ್ನ ಸೌಂದರ್ಯವು ನಿನಗೆ ಹೆಮ್ಮೆ ಏರುವಂತೆ ಮಾಡಿತು. ನಿನ್ನ ಘನತೆಯು ನಿನ್ನ ಜ್ಞಾನವನ್ನು ಕೆಡಿಸಿತು. ಆದ್ದರಿಂದ ನಿನ್ನನ್ನು ನೆಲಕ್ಕೆ ದಬ್ಬಿದೆ. ಈಗ ಬೇರೆ ರಾಜರುಗಳು ನಿನ್ನನ್ನೆ ಎವೆಯಿಕ್ಕದೆ ನೋಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “‘ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸೊಬಗಿನ ನಿಮಿತ್ತ ನೀ ಗರ್ವಿಯಾದೆ ಮೆರೆತದಿಂದ ಬುದ್ಧಿಯನ್ನು ಕಳೆದುಕೊಂಡೆ. ಎಂದೇ, ನಾ ನಿನ್ನನ್ನು ದೊಬ್ಬಿಬಿಟ್ಟೆ, ನೆಲಕೆ ಅರಸರ ಕಣ್ಮುಂದೆ ಎಸೆದೆ ಅವರಿಗೆ ಅವರಿಗೆ ನೋಟವಾಗಲೆಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನು ನಿನ್ನ ಸೊಬಗಿನ ನಿವಿುತ್ತ ಉಬ್ಬಿದ ಮನಸ್ಸುಳ್ಳವನಾಗಿ ನಿನ್ನ ಮೆರೆತದಿಂದ ನಿನ್ನ ಬುದ್ಧಿಯನ್ನು ಹಾಳುಮಾಡಿಕೊಂಡಿ; ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗುವಂತೆ ಅವರ ಕಣ್ಣಮುಂದೆ ಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀನು ನಿನ್ನ ಸೌಂದರ್ಯದ ನಿಮಿತ್ತ ಉಬ್ಬಿದ ಮನಸ್ಸುಳ್ಳವನಾದೆ. ನಿನ್ನ ಮೆರೆತದ ನಿಮಿತ್ತ ನಿನ್ನ ಬುದ್ಧಿಯನ್ನು ಕಳೆದುಕೊಂಡೆ. ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗಲೆಂದೆ ಅವರ ಕಣ್ಣಮುಂದೆ ಎಸೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:17
28 ತಿಳಿವುಗಳ ಹೋಲಿಕೆ  

ನಿನ್ನ ವ್ಯಾಪಾರದ ಜಾಣತನದಿಂದ ನಿನ್ನ ಐಶ್ವರ್ಯವು ಬೆಳೆಯುವಂತೆ ಮಾಡಿದ್ದೀ. ಆ ಐಶ್ವರ್ಯದ ಕಾರಣದಿಂದ ನೀನು ಹೆಮ್ಮೆಯಿಂದ ತುಂಬಿರುತ್ತೀ.


ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಆ ಮರವು ಎತ್ತರವಾಗಿ ಬೆಳೆಯಿತು. ಅದರ ತುದಿ ಮುಗಿಲನ್ನು ಮುಟ್ಟಿತು. ಇದು ಅದಕ್ಕೆ ಹೆಮ್ಮೆಯನ್ನು ತಂದಿತು.


“ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “‘ನೀನು ಬಹಳ ಹೆಮ್ಮೆಯುಳ್ಳವನು. “ನಾನು ದೇವರು ಎಂದು ಹೇಳುವೆ. ಸಾಗರದ ಮಧ್ಯದಲ್ಲಿ ದೇವರುಗಳ ಸಿಂಹಾಸನದಲ್ಲಿ ನಾನು ಕೂತಿರುತ್ತೇನೆ ಎಂದು ಅನ್ನುವೆ.” “‘ಆದರೆ ನೀನು ಮನುಷ್ಯನು, ದೇವರಲ್ಲ. ನೀನು ದೇವರೆಂದು ನೀನೇ ನೆನಸಿಕೊಳ್ಳುವೆ.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ಅನೇಕ ಮಂದಿ ನಿನಗೆ ಸಂಭವಿಸಿದ್ದನ್ನು ನೋಡಿ ಚಕಿತರಾಗುವರು. ನಾನು ನಿನ್ನ ಕಡೆಗೆ ಖಡ್ಗ ಬೀಸುವಾಗ ಅವರ ಅರಸರು ಬಹಳ ಭಯಗ್ರಸ್ತರಾಗುವರು; ನೀನು ಬೀಳುವ ದಿವಸದಲ್ಲಿ ಅರಸರು ಹೆದರಿ ನಡುಗುವರು. ಪ್ರತಿಯೊಬ್ಬ ರಾಜನು ತನ್ನ ಜೀವವನ್ನು ಉಳಿಸಿಕೊಳ್ಳಲು ಆತುರಪಡುವನು.”


ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅಪರಿಚಿತರನ್ನು ಕರೆತರುವೆನು. ಅವರು ಎಲ್ಲಾ ಜನಾಂಗಗಳವರಿಗಿಂತ ಕ್ರೂರರು, ಅವರು ತಮ್ಮ ಖಡ್ಗವನ್ನು ಎಳೆದು ನಿನ್ನ ಜ್ಞಾನದಿಂದ ಕೊಂಡುಕೊಂಡಿದ್ದ ಎಲ್ಲಾ ಬೆಲೆಬಾಳುವ ಅಪೂರ್ವ ವಸ್ತುಗಳನ್ನು ನಾಶಮಾಡುವರು.


ಈ ರೀತಿ, ನಾನು ಅವರ ಅವಮಾನಕರವಾದ ನಡತೆಯನ್ನು ದೇಶದಿಂದ ತೆಗೆದುಹಾಕುವೆನು. ಬೇರೆ ಸ್ತ್ರೀಯರು ಇಂಥಾ ನಾಚಿಕೆಗೆಟ್ಟ ಕೆಲಸ ಮಾಡಬಾರದೆಂದು ಎಚ್ಚರಿಸುವರು.


ಬಳಿಕ, ಅನೇಕ ಸ್ತ್ರೀಯರು ನೋಡಲೆಂದು ನಿನ್ನ ಮನೆಗಳನ್ನು ಸುಟ್ಟು, ನಿನ್ನನ್ನು ದಂಡಿಸುವರು. ನೀನು ಸೂಳೆಯಂತೆ ಜೀವಿಸುವದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯತಮರಿಗೆ ಹಣ ಕೊಡುವದನ್ನು ನಿಲ್ಲಿಸುತ್ತೇನೆ.


ಆ “ಜ್ಞಾನಿಗಳು” ಯೆಹೋವನ ಉಪದೇಶವನ್ನು ಕೇಳಲು ಒಪ್ಪಲಿಲ್ಲ. ಆದ್ದರಿಂದ ಅವರು ನಿಜವಾದ ಜ್ಞಾನಿಗಳಲ್ಲವೇ ಅಲ್ಲ. ಆ “ಜ್ಞಾನಿಗಳು” ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಗಾಬರಿಪಟ್ಟಿದ್ದಾರೆ ಮತ್ತು ನಾಚಿಕೆಪಟ್ಟಿದ್ದಾರೆ. ಅವರ ಜ್ಞಾನವು ಅಪ್ರಯೋಜಕವಾಗಿದೆ.


ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ.


ದುರಾಭಿಮಾನಿಗಳು ನಾಚಿಕೆಗೀಡಾಗುವರು; ದೀನರು ಜ್ಞಾನಿಗಳಾಗಿದ್ದಾರೆ.


ಯೆಹೋವನು ದೀನರಿಗೆ ಆಧಾರವಾಗಿದ್ದಾನೆ. ದುಷ್ಟರನ್ನಾದರೋ ನಾಚಿಕೆಗೆ ಗುರಿಪಡಿಸುವನು.


ನೀನು ಅವರನ್ನು ಅಪಾಯಕರವಾದ ಪರಿಸ್ಥಿತಿಯಲ್ಲಿ ಇಟ್ಟಿರುವೆ. ಅವರು ಸುಲಭವಾಗಿ ಬಿದ್ದು ನಾಶವಾಗುವರು.


ಆದರೆ ದ್ರಾಕ್ಷಾಲತೆಯು ಬೇರು ಸಮೇತ ಕಿತ್ತುಹಾಕಲ್ಪಟ್ಟಿತು. ಅದು ನೆಲದ ಮೇಲೆ ಬಿಸಾಡಲ್ಪಟ್ಟಿತು. ಪೂರ್ವದ ಬಿಸಿಗಾಳಿಯು ಅದರ ಹಣ್ಣುಗಳನ್ನು ಒಣಗಿಸಿತು. ಅದರ ಬಲವಾದ ಕೊಂಬೆಗಳು ಮುರಿಯಲ್ಪಟ್ಟವು. ಅವುಗಳನ್ನು ಬೆಂಕಿಯು ಸುಟ್ಟುಹಾಕಿತು.


ಆಗ ಸಮುದ್ರ ತೀರದ ದೇಶಗಳ ನಾಯಕರೆಲ್ಲಾ ತಮ್ಮ ಸಿಂಹಾಸನದಿಂದ ಕೆಳಗಿಳಿದು ತಮ್ಮ ಶೋಕವನ್ನು ವ್ಯಕ್ತಪಡಿಸುವರು. ಅವರು ತಮ್ಮ ಸುಂದರವಾದ ರಾಜವಸ್ತ್ರಗಳನ್ನು ತೆಗೆದಿಟ್ಟು ಭಯದ ಬಟ್ಟೆಗಳನ್ನು ಧರಿಸಿಕೊಂಡು ನೆಲದ ಮೇಲೆ ಭಯದಿಂದ ಕುಳಿತುಕೊಳ್ಳುವರು. ನೀನು ಎಷ್ಟು ಬೇಗನೇ ನಾಶವಾದೆ ಎಂದು ಕೇಳಿ ದಂಗುಬಡಿದಂತಾಗುವರು.


ಅದರ ಬಗ್ಗೆ ಈ ರೀತಿಯಾಗಿ ಹೇಳು: “‘ತೂರೇ, ನೀನು ಸಮುದ್ರಕ್ಕೆ ಬಾಗಿಲು. ಅನೇಕ ದೇಶಗಳಿಗೆ ನೀನು ವ್ಯಾಪಾರಿ. ಕರಾವಳಿಯ ಅನೇಕ ದೇಶಗಳಿಗೆ ನೀನು ಪ್ರಯಾಣಿಸುವೆ.’ ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ. ತೂರೇ, ನೀನು ಅತಿ ಸುಂದರಳೆಂದು ಭಾವಿಸಿರುವೆ. ನೀನು ಪರಿಪೂರ್ಣ ಸುಂದರಳೆಂದು ತಿಳಿದಿರುವೆ.


ಭೂಮಧ್ಯ ಸಮುದ್ರವು ನಿನ್ನ ಸುತ್ತಲೂ ಮೇರೆಯಂತಿದೆ. ನಿನ್ನನ್ನು ಕಟ್ಟಿದವರು ಅಂದವಾಗಿಯೇ ಕಟ್ಟಿದರು. ನಿನ್ನಿಂದ ಹೊರಡುವ ಹಡಗುಗಳಂತೆ ನೀನು ಸುಂದರವಾಗಿರುವೆ.


ನಾನು ನಿನ್ನನ್ನು ಸೃಷ್ಟಿಸಿದಾಗ ನೀನು ಸದ್ಗುಣಿಯಾಗಿ ನಿರ್ದೋಷಿಯಾಗಿದ್ದಿ. ಆದರೆ ನೀನು ದುಷ್ಟನಾಗುತ್ತಾ ಬಂದೆ.


ಯೆಹೋವನು ಜನರ ಉನ್ನತವಾದ ಗೋಡೆಗಳನ್ನೂ ಸುರಕ್ಷಿತ ಸ್ಥಳಗಳನ್ನೂ ನಾಶಮಾಡುವನು. ಯೆಹೋವನು ಅವುಗಳನ್ನೆಲ್ಲಾ ನೆಲಸಮಮಾಡಿ ಧೂಳಿಗೇ ತರುವನು.


ಆದರೆ ಯೆಹೋವನು ಗರ್ವದ ನಗರವನ್ನು ನಾಶಮಾಡುವನು. ಅಲ್ಲಿ ವಾಸಿಸುವವರನ್ನು ಆತನು ಶಿಕ್ಷಿಸುತ್ತಾನೆ. ಯೆಹೋವನು ಆ ಉನ್ನತವಾದ ನಗರವನ್ನು ಧೂಳಿಗೆ ಹಾಕಿಬಿಡುವನು.


ಉತ್ತರದ ಸೈನ್ಯವು ಸೋತು ಸೆರೆಯಾಗುವುದು. ದಕ್ಷಿಣ ರಾಜನು ತುಂಬ ಜಂಬಪಡುವನು ಮತ್ತು ಉತ್ತರದ ರಾಜನ ಸಾವಿರಾರು ಜನ ಸೈನಿಕರ ವಧೆ ಮಾಡುವನು. ಆದರೆ ಅವನು ಜಯಶೀಲನಾಗಿ ಮುಂದುವರೆಯುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು