Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:4 - ಪರಿಶುದ್ದ ಬೈಬಲ್‌

4 ನಿನ್ನ ಜ್ಞಾನ ಮತ್ತು ತಿಳುವಳಿಕೆಯಿಂದ ನೀನು ಐಶ್ವರ್ಯವನ್ನು ಕೂಡಿಹಾಕಿದ್ದೀ. ನಿನ್ನ ಖಜಾನೆಯಲ್ಲಿ ಬೆಳ್ಳಿಬಂಗಾರವನ್ನು ಶೇಖರಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಜ್ಞಾನದಿಂದಲೂ, ನಿನ್ನ ವಿವೇಕದಿಂದಲೂ ನೀನು ಐಶ್ವರ್ಯವನ್ನು ಹೆಚ್ಚಿಸಿಕೊಂಡಿರುವೆ. ನಿನ್ನ ಭಂಡಾರಗಳಲ್ಲಿ ಬೆಳ್ಳಿಯನ್ನೂ, ಬಂಗಾರವನ್ನು ತುಂಬಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಜ್ಞಾನವಿವೇಕಗಳಿಂದ ಐಶ್ವರ್ಯವನ್ನು ಗಳಿಸಿ, ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ಜ್ಞಾನವಿವೇಕಗಳಿಂದ ನೀನು ಐಶ್ವರ್ಯವನ್ನು ಗಳಿಸಿ ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿಕೊಂಡಿದ್ದೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿನ್ನ ಜ್ಞಾನದಿಂದಲೂ ನಿನ್ನ ವಿವೇಕದಿಂದಲೂ ನಿನಗೆ ಐಶ್ವರ್ಯವನ್ನು ಗಳಿಸಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:4
11 ತಿಳಿವುಗಳ ಹೋಲಿಕೆ  

ಐಶ್ವರ್ಯವು ತಮ್ಮನ್ನು ಬಲವಾದ ಕೋಟೆಯಂತೆ ಕಾಪಾಡುತ್ತದೆ ಎಂಬುದು ಐಶ್ವರ್ಯವಂತರ ಭಾವನೆ.


ಅವನ ಬಲೆಗಳು ಅವನು ಧನಿಕನಂತೆ ಜೀವಿಸಲು ಸಹಾಯ ಮಾಡುವವು. ಅವನು ಒಳ್ಳೆಯ ಆಹಾರವನ್ನು ಉಣ್ಣುವನು. ಅದಕ್ಕೆ ವೈರಿಯು ತನ್ನ ಬಲೆಯನ್ನು ಆರಾಧಿಸುವನು. ಅವನು ಯಜ್ಞವನ್ನರ್ಪಿಸಿ ಧೂಪ ಹಾಕುವನು. ಬಲೆಯನ್ನು ಗೌರವಿಸುವನು.


‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ ಎಂದು ಅವರಿಗೆ ತಿಳಿಸು, “‘ಈಜಿಪ್ಟಿನ ರಾಜನಾದ ಫರೋಹನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನೀನು ನೈಲ್ ನದಿಯ ದಡದಲ್ಲಿ ಮಲಗಿರುವ ಪೇರ್ಮೊಸಳೆ, “ಇದು ನಾನು ನಿರ್ಮಿಸಿದ ಹೊಳೆ” ಎಂದು ನೀನು ಹೇಳಿಕೊಳ್ಳುವೆ.


ಇದಲ್ಲದೆ ಲೋಕದಲ್ಲಿ ಇನ್ನೂ ಕೆಲವು ಅನ್ಯಾಯಗಳನ್ನು ಗಮನಿಸಿದ್ದೇನೆ. ಅತಿವೇಗದ ಓಟಗಾರನಿಗೆ ಓಟದಲ್ಲಿ ಯಾವಾಗಲೂ ಗೆಲುವಾಗದು; ಬಲಿಷ್ಠವಾದ ಸೈನ್ಯಕ್ಕೆ ಯುದ್ಧದಲ್ಲಿ ಯಾವಾಗಲೂ ಜಯವಾಗದು; ಜ್ಞಾನಿಗೆ ಯಾವಾಗಲೂ ಆಹಾರ ದೊರಕದು; ಜಾಣನಿಗೆ ಯಾವಾಗಲೂ ಐಶ್ವರ್ಯ ದೊರೆಯದು; ಪ್ರವೀಣರಿಗೆ ಯಾವಾಗಲೂ ಹೊಗಳಿಕೆಬಾರದು; ಸಮಯ ಬಂದಾಗ, ಪ್ರತಿಯೊಬ್ಬರಿಗೂ ಕೇಡುಗಳಾಗುತ್ತವೆ.


ಅಶ್ಶೂರದ ಅರಸನು ಹೇಳುವುದೇನೆಂದರೆ, “ನಾನು ಜ್ಞಾನಿಯಾಗಿದ್ದೇನೆ, ನನ್ನ ಸ್ವಂತ ಜ್ಞಾನದಿಂದಲೂ ಸಾಮರ್ಥ್ಯದಿಂದಲೂ ನಾನು ಅನೇಕ ಮಹಾಕಾರ್ಯಗಳನ್ನು ನಡಿಸಿದ್ದೇನೆ. ಅನೇಕ ಜನಾಂಗಗಳನ್ನು ಸೋಲಿಸಿದ್ದೇನೆ; ಅವರ ಐಶ್ವರ್ಯಗಳನ್ನು ಸೂರೆಮಾಡಿದ್ದೇನೆ. ಅವರ ಜನರನ್ನು ನನ್ನ ಗುಲಾಮರನ್ನಾಗಿ ಮಾಡಿದ್ದೇನೆ. ನಾನು ಮಹಾ ವೀರನಾಗಿರುವೆ.


ನೀನು ನಿನ್ನ ಬಲದ ಬಗ್ಗೆ ಜಂಬ ಕೊಚ್ಚಿಕೊಳ್ಳುತ್ತಿರುವೆ, ಆದರೆ ನೀನು ನಿನ್ನ ಬಲವನ್ನು ಕಳೆದುಕೊಳ್ಳುತ್ತಿರುವೆ. ನಿನ್ನ ಹಣ ನಿನ್ನನ್ನು ರಕ್ಷಿಸುವದೆಂದು ನೀನು ನಂಬಿರುವೆ. ಯಾರೂ ನಿನ್ನ ಮೇಲೆ ಧಾಳಿಮಾಡುವ ವಿಚಾರ ಸಹ ಇಟ್ಟುಕೊಂಡಿಲ್ಲವೆಂದು ನೀನು ತಿಳಿದುಕೊಂಡಿರುವೆ.”


ನಿನ್ನ ವ್ಯಾಪಾರಿಗಳು ಸಮುದ್ರದಾಚೆ ಹೋದರು; ನೀನು ಅನೇಕರನ್ನು ತೃಪ್ತಿಗೊಳಿಸಿದಿ. ನಿನ್ನ ಐಶ್ವರ್ಯದಿಂದಲೂ ನೀನು ಮಾರಿದ ಸರಕುಗಳಿಂದಲೂ ನೀನು ಲೋಕದ ರಾಜರನ್ನು ಐಶ್ವರ್ಯವಂತರನ್ನಾಗಿ ಮಾಡಿದಿ.


ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು