Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:14 - ಪರಿಶುದ್ದ ಬೈಬಲ್‌

14 ಸೆರೆಹಿಡಿಯಲ್ಪಟ್ಟ ಈಜಿಪ್ಟರನ್ನು ಪತ್ರೋಸ್ ದೇಶಕ್ಕೆ ಬರಮಾಡುವೆನು. ಅವರ ಜನ್ಮಸ್ಥಳಕ್ಕೆ ಅವರನ್ನು ತಿರುಗಿ ಬರಮಾಡುವೆನು. ಆದರೆ ಅವರ ರಾಜ್ಯಕ್ಕೆ ಮಹತ್ವವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಐಗುಪ್ತದ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮ ಭೂಮಿಯಾದ ಪತ್ರೋಸ್ ದೇಶಕ್ಕೆ ಪುನಃ ಬರಮಾಡುವೆನು; ಅಲ್ಲೇ ಅವರು ಕನಿಷ್ಠ ರಾಜ್ಯದವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈಜಿಪ್ಟಿನ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮಭೂಮಿಯಾದ ದಕ್ಷಿಣ ಈಜಿಪ್ಟಿಗೆ ಪುನಃ ಬರಮಾಡುವೆನು. ಅಲ್ಲೇ ಅವರು ನಿಕೃಷ್ಟ ರಾಜ್ಯದವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರ ಜನ್ಮಭೂವಿುಯಾದ ಪತ್ರೋಸ್ ದೇಶಕ್ಕೆ ಪುನಃ ಬರಮಾಡುವೆನು; ಅಲ್ಲೇ ಅವರು ನಿಕೃಷ್ಟ ರಾಜ್ಯದವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಈಜಿಪ್ಟಿನವರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸ್ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡುವೆನು. ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:14
8 ತಿಳಿವುಗಳ ಹೋಲಿಕೆ  

ಪತ್ರೋಸನ್ನು ನಾನು ಬರಿದಾಗಿ ಮಾಡುವೆನು. ಸೋನಿನಲ್ಲಿ ಬೆಂಕಿಯನ್ನು ಬರಮಾಡುವೆನು. ತೆಬೆಸವನ್ನು ನಾನು ಶಿಕ್ಷಿಸುವೆನು.


ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.


ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಈ ಸಂದೇಶವನ್ನು ಈಜಿಪ್ಟಿನಲ್ಲಿ ವಾಸಿಸಿದ ಎಲ್ಲಾ ಯೆಹೂದ್ಯರಿಗಾಗಿ ಕೊಡಲಾಗಿತ್ತು. ಈ ಸಂದೇಶವು ಮಿಗ್ದೋಲ್, ತಹಪನೇಸ್, ನೋಫ್ ಪಟ್ಟಣಗಳಲ್ಲಿ ಮತ್ತು ಈಜಿಪ್ಟಿನ ದಕ್ಷಿಣ ಭಾಗದಲ್ಲಿ ವಾಸಮಾಡುತ್ತಿದ್ದ ಯೆಹೂದ್ಯರಿಗಾಗಿ ಇತ್ತು. ಆ ಸಂದೇಶವೇನೆಂದರೆ:


ಪತ್ರುಸ್ಯರಿಗೂ ಕಸ್ಲುಹ್ಯರಿಗೂ ಕಪ್ತೋರ್ಯರಿಗೂ ಮೂಲಪಿತೃ. ಫಿಲಿಷ್ಟಿಯರು ಕಸ್ಲುಹ್ಯರಿಂದ ಬಂದವರು.


ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಅನೇಕ ಯೆಹೂದಿ ಸ್ತ್ರೀಯರು ಬೇರೆ ದೇವರುಗಳಿಗೆ ನೈವೇದ್ಯಗಳನ್ನು ಅರ್ಪಿಸುತ್ತಿದ್ದರು. ಅವರ ಗಂಡಂದಿರಿಗೆ ಅದು ಗೊತ್ತಿತ್ತು. ಆದರೆ ಅವರು ಅದನ್ನು ತಡೆಯಲಿಲ್ಲ. ಯೆಹೂದದ ಜನರ ಒಂದು ದೊಡ್ಡ ಗುಂಪು ಸೇರಿತ್ತು. ಅವರು ಈಜಿಪ್ಟಿನ ದಕ್ಷಿಣಭಾಗದಲ್ಲಿ ವಾಸಿಸುವ ಯೆಹೂದಿಗಳಾಗಿದ್ದರು. ಅನ್ಯದೇವರುಗಳಿಗೆ ನೈವೇದ್ಯವನ್ನು ಅರ್ಪಿಸುತ್ತಿದ್ದ ಸ್ತ್ರೀಯರ ಗಂಡಂದಿರು ಯೆರೆಮೀಯನಿಗೆ ಹೀಗೆಂದರು:


ಯೆಹೂದ ರಾಜ್ಯವು ದೀನತೆಯಿಂದಿದ್ದು ದಂಗೆ ಏಳದೆ ತನ್ನ ಒಪ್ಪಂದಕ್ಕೆ ಶಾಶ್ವತವಾಗಿ ಬದ್ಧವಾಗಿರಬೇಕೆಂಬುದು ನೆಬೂಕದ್ನೆಚ್ಚರನ ಬಯಕೆಯಾಗಿತ್ತು.


ಇದು ಹಿಂದಿನ ಕಾಲದಲ್ಲಿ ದೇವರು ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದಂತೆ ಇರುವದು. ಆತನು ಸಮುದ್ರದ ತೆರೆಗಳನ್ನು ಬಡಿದು ಅದು ಇಬ್ಭಾಗವಾಗುವಂತೆ ಮಾಡಿದನು. ಜನರು ಸಂಕಟದ ಸಮುದ್ರದ ಮಧ್ಯದಲ್ಲಿ ದಾಟಿಹೋದರು. ಯೆಹೋವನು ಹೊಳೆಗಳನ್ನು ಬತ್ತಿಸಿಬಿಡುವನು. ಆತನು ಅಶ್ಯೂರ್ಯದ ಜಂಬವನ್ನೂ ಈಜಿಪ್ಟಿನ ಬಲವನ್ನೂ ಮುರಿಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು