Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:4 - ಪರಿಶುದ್ದ ಬೈಬಲ್‌

4 “‘ಆದರೆ ನಾನು ನಿನ್ನ ದವಡೆಗಳಿಗೆ ಕೊಂಡಿಗಳನ್ನು ಸಿಕ್ಕಿಸುವೆನು. ನೈಲ್ ನದಿಯ ಮೀನುಗಳು ನಿನ್ನ ಪೊರೆಗಳಿಗೆ ಸಿಲುಕಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನಾನು ನಿನ್ನ ದವಡೆಗಳಿಗೆ ಗಾಳ ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ, ಆ ಮೀನುಗಳ ಸಹಿತ ನಿನ್ನನ್ನು ನೈಲ್ ನದಿಯ ಮಧ್ಯದೊಳಗಿಂದ ಹೊರಗೆ ಎಳೆದು ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ನಿನ್ನ ದವಡೆಗಳಿಗೆ ಗಾಳಹಾಕುವೆನು; ನಿನ್ನ ನದಿಯ ಮೀನುಗಳು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ಅಂಟಿಕೊಂಡಿರುವ ಆ ಮೀನುಗಳ ಸಹಿತ ನಿನ್ನನ್ನು ನಿನ್ನ ನದಿಯ ಮಧ್ಯೆಯಿಂದ ಈಚೆಗೆ ಎಳೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನಿನ್ನ ದವಡೆಗಳಿಗೆ ಗಾಳಹಾಕಿ ನಿನ್ನ ನದಿಯ ಮೀನುಗಳು ನಿನ್ನ ಬೆನ್ನುಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ಅಂಟಿಕೊಂಡಿರುವ ಆ ಮೀನುಗಳ ಸಹಿತ ನಿನ್ನನ್ನು ನಿನ್ನ ನದಿಯ ಮಧ್ಯದೊಳಗಿಂದ ಈಚೆಗೆ ಎಳೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಯೊಳಗಿಂದ ಮೇಲೆ ಎಳೆದು ನಿನ್ನ ಮೀನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:4
7 ತಿಳಿವುಗಳ ಹೋಲಿಕೆ  

ನಾನು ನಿನ್ನ ದವಡೆಗೆ ಕೊಕ್ಕೆ ಹಾಕಿ ನಿನ್ನನ್ನು ಸೆರೆಹಿಡಿದುಕೊಂಡು ಬರುವೆನು. ನಿನ್ನೆಲ್ಲಾ ಭೂಸೈನಿಕರನ್ನೂ ನಿನ್ನೆಲ್ಲಾ ಕುದುರೆಗಳನ್ನೂ ನಿನ್ನೆಲ್ಲಾ ರಾಹುತರನ್ನೂ ಬಂಧಿಸಿ ತರುವೆನು. ನಿನ್ನ ಸೈನಿಕರು ಸಮವಸ್ತ್ರಧಾರಿಗಳಾಗಿ ಖೇಡ್ಯಶಿರಸ್ತ್ರಾಣಗಳನ್ನು ತೊಟ್ಟುಕೊಂಡಿರುವಾಗಲೇ ಅವರನ್ನು ಬಂಧಿಸಿ ತರುವೆನು.


ನೀನು ನನ್ನ ವಿರುದ್ಧ ದಂಗೆ ಎದ್ದಿರುವೆ. ನಿನ್ನ ಗರ್ವದ ನಿಂದನೆಯನ್ನು ನಾನು ಕೇಳಿರುವೆ. ಆದ್ದರಿಂದ ನಾನು ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ ನೀನು ಬಂದ ದಾರಿಯಲ್ಲಿಯೇ ಹಿಂದಿರುಗುವಂತೆ ಮಾಡುತ್ತೇನೆ.”


ನನ್ನ ಒಡೆಯನಾದ ಯೆಹೋವನು ಒಂದು ವಾಗ್ದಾನ ಮಾಡಿರುತ್ತಾನೆ. ಆತನ ಪರಿಶುದ್ಧತೆಯ ಮೇಲೆ ಆಣೆಹಾಕಿ ವಾಗ್ದಾನ ಮಾಡಿರುತ್ತಾನೆ. ಏನೆಂದರೆ ನಿಮ್ಮ ಮೇಲೆ ಸಂಕಟಗಳು ಬರುವವು. ಜನರು ನಿಮಗೆ ಕೊಕ್ಕೆ ಸಿಕ್ಕಿಸಿ ಕೈದಿಗಳನ್ನಾಗಿ ಮಾಡಿ ಎಳೆದುಕೊಂಡು ಹೋಗುವರು. ನಿಮ್ಮ ಮಕ್ಕಳನ್ನು ಮೀನಿನ ಗಾಳಗಳಿಗೆ ಸಿಕ್ಕಿಸಿ ಎಳೆದುಕೊಂಡು ಹೋಗುವರು.


ಹೌದು, ನೀನು ನನ್ನ ವಿಷಯದಲ್ಲಿ ಕೋಪಗೊಂಡಿರುವೆ. ಗರ್ವದಿಂದ ತುಂಬಿದ ನಿನ್ನ ಪರಿಹಾಸ್ಯದ ಮಾತುಗಳನ್ನು ನಾನು ಕೇಳಿದ್ದೇನೆ. ನಾನು ನಿನ್ನ ಮೂಗಿಗೆ ಕೊಕ್ಕೆ ಸಿಕ್ಕಿಸಿ, ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ, ನೀನು ಎಲ್ಲಿಂದ ಬಂದಿದ್ದೆಯೋ ಅಲ್ಲಿಗೆ ನಿನ್ನನ್ನು ಹಿಂತಿರುಗಿಸುತ್ತೇನೆ.”


ಆ ಜನರ ಮೃತ ಶರೀರಗಳು ದೇಶದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಬಿದ್ದಿರುವವು. ಆ ಸತ್ತಜನರಿಗಾಗಿ ಯಾರೂ ಅಳುವದಿಲ್ಲ. ಯಾರೂ ಅವರ ಶವಗಳನ್ನು ಒಟ್ಟುಗೂಡಿಸಿ ಹೂಳುವದಿಲ್ಲ. ಅವುಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು