Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:5 - ಪರಿಶುದ್ದ ಬೈಬಲ್‌

5 ನಾನು ನಿನ್ನನ್ನೂ ನಿನ್ನ ಮೀನುಗಳನ್ನೂ ನೀರಿನೊಳಗಿಂದ ಹೊರಕ್ಕೆತ್ತಿ ಒಣನೆಲದ ಮೇಲೆ ಹಾಕುವೆನು. ನೀನು ನೆಲದ ಮೇಲೆ ಬೀಳುವೆ. ಯಾರೂ ನಿನ್ನನ್ನು ಮೇಲಕ್ಕೆ ಎತ್ತುವುದೂ ಇಲ್ಲ ಹೂಣಿಡುವುದೂ ಇಲ್ಲ. ನಾನು ನಿನ್ನನ್ನು ಕಾಡುಪ್ರಾಣಿಗಳಿಗೂ ಪಕ್ಷಿಗಳಿಗೂ ಕೊಡುವೆನು. ಅವರಿಗೆ ನೀನು ಆಹಾರವಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನನ್ನೂ, ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಅರಣ್ಯದ ಪಾಲು ಮಾಡುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಹೂಣಿಡುವುದೂ ಇಲ್ಲ, ಸೇರಿಸುವುದೂ ಇಲ್ಲ; ನಾನು ನಿನ್ನನ್ನು ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನನ್ನೂ ನಿನ್ನ ಎಲ್ಲ ಮೀನುಗಳನ್ನೂ ಕಾಡುಪಾಲು ಮಾಡುವೆನು; ನೀನು ಬಯಲಿನಲ್ಲಿ ಬಿದ್ದಿರುವೆ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಿನ್ನನ್ನು ಭೂಜಂತುಗಳಿಗೂ ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು; ನೀನು ಬೈಲಿನಲ್ಲಿ ಬಿದ್ದಿರುವಿ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಾನು ನಿನ್ನನ್ನು ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನನ್ನೂ ನಿನ್ನ ನದಿಗಳ ಮೀನುಗಳನ್ನೂ ಅರಣ್ಯದಲ್ಲಿ ಹಾಕುವೆನು. ನೀನು ಬಯಲುಗಳ ಮೇಲೆ ಬಿದ್ದಿರುವೆ; ನಿನ್ನನ್ನು ಯಾರೂ ಹೊರುವುದೂ ಇಲ್ಲ, ಸೇರಿಸುವುದೂ ಇಲ್ಲ. ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು. ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರವನ್ನಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:5
15 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ಆ ಜನರನ್ನು ಅವರ ವೈರಿಗಳಿಗೆ ಮತ್ತು ಅವರನ್ನು ಕೊಲ್ಲಲು ಇಚ್ಛಿಸುವ ಪ್ರತಿಯೊಬ್ಬರಿಗೆ ಕೊಡುತ್ತೇನೆ. ಆ ಜನರ ದೇಹಗಳು ಗಾಳಿಯಲ್ಲಿ ಹಾರಾಡುವ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.


ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.


ಆಗ ಸತ್ತವರ ದೇಹಗಳು ಭೂಮಿಯ ಮೇಲೆ ಬಿದ್ದಿರುತ್ತವೆ; ಅವು ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಆಹಾರವಾಗುತ್ತವೆ. ಆ ಪಕ್ಷಿಗಳನ್ನು ಮತ್ತು ಪ್ರಾಣಿಗಳನ್ನು ಓಡಿಸುವದಕ್ಕೆ ಒಬ್ಬನಾದರೂ ಜೀವಂತವಾಗಿರುವುದಿಲ್ಲ.


ಆ ಜನರ ಮೃತ ಶರೀರಗಳು ದೇಶದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಬಿದ್ದಿರುವವು. ಆ ಸತ್ತಜನರಿಗಾಗಿ ಯಾರೂ ಅಳುವದಿಲ್ಲ. ಯಾರೂ ಅವರ ಶವಗಳನ್ನು ಒಟ್ಟುಗೂಡಿಸಿ ಹೂಳುವದಿಲ್ಲ. ಅವುಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವವು.


“ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಬಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನ್ನನ್ನು ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನ್ನು ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವೆ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವೆ. “ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.


“ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನ್ನು ಯಾರೂ ಹೂಳುವುದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನ್ನವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.”


ಲಿವ್ಯಾತಾನನ ತಲೆಗಳನ್ನು ಜಜ್ಜಿಹಾಕಿ ಪ್ರಾಣಿಗಳಿಗೆ ಆಹಾರವನ್ನಾಗಿ ಮಾಡಿದಾತನು ನೀನೇ.


ಗೊಲ್ಯಾತನು ದಾವೀದನಿಗೆ, “ಬಾ ಇಲ್ಲಿಗೆ, ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಪ್ರಾಣಿಗಳಿಗೂ ಆಹಾರವನ್ನಾಗಿ ಮಾಡುತ್ತೇನೆ!” ಎಂದನು.


ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.


ಕೆಳಗೆ ಬಿದ್ದ ಮರದ ಮೇಲೆ ಪಕ್ಷಿಗಳು ವಾಸಿಸಿದವು. ಕೆಳಗೆ ಬಿದ್ದ ಅದರ ಕೊಂಬೆಗಳ ಮೇಲೆ ಕಾಡುಪ್ರಾಣಿಗಳು ನಡೆದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು