Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:20 - ಪರಿಶುದ್ದ ಬೈಬಲ್‌

20 “ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ನಾನು ಅವನ ಮುಂದೆ ಒಡ್ಡಿದ ಆಟಂಕವನ್ನು ಎಡವಿದರೆ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆ ಬಾರವು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡತಡೆಯನ್ನು ಇಡುವೆನು, ಅವನು ಸಾಯುವನು. ನೀನು ಅವನನ್ನು ಎಚ್ಚರಿಸದೆ ಇದ್ದುದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು. ಅವನು ಮಾಡಿರುವ ಸುಕೃತ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಸಾವಿಗೆ ನೀನೇ ಹೊಣೆಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:20
41 ತಿಳಿವುಗಳ ಹೋಲಿಕೆ  

“ಒಂದುವೇಳೆ ಒಳ್ಳೆಯವನೊಬ್ಬನು ತನ್ನ ಒಳ್ಳೆಯತನವನ್ನು ಬಿಟ್ಟು ಪಾಪ ಮಾಡಬಹುದು; ದುಷ್ಟರು ಮಾಡುವ ಅಸಹ್ಯಕೃತ್ಯಗಳನ್ನೆಲ್ಲ ಮಾಡಬಹುದು. ಅವನು ಹೀಗೆ ಮಾಡುತ್ತಾ ಬದುಕಲು ಸಾಧ್ಯವೇ ಇಲ್ಲ! ಅವನು ಅಪನಂಬಿಗಸ್ತನಾದ್ದರಿಂದ ಮತ್ತು ಪಾಪ ಮಾಡಿದ್ದರಿಂದ ದೇವರು ಅವನ ಎಲ್ಲಾ ಒಳ್ಳೆಯ ಕಾರ್ಯಗಳನ್ನೂ ಮರೆತುಬಿಡುವನು. ಅವನು ತನ್ನ ಪಾಪಗಳ ದೆಸೆಯಿಂದ ಸಾಯುವನು.”


ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸಬೇಕು. ಅವನು ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವದಕ್ಕಾಗಿ ತನ್ನ ಜೀವಿತವನ್ನು ಮಾರ್ಪಡಿಸಿಕೊಂಡು ದುಷ್ಕೃತ್ಯ ನಿಲ್ಲಿಸಬೇಕೆಂದು ನೀನು ಅವನಿಗೆ ಹೇಳಬೇಕು. ನೀನು ಅವನನ್ನು ಎಚ್ಚರಿಸದಿದ್ದರೆ ಅವನು ತನ್ನ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೇ ಹೊಣೆಗಾರನನ್ನಾಗಿ ಮಾಡುತ್ತೇನೆ.


ನೀತಿವಂತನು ನಂಬಿಕೆಯಿಂದಲೇ ಜೀವವನ್ನು ಹೊಂದಿಕೊಳ್ಳುವನು. ಆದರೆ ಅವನು ಭಯದಿಂದ ಹಿಂಜರಿದರೆ ನಾನು ಅವನಲ್ಲಿ ಸಂತೋಷಪಡುವುದಿಲ್ಲ.”


ಒಬ್ಬ ಒಳ್ಳೆಯವನು ಬದಲಾವಣೆ ಹೊಂದಿ ಕೆಟ್ಟಕಾರ್ಯಗಳನ್ನು ಮಾಡಿದರೆ, ಅವನ ದುಷ್ಟತ್ವಕ್ಕಾಗಿ ಅವನು ಸಾಯಲೇಬೇಕು.


ದುಷ್ಟರು ಕುತಂತ್ರಗಳನ್ನು ಮಾಡುವರು. ಯೆಹೋವನು ಅವರನ್ನು ದಂಡಿಸುವನು. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.


ಕ್ರಿಸ್ತನ ಶತ್ರುಗಳು ನಮ್ಮ ಗುಂಪಿನಲ್ಲೇ ಇದ್ದರು. ಅವರು ನಮ್ಮನ್ನು ಬಿಟ್ಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ. ಅವರು ನಿಜವಾಗಿಯೂ ನಮ್ಮ ಸಭೆಗೆ ಸೇರಿದವರಾಗಿದ್ದರೆ ನಮ್ಮೊಂದಿಗೆ ಇರುತ್ತಿದ್ದರು. ಆದರೆ ಅವರು ಹೊರಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ ಎಂಬುದನ್ನು ಇದೇ ತೋರ್ಪಡಿಸುತ್ತದೆ.


ನಂಬದಿರುವ ಜನರಿಗೆ ಆತನು: “ಜನರನ್ನು ಮುಗ್ಗರಿಸುವ ಕಲ್ಲೂ ಜನರನ್ನು ಬೀಳಿಸುವ ಕಲ್ಲೂ ಆಗಿದ್ದಾನೆ.” ದೇವರ ಮಾತಿಗೆ ಅವಿಧೇಯರಾಗುವುದರಿಂದಲೇ ಜನರು ಮುಗ್ಗರಿಸಿ ಬೀಳುವರು. ಆ ಜನರಿಗೆ ಹೀಗಾಗಬೇಕೆಂಬುದು ದೇವರ ಯೋಜನೆಯಾಗಿತ್ತು.


ಒಬ್ಬ ಒಳ್ಳೆಯ ಮನುಷ್ಯನು ತನ್ನ ಶಿಷ್ಟತ್ವವನ್ನು ಬಿಟ್ಟು ಪಾಪದ ಮಾರ್ಗದಲ್ಲಿ ನಡೆದರೆ ಅವನು ಅವನ ಪಾಪಗಳ ನಿಮಿತ್ತ ಸಾಯುವನು.


“ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನ್ನು ಒಡ್ಡುವೆನು. ಅವುಗಳು ಜನರು ಎಡವಿಬೀಳುವ ಕಲ್ಲುಗಳಂತಾಗುವವು. ತಂದೆಗಳೂ ಮಕ್ಕಳೂ ಅವುಗಳಿಂದ ಎಡವಿಬೀಳುವರು. ಸ್ನೇಹಿತರು ಮತ್ತು ನೆರೆಹೊರೆಯವರು ಅವುಗಳಿಂದ ನಾಶವಾಗುವರು” ಅಂದನು.


ಕೆಲವರು ಯೆಹೋವನಾದ ನನ್ನಿಂದ ತೊಲಗಿಹೋದರು. ನನ್ನನ್ನು ಹಿಂಬಾಲಿಸುವುದನ್ನು ನಿಲ್ಲಿಸಿಬಿಟ್ಟರು. ಅವರು ಯೆಹೋವನನ್ನು ಸಹಾಯಕ್ಕಾಗಿ ಬೇಡುವಂತದ್ದನ್ನು ನಿಲ್ಲಿಸಿದರು. ಅವರನ್ನು ನಾನು ಅವರ ಸ್ಥಳಗಳಿಂದ ತೆಗೆದುಹಾಕುವೆನು.”


“‘ಆದರೆ ವೈರಿಯು ಬರುವಂತದ್ದನ್ನು ಆ ಕಾವಲುಗಾರನು ಕಂಡರೂ, ಜನರನ್ನು ಎಚ್ಚರಿಸಲು ತುತ್ತೂರಿಯನ್ನು ಊದದಿದ್ದರೆ ವೈರಿಯು ಅವರನ್ನು ಸೆರೆಹಿಡಿದು ಕೈದಿಗಳನ್ನಾಗಿ ಮಾಡಿ ಕೊಂಡೊಯ್ಯುವನು. ಆ ಮನುಷ್ಯನು ಪಾಪಮಾಡಿದ್ದರಿಂದ ಆ ಶಿಕ್ಷೆಯು ಅವನಿಗೆ ದೊರಕಿತು. ಆದರೆ, ಕಾವಲುಗಾರನು ಕೂಡಾ ಅವನ ಮರಣಕ್ಕೆ ಕಾರಣನಾಗುವನು.’


“ನರಪುತ್ರನೇ, ಈ ಜನರು ತಮ್ಮ ವಿಗ್ರಹಗಳಿಗೆ ಪ್ರತಿಷ್ಠಿತರಾಗಿದ್ದಾರೆ ಮತ್ತು ಪಾಪಕ್ಕೆ ಬೀಳಲು ತಮಗೆ ತಾವೇ ಅವಕಾಶಮಾಡಿಕೊಡುತ್ತಾರೆ. ಸಹಾಯಕ್ಕಾಗಿ ನನ್ನನ್ನು ಕೇಳಿಕೊಳ್ಳಲು ಅವರಿಗೆ ಅವಕಾಶ ಕೊಡಬೇಕೇ? ಇಲ್ಲ.


ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. ನಮ್ಮ ಸುಕಾರ್ಯಗಳೆಲ್ಲಾ ಹಳೇ ಕೊಳಕು ಬಟ್ಟೆಯಂತಿವೆ. ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. ನಮ್ಮ ಪಾಪಗಳು ಬಿರುಗಾಳಿಯಂತೆ ನಮ್ಮನ್ನು ಬಡಿದುಕೊಂಡುಹೋಗಿವೆ.


ನೀನು ಯೆಹೋವನನ್ನು ಪರಿಶುದ್ಧನೆಂದು ಪರಿಗಣಿಸಿ ಗೌರವಿಸಿದರೆ, ಆತನು ನಿನಗೆ ಆಶ್ರಯನಾಗುವನು. ಆದರೆ ನೀನು ಆತನನ್ನು ಸನ್ಮಾನಿಸದೆ ಹೋದರೆ ಆತನು ನಿನಗೆ ಮುಗ್ಗರಿಸುವ ಕಲ್ಲಾಗಿ ಪರಿಣಮಿಸುವನು. ಆತನು ಇಸ್ರೇಲಿನ ಎರಡು ಕುಟುಂಬಗಳವರಿಗೆ ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿರುವನು. ಯೆಹೋವನು ಜೆರುಸಲೇಮಿನ ಎಲ್ಲಾ ಜನರನ್ನು ಹಿಡಿಯುವ ಬಲೆಯಾಗಿರುವನು.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.


ನಾವಾದರೋ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಕುರಿತಾಗಿ ಬೋಧಿಸುತ್ತೇವೆ. ಇದು ಯೆಹೂದ್ಯರಿಗೆ ದೊಡ್ಡ ಸಮಸ್ಯೆಯಾಗಿದೆ; ಯೆಹೂದ್ಯರಲ್ಲದ ಜನರಿಗೆ ಮೂರ್ಖತನದಂತೆ ತೋರುತ್ತದೆ.


ದಾವೀದನು ಹೀಗೆನ್ನುತ್ತಾನೆ: “ಅವರು ತಮ್ಮ ಔತಣಗಳಲ್ಲಿ ಸಿಕ್ಕಿಕೊಂಡು ಬಂಧಿತರಾಗಲಿ; ಎಡವಿಬಿದ್ದು ದಂಡನೆ ಹೊಂದಲಿ.


ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.


ನನ್ನ ದೇವರೆ, ನನ್ನ ಪ್ರಾರ್ಥನೆಯನ್ನು ಕೇಳು. ನಿನ್ನ ಕಣ್ಣುಗಳನ್ನು ತೆರೆದು ನಮಗಾದ ಎಲ್ಲ ಕೇಡನ್ನು ನೋಡು. ನಿನ್ನ ಹೆಸರುಳ್ಳ ಪಟ್ಟಣದ ಗತಿ ಏನಾಗಿದೆ ನೋಡು. ನಾವು ಒಳ್ಳೆಯ ಜನರೆಂದು ನಾನು ಹೇಳುತ್ತಿಲ್ಲ. ನಾವು ಒಳ್ಳೆಯ ಜನರೆಂದು ಇದೆಲ್ಲವನ್ನು ಕೇಳುತ್ತಿಲ್ಲ. ನೀನು ಕರುಣಾಮಯನಾಗಿರುವುದರಿಂದಲೇ ಇದನ್ನೆಲ್ಲ ಕೇಳುತ್ತಿದ್ದೇನೆ.


ಅವರು ತಮ್ಮ ಬೆಳ್ಳಿಯ ವಿಗ್ರಹಗಳನ್ನು ರಸ್ತೆಗೆ ಬಿಸಾಡುವರು, ಅವರು ಬಂಗಾರದ ವಿಗ್ರಹವನ್ನು ಅಶುದ್ಧ ವಸ್ತುವಿನಂತೆ ನೋಡುವರು. ಯೆಹೋವನು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರಗಳ ವಿಗ್ರಹಗಳು ಅವರನ್ನು ರಕ್ಷಿಸಲಾರವು. ಅವು ಅವರ ಹಸಿವನ್ನು ನೀಗಿಸಲಾರವು ಅಥವಾ ಅವರ ಹೊಟ್ಟೆಗಳನ್ನು ತುಂಬಿಸಲಾರವು. ಜನರು ಪಾಪದಲ್ಲಿ ಬೀಳುವಂತೆ ಅವು ಮಾಡಿದವು.


ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ.


ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುವುದು. ಅವರನ್ನು ಯಾವುದೂ ಬೀಳಿಸಲಾರದು.


ಅವನ ಮಾತುಗಳು ಕೇವಲ ಸುಳ್ಳುಗಳಾಗಿವೆ. ಅವನು ಜ್ಞಾನಿಯಾಗುವುದೂ ಇಲ್ಲ, ಒಳ್ಳೆಯದನ್ನು ಕಲಿತುಕೊಳ್ಳುವುದೂ ಇಲ್ಲ.


ಯೆಹೋವನು ಅಮಚ್ಯನ ಮೇಲೆ ಸಿಟ್ಟುಗೊಂಡನು. ಅವನ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ಅಮಚ್ಯನೇ, ಆ ಜನರು ಪೂಜಿಸುವ ವಿಗ್ರಹಗಳಿಗೇಕೆ ನೀನು ಪೂಜೆ ಮಾಡುವೆ? ತಮ್ಮನ್ನು ಪೂಜಿಸುವವರನ್ನು ಆ ದೇವರುಗಳು ನಿನ್ನಿಂದ ಕಾಪಾಡಲಾರದೆ ಹೋದವು” ಎಂದು ಹೇಳಿದನು.


ಯಾಜಕನಾದ ಯೆಹೋಯಾದನು ಜೀವದಿಂದಿರುವ ತನಕ ಯೆಹೋವಾಷನು ಯೆಹೋವನಿಗೆ ಯೋಗ್ಯವಾಗಿ ನಡೆದುಕೊಂಡನು.


ಅಂಥ ಮನುಷ್ಯನಿಗೆ ಕಿವಿಗೊಡಬೇಡಿ. ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ. ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸುತ್ತೀರೋ ಇಲ್ಲವೋ ಎಂದು ನಿಮ್ಮನ್ನು ಪರೀಕ್ಷಿಸುವನು.


“ನೀವು ನಿಮ್ಮ ಸಹೋದರನನ್ನು ಮನಸ್ಸಿನಲ್ಲಿ ದ್ವೇಷಿಸಬಾರದು. ನಿಮ್ಮ ಸಹೋದರನು ಏನಾದರೂ ತಪ್ಪುಮಾಡಿದರೆ, ಅವನೊಡನೆ ಅದರ ಕುರಿತು ಮಾತಾಡು. ಅವನ ಅಪರಾಧದಲ್ಲಿ ನೀವು ಪಾಲುಹೊಂದದಂತೆ ನೇರವಾಗಿ ಗದರಿಸಿ. ಆಗ ನೀವು ಅವನನ್ನು ಕ್ಷಮಿಸಬಹುದು.


ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು.


“ನಿನ್ನ ಸಹೋದರನಾಗಲಿ ಸಹೋದರಿಯಾಗಲಿ ನಿನಗೆ ಯಾವುದಾದರೂ ತಪ್ಪು ಮಾಡಿದರೆ, ನೀನು ಹೋಗಿ ಅವನೊಬ್ಬನೇ ಇರುವಾಗ ಅವನ ತಪ್ಪನ್ನು ತಿಳಿಸು. ಅವನು ನಿನ್ನ ಮಾತಿಗೆ ಕಿವಿಗೊಟ್ಟರೆ, ಮತ್ತೆ ನಿನ್ನ ಸಹೋದರನಾಗಿರಲು ನೀನೇ ಅವನಿಗೆ ಸಹಾಯ ಮಾಡಿದಂತಾಗುವುದು.


ಆದರೆ ಈಗ ನೀವು ಮನಸ್ಸನ್ನು ಬದಲಾಯಿಸಿದ್ದೀರಿ. ನೀವು ನನ್ನ ಹೆಸರಿಗೆ ಗೌರವ ಕೊಡುವದಿಲ್ಲವೆಂಬುದನ್ನು ತೋರಿಸಿದ್ದೀರಿ. ನೀವು ಇದನ್ನು ಹೇಗೆ ಮಾಡಿದಿರಿ? ನಿಮ್ಮಲ್ಲಿ ಪ್ರತಿಯೊಬ್ಬರು ನೀವು ಬಿಡುಗಡೆ ಮಾಡಿದ ದಾಸದಾಸಿಯರನ್ನು ಹಿಂದಕ್ಕೆ ತೆಗೆದುಕೊಂಡಿರುವಿರಿ. ಅವರು ಪುನಃ ಗುಲಾಮರಾಗುವಂತೆ ಒತ್ತಾಯಿಸಿರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು