Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:23 - ಪರಿಶುದ್ದ ಬೈಬಲ್‌

23 ನಾನೆದ್ದು ಬಯಲು ಸೀಮೆಗೆ ಹೋದೆನು. ಕೆಬಾರ್ ನದಿಯ ಪಕ್ಕದಲ್ಲಿ ನಾನು ಕಂಡ ಮಹಿಮೆಯಂತಿದ್ದ ಯೆಹೋವನ ಮಹಿಮೆಯು ಅಲ್ಲಿ ಇತ್ತು. ನಾನು ನನ್ನ ಮುಖವನ್ನು ನೆಲಕ್ಕೆ ತಾಗಿಸಿ ಬಗ್ಗಿ ನಮಸ್ಕರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾನೆದ್ದು ಬಯಲು ಪ್ರದೇಶಕ್ಕೆ ಹೊರಟುಬಂದಾಗ, ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತ ದರ್ಶನವು ಆದಂತೆ, ಇಗೋ ಅಲ್ಲಿಯೂ ಸರ್ವೇಶ್ವರನ ಮಹಿಮೆ ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನೆದ್ದು ಬೈಲುಸೀಮೆಗೆ ಹೊರಟುಹೋದಾಗ ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತದರ್ಶನವು ಆದಂತೆ ಆಹಾ, ಅಲ್ಲಿಯೂ ಯೆಹೋವನ ಮಹಿಮೆಯು ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಮೇಲೆ ನಾನು ಎದ್ದು ಬಯಲುಸೀಮೆಯ ಕಡೆಗೆ ಹೋದೆನು. ಯೆಹೋವ ದೇವರ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ನಾನು ಅಡ್ಡ ಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:23
18 ತಿಳಿವುಗಳ ಹೋಲಿಕೆ  

ಆತನ ಸುತ್ತಲೂ ಇದ್ದ ಪ್ರಕಾಶವು ಮೇಘಬಿಲ್ಲಿನಂತೆಯೂ ಯೆಹೋವನ ಮಹಿಮೆಯಂತೆಯೂ ಕಾಣುತ್ತಿತ್ತು. ನಾನು ಅದನ್ನು ನೋಡಿದ ಕೂಡಲೇ ನೆಲಕ್ಕೆ ಬಿದ್ದೆನು. ಮುಖವನ್ನು ನೆಲದ ಮೇಲಿಟ್ಟು ಅಡ್ಡಬಿದ್ದೆನು. ಆಗ ನನ್ನೊಂದಿಗೆ ಮಾತನಾಡುತ್ತಿದ್ದ ಸ್ವರವನ್ನು ಕೇಳಿದೆನು.


ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.


ಆದರೆ ಸ್ತೆಫನನು ಪವಿತ್ರಾತ್ಮಭರಿತನಾಗಿದ್ದನು. ಅವನು ಆಕಾಶದತ್ತ ಕಣ್ಣೆತ್ತಿ ನೋಡಿ, ದೇವರ ಮಹಿಮೆಯನ್ನೂ ಯೇಸುವು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ಕಂಡು,


ಆ ನಾಲ್ಕು ಜೀವಿಗಳು “ಆಮೆನ್!” ಎಂದು ಹೇಳಿದವು. ಹಿರಿಯರು ಮೊಣಕಾಲೂರಿ ಆರಾಧಿಸಿದರು.


ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.


ಇಪ್ಪತ್ತನಾಲ್ಕು ಮಂದಿ ಹಿರಿಯರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಮೊಣಕಾಲೂರಿ ನಮಸ್ಕರಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವ ಆತನನ್ನು ಆರಾಧಿಸುತ್ತಾ ಇಂತೆಂದರು:


ಆಗ ಮನುಷ್ಯನಂತಿದ್ದ ಗಬ್ರಿಯೇಲನು ನಾನು ನಿಂತಲ್ಲಿಗೆ ಬಂದನು. ಅವನು ತೀರ ನನ್ನ ಹತ್ತಿರಕ್ಕೆ ಬಂದಾಗ ನನಗೆ ಬಹಳ ಭಯವಾಯಿತು. ನಾನು ನೆಲಕ್ಕೆ ಬಿದ್ದೆ. ಆದರೆ ಗಬ್ರಿಯೇಲನು ನನಗೆ, “ಮನುಷ್ಯನೇ, ಈ ದರ್ಶನ ಅಂತ್ಯಕಾಲದ ಕುರಿತಾಗಿದೆ ಎಂಬುದು ನಿನಗೆ ತಿಳಿದಿರಲಿ” ಎಂದು ಹೇಳಿದನು.


ಆಗ ಆಲಯದ ಹೊಸ್ತಿಲಿನ ಮೇಲಿನಿಂದ ಯೆಹೋವನ ಮಹಿಮೆಯು ಎದ್ದು ಕೆರೂಬಿದೂತರು ನಿಂತಿದ್ದ ಸ್ಥಳದ ಮೇಲೆ ನಿಂತುಕೊಂಡಿತು.


ಆಗ ಇಸ್ರೇಲರ ದೇವರ ಮಹಿಮೆಯು ತಾನು ಆಸನಾರೂಢನಾಗಿದ್ದ ಕೆರೂಬಿದೂತರ ಮೇಲಿನಿಂದ ಏರಿ ದೇವಾಲಯದ ಪ್ರವೇಶ ಸ್ಥಳಕ್ಕೆ ಹೋಯಿತು. ಆ ಮಹಿಮೆಯು ನಾರುಮಡಿಯನ್ನು ಧರಿಸಿದ್ದ, ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವನ್ನು ಹೊಂದಿದ್ದ ಪುರುಷನನ್ನು ಕರೆಯಿತು.


ಮೋಶೆ ಆರೋನರನ್ನು ಎದುರಿಸಲು ಜನರು ಒಟ್ಟಾಗಿ ಸೇರಿಬಂದಿದ್ದಾಗ, ದೇವದರ್ಶನಗುಡಾರದ ಕಡೆಗೆ ತಿರುಗಿ ನೋಡಲಾಗಿ, ದೇವದರ್ಶನಗುಡಾರವನ್ನು ಮೋಡ ಮುಚ್ಚಿಕೊಂಡಿರುವುದನ್ನೂ ಯೆಹೋವನ ಮಹಿಮೆಯು ಪ್ರತ್ಯಕ್ಷವಾಗಿರುವುದನ್ನೂ ಅವರು ಕಂಡರು.


ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ಮಹಿಮೆ ಸಮೂಹದವರೆಲ್ಲರಿಗೂ ಪ್ರತ್ಯಕ್ಷವಾಯಿತು.


ಇಸ್ರೇಲಿನ ದೇವರ ಮಹಿಮೆಯು ಅಲ್ಲಿ ಇತ್ತು. ಆ ಮಹಿಮೆ ನಾನು ಕೆಬಾರ್ ಕಾಲುವೆಯ ಪಕ್ಕದ ಕಣಿವೆಯಲ್ಲಿ ಕಂಡ ದರ್ಶನದಂತಿತ್ತು.


ಅಲ್ಲಿ ಇಸ್ರೇಲ್ ದೇವರ ಮಹಿಮೆಯು ಪೂರ್ವದಿಂದ ಬಂದಿತು. ದೇವರ ಸ್ವರವು ಸಮುದ್ರದ ಶಬ್ದದಂತೆ ಗಟ್ಟಿಯಾಗಿತ್ತು. ದೇವರ ಮಹಿಮಾ ಪ್ರಕಾಶದಿಂದ ನೆಲವು ಬೆಳಕಿನಿಂದ ತುಂಬಿತ್ತು.


ನಾನು ನೋಡಿದ ದರ್ಶನವು ಕೆಬಾರ್ ಕಾಲುವೆಯ ಬಳಿ ಕಂಡ ದರ್ಶನದಂತಿತ್ತು. ನಾನು ಸಾಷ್ಟಾಂಗವೆರಗಿದೆನು.


ಆ ಬಳಿಕ ನನ್ನನ್ನು ಉತ್ತರದ ದ್ವಾರದ ಮೂಲಕ ಆಲಯದ ಮುಂಭಾಗಕ್ಕೆ ಅವನು ಕರೆದುಕೊಂಡು ಹೋದನು. ನಾನು ನೋಡಿದಾಗ ಯೆಹೋವನ ತೇಜಸ್ಸು ಆತನ ಆಲಯವನ್ನು ತುಂಬುತ್ತಿತ್ತು. ನಾನು ಸಾಷ್ಟಾಂಗವೆರಗಿದೆನು.


ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು