Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:26 - ಪರಿಶುದ್ದ ಬೈಬಲ್‌

26 ನಿನ್ನ ನಾಲಿಗೆಯು ಸೇದಿ ಹೋಗುವಂತೆ ಮಾಡುವೆನು. ನಿನಗೆ ಮಾತನಾಡಲು ಆಗದು. ಆದ್ದರಿಂದ ಅವರನ್ನು ಖಂಡಿಸಲು ಯಾರೂ ಇರುವದಿಲ್ಲ. ಯಾಕೆಂದರೆ ಆ ಜನರು ಯಾವಾಗಲೂ ನನ್ನ ವಿರುದ್ಧವಾಗಿ ವರ್ತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದಲ್ಲದೆ ನಿನ್ನ ನಾಲಿಗೆಯು ಸೇದಿ ಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸಲಾರೆ; ಅವರು ತಿರುಗಿ ಬೀಳುವ ಮನೆತನದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇದಲ್ಲದೆ, ನಿನ್ನ ನಾಲಿಗೆ ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ದ್ರೋಹಿವಂಶದವರಾದ ಅವರನ್ನು ನೀನು ಖಂಡಿಸಲು ಸಾಧ್ಯವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇದಲ್ಲದೆ ನಿನ್ನ ನಾಲಿಗೆಯು ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸದಿರುವಿ; ಅವರು ದ್ರೋಹಿವಂಶದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ ನಾನು ನಿನ್ನ ನಾಲಿಗೆ ಸೇದಿ ಹೋಗುವಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವವನಾಗಲಾರೆ. ಅವರು ತಿರುಗಿಬೀಳುವ ಜನರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:26
18 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ನಿನಗೆ ಆ ಮನುಷ್ಯನೊಂದಿಗೆ ಮಾತನಾಡಲಾಗುವುದು. ನೀನು ಆಮೇಲೆ ಎಂದಿಗೂ ಮೌನವಾಗಿರುವುದಿಲ್ಲ. ಈ ರೀತಿಯಾಗಿ ನೀನು ಅವರಿಗೆ ಒಂದು ಮಾದರಿಯಾಗುವೆ. ನಾನು ಯೆಹೋವನೆಂದು ಆಗ ಅವರು ತಿಳಿಯುವರು.”


ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡಲು ಶಕ್ತನಾಗದಂತಾಗಲಿ. ಜೆರುಸಲೇಮೇ, ನಿನ್ನ ವಿಷಯದಲ್ಲೇ ನಾನು ಅತ್ಯಾನಂದಪಡುವೆನೆಂದು ಪ್ರಮಾಣ ಮಾಡುವೆ.


ನನ್ನ ಯೆಹೋವನೇ, ನನ್ನ ಬಾಯಿ ತೆರೆದು ನಿನ್ನನ್ನು ಕೊಂಡಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.


ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಕೃತ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು.


“ಅವನ ವಿಗ್ರಹಗಳೊಂದಿಗೆ ಎಫ್ರಾಯೀಮು ಸೇರಿರುತ್ತಾನೆ. ಆದ್ದರಿಂದ ಅವನನ್ನು ಸುಮ್ಮನೆ ಬಿಟ್ಟುಬಿಡು.


ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಹೋಗಿವೆ. ಆತನು ಹೆಬ್ಬಾಗಿಲುಗಳ ಸರಳುಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.


“ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನ್ನು ಜನರಿಗೆ ಹೇಳು. ಅವರಿಗೆ ಹೆದರಬೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನ್ನನ್ನು ಅವರೆದುರಿನಲ್ಲಿ ಹೆದರಿಸುವೆನು.


ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ಅವನು ಬರುವ ಹಿಂದಿನ ದಿವಸದ ಸಾಯಂಕಾಲ ನನ್ನ ಒಡೆಯನಾದ ಯೆಹೋವನ ಆತ್ಮನಿಂದ ಪರವಶನಾದೆನು. ದೇವರು ನನ್ನನ್ನು ಮಾತನಾಡದಂತೆ ಮಾಡಿದ್ದನು. ಆ ಸಮಯದಲ್ಲಿ ಆ ಮನುಷ್ಯನು ನನ್ನ ಬಳಿಗೆ ಬಂದನು. ಆಗ ದೇವರು ನನ್ನ ಬಾಯನ್ನು ತೆರೆದು ನಾನು ಮಾತನಾಡುವಂತೆ ಮಾಡಿದನು.


ಆ ಪುರುಷನು ನನ್ನೊಂದಿಗೆ ಮಾತನಾಡುತ್ತಿದ್ದಾಗ ನಾನು ನೆಲವನ್ನು ನೋಡುತ್ತಾ ಬಾಗಿಕೊಂಡಿದ್ದೆ. ಮಾತನಾಡಲು ನನ್ನಿಂದ ಸಾಧ್ಯವಾಗಲಿಲ್ಲ.


ಯಾರೂ ಪರಸ್ಪರ ವಾದಿಸದೆ ತಪ್ಪು ಹೊರಿಸದೆ ಇರಬೇಕು. ಯಾಜಕರೇ, ನಿಮ್ಮೊಂದಿಗೆ ನಾನು ವಾದಿಸುತ್ತೇನೆ.


“ನರಪುತ್ರನೇ, ನೀನು ದಂಗೆಕೋರರ ಮಧ್ಯೆ ವಾಸಿಸುತ್ತೀ. ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ; ಅವರಿಗೆ ಕಿವಿಗಳಿದ್ದರೂ ಕೇಳುವದಿಲ್ಲ; ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ.


ಆದ್ದರಿಂದ ನರಪುತ್ರನೇ, ನಿನ್ನ ಚೀಲಗಳನ್ನು ತುಂಬಿಸಿ ಸೆರೆಯಾಳಾಗಿ ಹೋಗುವವನಂತೆ ನಟಿಸು. ನೀನು ಹಗಲಲ್ಲಿ ಹೋಗುವುದನ್ನು ಜನರು ನೋಡಲಿ. ಸೆರೆಯಾಳಿನಂತೆ ಅವರ ಕಣ್ಣೆದುರಿನಲ್ಲೆ ನಿನ್ನ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗು. ಒಂದುವೇಳೆ ಅವರು ತಾವು ದಂಗೆಕೋರರೆಂದು ತಿಳಿದುಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು