Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:16 - ಪರಿಶುದ್ದ ಬೈಬಲ್‌

16 ಈಜಿಪ್ಟಿನಲ್ಲಿ ಬೆಂಕಿಯನ್ನು ಬರಮಾಡುವೆನು. ಸೀನ್ ನಗರವು ಭಯದಿಂದ ಕಂಗೆಡುವದು. ಸೈನಿಕರು ತೆಬೆಸವನ್ನು ಧಾಳಿ ಮಾಡುವರು. ತೆಬೆಸದಲ್ಲಿ ಪ್ರತಿದಿವಸವೂ ಸಂಕಟವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನು ಈಜಿಪ್ಟಿಗೆ ಕಿಚ್ಚನ್ನು ಹತ್ತಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು; ತೆಬೆಸ್ ಭಂಗಕ್ಕೆ ಈಡಾಗುವುದು; ಮೆಂಫೀಸ್ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣಸಂಕಟಪಡುವದು; ನೋಪುರವು ಭಂಗಕ್ಕೆ ಈಡಾಗುವದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಈಜಿಪ್ಟಿಗೆ ಕಿಚ್ಚನ್ನು ಹಚ್ಚಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು. ತೆಬೆಸವು ಬಿರುಗಾಳಿಯಿಂದ ತೆಗೆದುಕೊಳ್ಳಲಾಗುವುದು, ನೋಫಿನ ಮೇಲೆ ನಿರಂತರವಾಗಿ ಇಕ್ಕಟ್ಟು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:16
9 ತಿಳಿವುಗಳ ಹೋಲಿಕೆ  

ನೀನು ಅನೇಕ ತಪ್ಪುಗಳನ್ನು ಮಾಡಿದೆ. ನೀನು ಮೋಸಗಾರನಾದ ವ್ಯಾಪಾರಿ. ಇದರಿಂದಾಗಿ ನೀನು ಪವಿತ್ರಸ್ಥಳವನ್ನು ಹೊಲೆ ಮಾಡಿರುವಿ. ಆದ್ದರಿಂದ ನಿನ್ನೊಳಗೆ ಬೆಂಕಿಯನ್ನು ಬರಮಾಡಿ ಅದು ನಿನ್ನನ್ನು ದಹಿಸುವಂತೆ ಮಾಡಿದೆನು. ನೀನು ಸುಟ್ಟ ಬೂದಿಯಾದೆ. ಈಗ ಎಲ್ಲರೂ ನಿನ್ನ ಲಜ್ಜಾತನವನ್ನು ನೋಡುವರು.


ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಈ ಸಂದೇಶವನ್ನು ಈಜಿಪ್ಟಿನಲ್ಲಿ ವಾಸಿಸಿದ ಎಲ್ಲಾ ಯೆಹೂದ್ಯರಿಗಾಗಿ ಕೊಡಲಾಗಿತ್ತು. ಈ ಸಂದೇಶವು ಮಿಗ್ದೋಲ್, ತಹಪನೇಸ್, ನೋಫ್ ಪಟ್ಟಣಗಳಲ್ಲಿ ಮತ್ತು ಈಜಿಪ್ಟಿನ ದಕ್ಷಿಣ ಭಾಗದಲ್ಲಿ ವಾಸಮಾಡುತ್ತಿದ್ದ ಯೆಹೂದ್ಯರಿಗಾಗಿ ಇತ್ತು. ಆ ಸಂದೇಶವೇನೆಂದರೆ:


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಈಜಿಪ್ಟಿನಲ್ಲಿರುವ ವಿಗ್ರಹಗಳನ್ನು ನಾನು ನಾಶಮಾಡುವೆನು. ಮೆಂಫೀಸಿನ ವಿಗ್ರಹಗಳನ್ನು ತೆಗೆದುಬಿಡುವೆನು. ಈಜಿಪ್ಟಿನಲ್ಲಿ ಇನ್ನು ಮುಂದೆ ರಾಜನಿರನು. ಅವರಲ್ಲಿ ಭಯವನ್ನು ಹುಟ್ಟಿಸುವೆನು.


ಪತ್ರೋಸನ್ನು ನಾನು ಬರಿದಾಗಿ ಮಾಡುವೆನು. ಸೋನಿನಲ್ಲಿ ಬೆಂಕಿಯನ್ನು ಬರಮಾಡುವೆನು. ತೆಬೆಸವನ್ನು ನಾನು ಶಿಕ್ಷಿಸುವೆನು.


ಈಜಿಪ್ಟಿನ ಕೋಟೆಯಾಗಿರುವ ಸೀನ್ ಪ್ರಾಂತ್ಯದ ಮೇಲೆ ನನ್ನ ಕೋಪವನ್ನು ಸುರಿಸುವೆನು. ತೆಬೆಸದ ಜನರನ್ನು ನಾನು ನಾಶಮಾಡುವೆನು.


ಒನ್ ಮತ್ತು ಪೀಬೆಸೆತಿನ ಯುವಕರು ಯುದ್ಧದಲ್ಲಿ ಹತರಾಗುವರು. ಆ ನಗರದ ಜನರು ಹಿಡಿಯಲ್ಪಟ್ಟು ಒಯ್ಯಲ್ಪಡುವರು.


ದೇವರು ಹೇಳಿದ್ದೇನೆಂದರೆ, “ನಾನು ಮಾಗೋಗ್ ಮತ್ತು ಕಡಲ ತೀರದಲ್ಲಿ ವಾಸಿಸುವ ಜನರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ತಾವು ಸುರಕ್ಷಿತವಾಗಿದ್ದೇವೆ ಎಂದು ಅವರು ನೆನಸುತ್ತಾರೆ. ಆದರೆ ನಾನು ಯೆಹೋವನು ಎಂದು ಅವರಿಗೆ ತಿಳಿಯುವದು.


ಶತ್ರುಗಳು ಇಸ್ರೇಲರಿಂದ ಎಲ್ಲವನ್ನು ದೋಚಿಕೊಂಡು ಹೋದುದರಿಂದ ಇಸ್ರೇಲರು ಬಿಟ್ಟು ಹೊರಟರು. ಈಜಿಪ್ಟ್ ಅವರನ್ನು ಒಟ್ಟಿಗೆ ಸೇರಿಸಿಕೊಳ್ಳುವುದು. ಮೆಂಫಿಸ್ ಪಟ್ಟಣವು ಅವರನ್ನು ಹೂಳಿಡುವದು. ಅವರ ಬೆಳ್ಳಿಯ ನಿಕ್ಷೇಪದ ಮೇಲೆ ಕಳೆ ಬೆಳೆಯುವದು. ಇಸ್ರೇಲರು ವಾಸಿಸಿದ್ದಲ್ಲಿ ಮುಳ್ಳಿನ ಗಿಡಗಳು ಬೆಳೆಯುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು