Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:12 - ಪರಿಶುದ್ದ ಬೈಬಲ್‌

12 ಪರದೇಶದ ಕ್ರೂರ ಜನರು ಅದನ್ನು ಕಡಿದು ಅದರ ರೆಂಬೆಗಳನ್ನೆಲ್ಲಾ ಬೆಟ್ಟ, ಬಯಲು, ತಗ್ಗುಗಳಲ್ಲಿ ಚದರಿಸಿಬಿಟ್ಟರು. ಅದರ ಮುರಿಯಲ್ಪಟ್ಟ ಕೊಂಬೆಗಳು ಆ ದೇಶದಲ್ಲಿ ಹರಿಯುವ ನದಿಯಲ್ಲಿ ತೇಲಿದವು. ಆ ಮರದಡಿಯಲ್ಲಿ ಈಗ ನೆರಳು ಇಲ್ಲ. ಆದ್ದರಿಂದ ಅಲ್ಲಿ ವಾಸವಾಗಿದ್ದ ಜನರೆಲ್ಲಾ ಅಲ್ಲಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಜನಾಂಗಗಳಲ್ಲಿ ಭಯಂಕರವಾದ ಅನ್ಯರು ಅದನ್ನು ಕಡಿದುಹಾಕಿ ಬಿಟ್ಟಿದ್ದಾರೆ. ಅದರ ರೆಂಬೆಗಳು ಗುಡ್ಡಗಳಲ್ಲಿಯೂ, ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ಹಳ್ಳಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅತಿಭಯಂಕರ ರಾಷ್ಟ್ರದವರಾದ ಮ್ಲೇಚ್ಛರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲೂ ಎಲ್ಲ ಹಳ್ಳಕೊಳ್ಳಗಳಲ್ಲೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲ ತೊರೆಗಳ ಹತ್ತಿರ ಮುರಿದುಬಿದ್ದಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ತೊಲಗಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅತಿಭಯಂಕರ ಜನಾಂಗದವರಾದ ಮ್ಲೇಚ್ಫರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲಿಯೂ ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ತೊರೆಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತಜನಾಂಗಗಳು ಅದರ ನೆರಳಿನಿಂದ ತೊಲಗಿ ಅದನ್ನು ಬಿಟ್ಟುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಜನಾಂಗಗಳಲ್ಲಿ ಭಯಂಕರವಾದ ವಿದೇಶಿಯರು ಅದನ್ನು ಕಡಿದುಹಾಕುವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅದರ ಕೊಂಬೆಗಳು ಬೀಳುವುವು. ದೇಶದ ಹಳ್ಳಗಳಲ್ಲೆಲ್ಲಾ ಅದರ ರೆಂಬೆಗಳು ಮುರಿದು ಹೋಗುವುವು. ಭೂಮಿಯ ಜನಗಳೆಲ್ಲಾ ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:12
17 ತಿಳಿವುಗಳ ಹೋಲಿಕೆ  

ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅಪರಿಚಿತರನ್ನು ಕರೆತರುವೆನು. ಅವರು ಎಲ್ಲಾ ಜನಾಂಗಗಳವರಿಗಿಂತ ಕ್ರೂರರು, ಅವರು ತಮ್ಮ ಖಡ್ಗವನ್ನು ಎಳೆದು ನಿನ್ನ ಜ್ಞಾನದಿಂದ ಕೊಂಡುಕೊಂಡಿದ್ದ ಎಲ್ಲಾ ಬೆಲೆಬಾಳುವ ಅಪೂರ್ವ ವಸ್ತುಗಳನ್ನು ನಾಶಮಾಡುವರು.


ಅದರ ಬೆಟ್ಟಪ್ರಾಂತ್ಯಗಳನ್ನು ಸತ್ತ ಹೆಣಗಳಿಂದ ಮುಚ್ಚುವೆನು. ಹೆಣಗಳು ಎಲ್ಲಾ ಕಡೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ತಗ್ಗುಗಳಲ್ಲಿಯೂ ಇರುವವು.


ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶಮಾಡಿಕೊಳ್ಳುವರು.


ಎಲ್ಲಾ ಜನಾಂಗಗಳಿಗಿಂತ ನೆಬೂಕದ್ನೆಚ್ಚರನು ಮತ್ತು ಅವನ ಸಿಪಾಯಿಗಳು ಅತ್ಯಂತ ಕ್ರೂರಿಗಳು. ಈಜಿಪ್ಟನ್ನು ನಾಶಮಾಡಲು ಅವರನ್ನು ಕರೆಹಿಸುವೆನು. ಅವರು ತಮ್ಮ ಖಡ್ಗಗಳನ್ನು ಒರೆಯಿಂದ ತೆಗೆದು ಈಜಿಪ್ಟಿಗೆ ವಿರುದ್ಧವಾಗಿ ಉಪಯೋಗಿಸುವರು ಮತ್ತು ದೇಶವನ್ನು ಸತ್ತ ಹೆಣಗಳಿಂದ ತುಂಬಿಸುವರು.


ನೀನು ನೋಡಿದ ಆ ಮೃಗ ಮತ್ತು ಅದರ ಹತ್ತು ಕೊಂಬುಗಳು (ರಾಜರುಗಳು) ಆ ವೇಶ್ಯೆಯನ್ನು ದ್ವೇಷಿಸುತ್ತವೆ. ಅವಳಲ್ಲಿರುವುದನ್ನೆಲ್ಲ ಅವರು ಕಿತ್ತುಕೊಂಡು, ಅವಳನ್ನು ನಗ್ನಾವಸ್ಥೆಯಲ್ಲಿ ಬಿಡುತ್ತಾರೆ. ಅವರು ಅವಳ ದೇಹವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ.


ಆ ಬಳಿಕ ಅವರು ಗಾಳಿಯಂತೆ ಅಲ್ಲಿಂದ ಬೇರೆ ಸ್ಥಳಗಳ ಮೇಲೆ ದಾಳಿಮಾಡಲು ಹೊರಟುಹೋಗುವರು. ಬಾಬಿಲೋನಿನವರು ಆರಾಧಿಸುವ ಒಂದೇ ವಿಷಯ ಯಾವದೆಂದರೆ ಅವರ ಸ್ವಂತ ಶಕ್ತಿಯನ್ನೇ.”


ನೀನು ಇಸ್ರೇಲಿನ ಪರ್ವತದಲ್ಲಿ ಸಾಯುವೆ, ನೀನೂ, ನಿನ್ನ ಎಲ್ಲಾ ಸೈನ್ಯ, ನಿನ್ನೊಂದಿಗೆ ಬಂದಿದ್ದ ಇತರ ದೇಶದವರೆಲ್ಲಾ ರಣರಂಗದಲ್ಲಿ ಸಾಯುವರು. ನಿಮ್ಮ ಹೆಣಗಳನ್ನು ಆಕಾಶದ ಸಕಲ ಮಾಂಸಹಾರಿ ಪಕ್ಷಿಗಳಿಗೂ, ಕಾಡುಪ್ರಾಣಿಗಳಿಗೂ ಆಹಾರವಾಗಿ ಕೊಡುವೆನು.


ಯಾಕೆಂದರೆ ನೀನು ಯಾವಾಗಲೂ ನನ್ನ ಜನಕ್ಕೆ ವಿರೋಧವಾಗಿರುವೆ. ನೀನು ಇಸ್ರೇಲರ ವಿರುದ್ಧವಾಗಿ ಕತ್ತಿಯನ್ನೆತ್ತಿರುವೆ. ಅವರು ಆಗ ಸಂಕಟದಲ್ಲಿದ್ದರು ಮತ್ತು ತಮ್ಮ ಶಿಕ್ಷೆಯ ಕಡೆಗಾಲದಲ್ಲಿದ್ದರು.’”


ಕ್ರೂರ ರಾಷ್ಟ್ರಗಳ ಆ ಸೈನಿಕರಿಂದ ನಿನ್ನ ಜನರನ್ನು ಯುದ್ಧದಲ್ಲಿ ಹತಗೊಳಿಸುವೆನು. ಈಜಿಪ್ಟಿನ ಜನರನ್ನೂ ಅವರು ಹೆಮ್ಮೆಪಡುವಂತ ವಸ್ತುಗಳನ್ನೂ ಆ ಸೈನಿಕರು ನಾಶಗೊಳಿಸುವರು.


ಬೇರೆ ದೇಶದವರು ಅವರ ಐಶ್ವರ್ಯವನ್ನು ಲೂಟಿಮಾಡಿಕೊಂಡು ಹೋಗಲು ನಾನು ಅವಕಾಶಕೊಡುವೆನು. ಭೂಮಿಯ ಮೇಲಿರುವ ಅತ್ಯಂತ ದುಷ್ಟರಾದ ಜನರಿಗೆ ನಾನು ಅದನ್ನು ಕೊಳ್ಳೆಯನ್ನಾಗಿ ಕೊಡುವೆನು. ಅವರು ಅದನ್ನು ಹೊಲಸು ಮಾಡುವರು.


ನೈಲ್ ನದಿಯನ್ನು ನಾನು ಒಣನೆಲವನ್ನಾಗಿ ಮಾಡುವೆನು. ಆ ಒಣನೆಲವನ್ನು ನಾನು ಕೆಟ್ಟ ಜನರಿಗೆ ಮಾರುವೆನು. ಆ ದೇಶವನ್ನು ಬಂಜರು ಭೂಮಿಯನ್ನಾಗಿ ಮಾಡಲು ನಾನು ಪರದೇಶಸ್ಥರನ್ನು ಉಪಯೋಗಿಸುವೆನು. ನನ್ನ ಒಡೆಯನಾದ ಯೆಹೋವನು ಮಾತನಾಡಿದ್ದಾನೆ.”


ಹೌದು, ಆ ಮರವೂ ಅದರ ನೆರಳಿನ ಆಶ್ರಯವನ್ನು ಪಡೆದುಕೊಂಡಿದ್ದ ಅದರ ಎಲ್ಲಾ ಸಂತತಿಗಳವರೂ ಯುದ್ಧದಲ್ಲಿ ಸತ್ತುಹೋಗಿದ್ದ ಸೈನಿಕರೊಂದಿಗೆ ಇರುವದಕ್ಕಾಗಿ ಪಾತಾಳಕ್ಕೆ ಇಳಿದು ಹೋಗಿದ್ದವು.


ಆ ಮರವು ಬಹಳ ದೊಡ್ಡದಾಗಿ ಮತ್ತು ಬಲಯುತವಾಗಿ ಬೆಳೆಯಿತು. ಆ ಮರದ ತುದಿಯು ಆಕಾಶಕ್ಕೆ ಮುಟ್ಟಿತ್ತು. ಅದನ್ನು ಭೂಲೋಕದ ಯಾವ ಸ್ಥಳದಿಂದಲಾದರೂ ನೋಡಬಹುದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು