Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:18 - ಪರಿಶುದ್ದ ಬೈಬಲ್‌

18 “ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಬಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನ್ನನ್ನು ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನ್ನು ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವೆ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವೆ. “ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನತಿಹೀನರ ನಡುವೆ ಖಡ್ಗದಿಂದ ಹತರಾದವರ ಸಂಗಡ ಮಲಗುವಿ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಂಥಾ ವೈಭವದಿಂದ ಹಾಗೂ ಮಹಿಮೆಯಿಂದ ಕೂಡಿದ ನೀನು, ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ದೂಡಿದವನಾಗಿ ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವೆ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಂಥಾ ವೈಭವದಿಂದಲೂ ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವಿ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ ‘ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆಯಿಂದಲೂ ಏದೆನಿನ ಯಾವ ಮರಗಳಿಗೆ ಸಮನಾಗಿರುವೆ? ಆದರೂ ನೀನು ಏದೆನಿನ ಮರಗಳ ಸಂಗಡ ಭೂಮಿಯ ಕೆಳಭಾಗಗಳಿಗೆ ದೂಡಿದವನಾಗುವೆ. ಸುನ್ನತಿಯಿಲ್ಲದವರ ಮಧ್ಯದಲ್ಲಿ ಖಡ್ಗದಿಂದ ಹತರಾದವರ ಸಂಗಡ ಮಲಗುವೆ. “ ‘ಇದೇ ಫರೋಹನನೂ ಅವನ ಎಲ್ಲಾ ಜನಸಮೂಹವೂ ಆಗಿವೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:18
19 ತಿಳಿವುಗಳ ಹೋಲಿಕೆ  

“ಈಜಿಪ್ಟೇ, ನೀನು ಬೇರೆಯವರಿಗಿಂತ ಉತ್ತಮಳೇನೂ ಅಲ್ಲ. ಮರಣದ ಸ್ಥಳಕ್ಕೆ ಹೋಗು. ಅಲ್ಲಿ ಪರದೇಶದವರೊಂದಿಗೆ ಹೋಗಿ ಬಿದ್ದುಕೊ.


“ಶೂರರು, ಬಲಶಾಲಿಗಳು ಯುದ್ಧದಲ್ಲಿ ಮಡಿದಿದ್ದಾರೆ, ಆ ಪರದೇಶಿಗಳು ಮರಣದ ಸ್ಥಳಕ್ಕೆ ಹೋದರು. ಅವರು ಅಲ್ಲಿದ್ದುಕೊಂಡು ಈಜಿಪ್ಟಿನವರೊಂದಿಗೆ ಮತ್ತು ಅದರ ಸಹಾಯಕರೊಂದಿಗೆ ಮಾತನಾಡುವರು.


ಪರದೇಶಸ್ಥರು ನಿನ್ನನ್ನು ಪರದೇಶಿಯಂತೆ ನೋಡುವರು ಮತ್ತು ಕೊಲೆ ಮಾಡುವರು. ನಾನು ಆ ರೀತಿಯಾಗಿ ಮಾಡಬೇಕೆಂದು ಆಜ್ಞಾಪಿಸುವದರಿಂದ ನಿನಗೆ ಹಾಗೆ ಆಗುವದು.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.


“ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದುಹಾಕುತ್ತಾನೆ.


ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.


“ನರಪುತ್ರನೇ, ಇದನ್ನು ಈಜಿಪ್ಟಿನ ರಾಜನಾದ ಫರೋಹನಿಗೂ ಅವನ ಜನರಿಗೂ ಹೇಳು: “‘ನೀನು ಅತ್ಯಂತ ಪ್ರಭಾವಶಾಲಿ, ನಿನ್ನನ್ನು ಯಾರಿಗೆ ಹೋಲಿಸಲಿ?


“ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.”


ಆದ್ದರಿಂದ, ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಗಳ ಪೂಜೆಯ ಬಗ್ಗೆ ಯೋಚಿಸಲೂಬೇಡಿ.


ಅನೇಕ ಮಂದಿ ನಿನಗೆ ಸಂಭವಿಸಿದ್ದನ್ನು ನೋಡಿ ಚಕಿತರಾಗುವರು. ನಾನು ನಿನ್ನ ಕಡೆಗೆ ಖಡ್ಗ ಬೀಸುವಾಗ ಅವರ ಅರಸರು ಬಹಳ ಭಯಗ್ರಸ್ತರಾಗುವರು; ನೀನು ಬೀಳುವ ದಿವಸದಲ್ಲಿ ಅರಸರು ಹೆದರಿ ನಡುಗುವರು. ಪ್ರತಿಯೊಬ್ಬ ರಾಜನು ತನ್ನ ಜೀವವನ್ನು ಉಳಿಸಿಕೊಳ್ಳಲು ಆತುರಪಡುವನು.”


ನಾನು ಅದಕ್ಕೆ ಅನೇಕ ಕೊಂಬೆಗಳನ್ನು ಕೊಟ್ಟು ಅಂದವಾಗಿ ಕಾಣುವಂತೆ ಮಾಡಿದೆನು. ದೇವರ ತೋಟವಾಗಿರುವ ಏದೆನಿನಲ್ಲಿರುವ ಮರಗಳೆಲ್ಲಾ ಅಸೂಯೆಪಡುತ್ತಿದ್ದವು.’”


ಆಹಾಜನಿಗೆ ಸಂಕಟ ಬಂದಾಗಲೂ ಇನ್ನೂ ಹೆಚ್ಚಾಗಿ ಪಾಪ ಮಾಡುತ್ತಾ ಯೆಹೋವನಿಗೆ ಇನ್ನೂ ಹೆಚ್ಚಾಗಿ ದ್ರೋಹಿಯಾದನು.


ಗತ್‌ನಲ್ಲಿ ಈ ಸುದ್ದಿಯನ್ನು ಹೇಳದಿರು. ಅಷ್ಕೆಲೋನಿನ ಬೀದಿಗಳಲ್ಲಿ ಇದನ್ನು ಸಾರದಿರು. ಫಿಲಿಷ್ಟಿಯರ ಪಟ್ಟಣಗಳೆಲ್ಲಾ ಸಂತೋಷಪಡುವವು. ಆ ವಿದೇಶಿಯರ ಹೆಣ್ಣುಮಕ್ಕಳು ಉಲ್ಲಾಸಪಡುವರು.


ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.


ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.


ದೇವರ ತೋಟದಲ್ಲಿರುವ ದೇವದಾರು ಮರಗಳೂ ಈ ಮರದಷ್ಟು ಎತ್ತರವಾಗಿರಲಿಲ್ಲ. ಈ ಮಹಾ ಮರಕ್ಕಿರುವಷ್ಟು ಕೊಂಬೆಗಳು ಸೈಪ್ರಸ್ ಮರಗಳಿಗೂ ಇಲ್ಲ. ದೇವರ ತೋಟದಲ್ಲಿದ್ದ ಯಾವ ಮರವಾದರೂ ಇದರಷ್ಟು ಅಂದವಾಗಿರಲಿಲ್ಲ.


“ಈಗ ಆ ನೀರಿನ ಬಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನ್ನು ಮುಟ್ಟಲು ಪ್ರಯತ್ನಿಸುವದಿಲ್ಲ. ಚೆನ್ನಾಗಿ ಬೆಳೆದ ಮರಗಳು ಆ ನೀರನ್ನು ಕುಡಿದು ತಾನು ಉದ್ದವಾಗಿ ಬೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನ್ನು ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನ್ನು ಸೇರುವವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು