Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:32 - ಪರಿಶುದ್ದ ಬೈಬಲ್‌

32 “ಫರೋಹನು ತನ್ನ ಕಾಲದಲ್ಲಿ ಜನರನ್ನು ಭಯಗೊಳಿಸಿದ್ದನು. ಈಗಲಾದರೋ, ಫರೋಹನೂ ಅವನ ಸೈನಿಕರೂ ಪರದೇಶದವರೊಂದಿಗೆ ಮತ್ತು ಯುದ್ಧದಲ್ಲಿ ಹತರಾದವರೊಂದಿಗೆ ಬಿದ್ದುಕೊಳ್ಳುವರು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಮತ್ತು ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗದಿಂದ ಹತರಾದವರ ನಡುವೆ ಮಲಗುವರು” ಎಂಬುದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 “ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ ಖಡ್ಗಹತರ ನಡುವೆ ಸೇರಿಹೋಗುವರು,” ಎಂಬುದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗಹತರ ನಡುವೆ, ಒರಗಿಹೋಗುವರು ಎಂಬದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಏಕೆಂದರೆ ನಾನು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದೇ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಖಡ್ಗದಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ನಡುವೆ ಸೇರಿಹೋಗುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:32
13 ತಿಳಿವುಗಳ ಹೋಲಿಕೆ  

ಈಗ ಅವರು ಬಹಳ ಕಾಲದ ಹಿಂದೆ ಸತ್ತ ವೀರರೊಂದಿಗೆ ಬಿದ್ದುಕೊಂಡಿದ್ದಾರೆ. ಅವರು ತಮ್ಮ ಆಯುಧಗಳೊಂದಿಗೆ ಹೂಣಿಡಲ್ಪಟ್ಟರು. ಅವರ ತಲೆಯ ಕೆಳಗೆ ಅವರ ಕತ್ತಿಯು ಇಡಲ್ಪಟ್ಟಿತ್ತು. ಆದರೆ ಅವರ ಪಾಪವು ಅವರ ಎಲುಬುಗಳಲ್ಲಿವೆ. ಯಾಕೆಂದರೆ ಅವರು ಜೀವಿಸಿದ್ದಾಗ ಜನರನ್ನು ಭಯಪಡಿಸಿದರು.


“ಪ್ರಭುವು ತನ್ನ ಜನರಿಗೆ ನ್ಯಾಯತೀರ್ಪು ನೀಡುತ್ತಾನೆ” ಎಂದು ಸಹ ದೇವರು ಹೇಳಿದ್ದಾನೆ. ಜೀವಸ್ವರೂಪನಾದ ದೇವರ ಹಿಡಿತಕ್ಕೆ ಸಿಕ್ಕಿ ಬೀಳುವುದು ಪಾಪಿಗೆ ಭಯಂಕರವಾಗಿದೆ.


ಪ್ರಭುವಿನ ಭಯ ಎಂದರೇನೆಂಬುದು ನಮಗೆ ತಿಳಿದಿದೆ. ಆದ್ದರಿಂದ ಸತ್ಯವನ್ನು ಸ್ವೀಕರಿಸಿಕೊಳ್ಳುವಂತೆ ಜನರಿಗೆ ಸಹಾಯ ಮಾಡಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲನು. ನೀವು ಸಹ ನಿಮ್ಮ ಹೃದಯಗಳಲ್ಲಿ ನಮ್ಮನ್ನು ತಿಳಿದುಕೊಂಡಿದ್ದೀರೆಂದು ನಂಬುತ್ತೇವೆ.


ನಾನು ಆ ಕೆಟ್ಟಕಾರ್ಯಗಳಲ್ಲಿ ಯಾವುದನ್ನೂ ಮಾಡಲಿಲ್ಲ. ಯಾಕೆಂದರೆ ನಾನು ದೇವರ ಶಿಕ್ಷೆಗೆ ಹೆದರಿಕೊಂಡಿದ್ದೆ. ಆತನ ವೈಭವದ ಎದುರಿನಲ್ಲಿ ನಿಂತುಕೊಳ್ಳಲು ನನಗಾಗಲಿಲ್ಲ.


ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ.


“ಪಾತಾಳಕ್ಕೆ ಸೇರಿದ ಜನರನ್ನು ಫರೋಹನು ನೋಡುವನು. ಅವನೂ ಅವನೊಂದಿಗಿರುವ ಜನರೂ ಸಮಾಧಾನ ಹೊಂದುವರು. ಹೌದು, ಫರೋಹನೂ ಅವನ ಎಲ್ಲಾ ಸೈನಿಕರೂ ಯುದ್ಧದಲ್ಲಿ ಸಾಯುವರು.” ಇದು ಒಡೆಯನಾದ ಯೆಹೋವನ ನುಡಿ.


ಯೆಹೋವನ ಸಂದೇಶವು ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,


ಸೆರೆ ಒಯ್ಯಲ್ಪಟ್ಟ ಹತ್ತನೇ ವರ್ಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿವಸದಲ್ಲಿ ನನ್ನ ಒಡೆಯನಾದ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,


ತಿರುಗಿ ಯೆಹೋವನ ಸಂದೇಶ ನನಗೆ ಬಂತು, ಆತನು ಹೇಳಿದ್ದೇನೆಂದರೆ:


ಸೆರೆಹಿಡಿದ ಹನ್ನೊಂದನೇ ವರ್ಷದ ಮೂರನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು