Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:10 - ಪರಿಶುದ್ದ ಬೈಬಲ್‌

10 “ಆದ್ದರಿಂದ ನರಪುತ್ರನೇ, ನನ್ನ ಪರವಾಗಿ ಇಸ್ರೇಲ್ ಜನರೊಂದಿಗೆ ಮಾತನಾಡು. ‘ನಾವು ಪಾಪಮಾಡಿದ್ದೇವೆ. ಕಟ್ಟಳೆಗಳನ್ನು ಮೀರಿದ್ದೇವೆ. ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ. ನಾವು ಆ ಪಾಪಗಳಿಂದಾಗಿ ಕ್ಷೀಣಿಸುತ್ತಿದ್ದೇವೆ. ನಾವು ಜೀವಿಸಬೇಕಾದರೆ ಏನು ಮಾಡಬೇಕು?’ ಎಂದು ಅವರು ಕೇಳಿಯಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರ ನಮ್ಮ ಮೇಲೆ ಬಿದ್ದಿವೆ; ಅವುಗಳಿಂದ ಕ್ಷೀಣವಾಗಿಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು: ‘ನೀವು ಹೇಳುತ್ತಿರುವುದು ಇದನ್ನೇ: “ನಮ್ಮ ಅಪರಾಧಗಳೂ ನಮ್ಮ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲೇ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು ಎಂದು ಹೇಳುವಿರಲ್ಲಾ?” ’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:10
12 ತಿಳಿವುಗಳ ಹೋಲಿಕೆ  

ಆಗ ಒಡೆಯನಾದ ಯೆಹೋವನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಈ ಎಲುಬುಗಳು ಇಸ್ರೇಲ್ ಜನಾಂಗ. ‘ನಮ್ಮ ಎಲುಬುಗಳು ಒಣಗಿಹೋಗಿವೆ. ನಮ್ಮ ನಿರೀಕ್ಷೆಯು ಮುಗಿದುಹೋಯಿತು. ನಾವು ಸಂಪೂರ್ಣವಾಗಿ ನಾಶವಾಗಿ ಹೋಗಿದ್ದೇವೆ’ ಎಂದು ಇಸ್ರೇಲರು ಹೇಳುತ್ತಾರೆ.


ನೀವು ನಿಮ್ಮ ಮುಂಡಾಸವನ್ನು ಧರಿಸಿಕೊಂಡು ಕಾಲಿಗೆ ಕೆರವನ್ನು ಹಾಕಿಕೊಳ್ಳುವಿರಿ. ನೀವು ನಿಮ್ಮ ದುಃಖವನ್ನು ತೋರಿಸಿಕೊಳ್ಳುವುದಿಲ್ಲ. ನೀವು ಅಳುವದೂ ಇಲ್ಲ. ಆದರೆ ನೀವು ನಿಮ್ಮ ಪಾಪಗಳ ದೆಸೆಯಿಂದ ಕೃಶರಾಗುವಿರಿ. ನೀವು ಒಬ್ಬರಿಗೊಬ್ಬರು ದುಃಖದ ಶಬ್ದಗಳನ್ನು ಮಾಡುವಿರಿ.


ಆದರೆ ಈಗ ಚೀಯೋನ್ ಹೇಳುವುದೇನೆಂದರೆ, “ಯೆಹೋವನು ನನ್ನನ್ನು ಬಿಟ್ಟುಹೋಗಿದ್ದಾನೆ. ನನ್ನ ಒಡೆಯನು ನನ್ನನ್ನು ತೊರೆದಿದ್ದಾನೆ.”


ಯಾಕೆಂದರೆ ಎಲ್ಲರಿಗೆ ಸಾಕಾಗುವಷ್ಟು ಆಹಾರಸಾಮಾಗ್ರಿಯಾಗಲಿ ನೀರಾಗಲಿ ಇರುವದಿಲ್ಲ. ಅವರು ಒಬ್ಬರನ್ನೊಬ್ಬರು ಕಂಡು ಗಾಬರಿಗೊಳ್ಳುವರು. ತಮ್ಮ ಪಾಪಗಳ ನಿಮಿತ್ತವಾಗಿ ಅವರು ಬಡಕಲಾಗಿಯೂ ಹಸಿವೆಯಿಂದಲೂ ಇರುವರು.


ಆದ್ದರಿಂದ ನಿಮ್ಮಲ್ಲಿ ಜೀವಂತವಾಗಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷಯಿಸಿಹೋಗುವರು.


ಯೆಹೂದವೇ, ವಿಗ್ರಹಗಳ ಬೆನ್ನುಹತ್ತಿ ಹೋಗುವದನ್ನು ನಿಲ್ಲಿಸು! ಆ ಅನ್ಯದೇವರುಗಳ ಬಗ್ಗೆ ನಿನ್ನಲ್ಲಿರುವ ಬಯಕೆಯನ್ನು ತೊರೆದುಬಿಡು. ಆದರೆ ನೀನು ‘ಹಾಗೆ ಮಾಡಿದರೆ ಪ್ರಯೋಜನವೇನು? ನಾನು ಅವುಗಳನ್ನು ಬಿಡಲಾರೆ. ನಾನು ಆ ಅನ್ಯದೇವರುಗಳನ್ನು ಪ್ರೀತಿಸುತ್ತೇನೆ. ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ಹೇಳುವೆ.


ನಿನ್ನ ಜನರು ಬಲಹೀನರಾದರು. ಅವರು ನೆಲದ ಮೇಲೆ ಬಿದ್ದು ಅಲ್ಲಿಯೇ ಮಲಗಿದರು. ಆ ಜನರು ರಸ್ತೆಯ ಮೂಲೆಮೂಲೆಗಳಲ್ಲಿ ಬಿದ್ದುಕೊಂಡಿರುತ್ತಾರೆ. ಅವರು ಬಲೆಯೊಳಗೆ ಸಿಕ್ಕಿಬಿದ್ದ ಜಿಂಕೆಯಂತಿರುವರು. ಯೆಹೋವನ ಕೋಪದಿಂದ ಇನ್ನೂ ಹೆಚ್ಚಿನ ಶಿಕ್ಷೆಯನ್ನು, ತಾಳಲಾರದಷ್ಟು ಶಿಕ್ಷೆಯನ್ನು ಅನುಭವಿಸಿದರು. ದೇವರು ಇನ್ನೂ ಹೆಚ್ಚಾಗಿ ಶಿಕ್ಷೆಕೊಡುವುದಾಗಿ ಹೇಳಿದಾಗ ಅವರು ಕಂಗಾಲಾದರು.


ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು.


ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆ. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆ. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!


ಯೆಹೋವನು ಹೇಳುವುದೇನೆಂದರೆ, ‘ನಾನು ಈ ಸ್ಥಳಕ್ಕೂ ಇಲ್ಲಿ ವಾಸಿಸುವವರಿಗೂ ಸಂಕಟವನ್ನು ಬರಮಾಡುವೆನು. ಯೆಹೂದ ದೇಶದ ಅರಸನ ಮುಂದೆ ಓದಿದಂಥ ಪುಸ್ತಕದಲ್ಲಿ ಬರೆಯಿಸಿದ ಎಲ್ಲಾ ಶಾಪಗಳನ್ನು ನಾನು ಬರಮಾಡುವೆನು.


“ಇಸ್ರೇಲಿನ ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ನಮ್ಮ ಜನಾಂಗದ ಕೆಲವರನ್ನಾದರೂ ಉಳಿದುಕೊಳ್ಳುವಂತೆ ಮಾಡಿರುವೆ. ಹೌದು, ನಾವು ಪಾಪಿಗಳು. ನಮ್ಮ ಅಪರಾಧಗಳ ದೆಸೆಯಿಂದ ಯಾರೂ ನಿನ್ನ ಮುಂದೆ ನಿಲ್ಲಲು ಸಾಧ್ಯವಿಲ್ಲ.”


“‘ತಂದೆಯ ಪಾಪಗಳಿಗಿರುವ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳದಿರುವದೇಕೆ?’ ಎಂದು ನೀವು ಕೇಳಬಹುದು. ಮಗನು ನ್ಯಾಯವಾದುದ್ದನ್ನು ಮತ್ತು ಸರಿಯಾದುದ್ದನ್ನು ಮಾಡಿದ್ದಾನೆ. ಅವನು ಎಚ್ಚರಿಕೆಯಿಂದ ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾಗಿದ್ದನು. ಆದ್ದರಿಂದ ಅವನು ಬಾಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು