Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:29 - ಪರಿಶುದ್ದ ಬೈಬಲ್‌

29 ಅವರು ಅನೇಕ ಭಯಂಕರ ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ಅವರ ರಾಜ್ಯವನ್ನು ಬಂಜರು ಭೂಮಿಯನ್ನಾಗಿ ಮಾಡುವೆನು. ಆಗ ಈ ಜನರು ನಾನು ಯೆಹೋವನೆಂದು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅವರು ನಡೆಸಿದ ಬಹುದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಪಾಳು ಮಾಡಿದಾಗ ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವರು ನಡಿಸಿದ ಬಹುದುರಾಚಾರಗಳ ನಿವಿುತ್ತ ನಾನು ದೇಶವನ್ನು ಹಾಳುಪಾಳುಮಾಡಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:29
26 ತಿಳಿವುಗಳ ಹೋಲಿಕೆ  

ಜನರು ನಿಮ್ಮ ಮಧ್ಯದಲ್ಲಿ ಕೊಲ್ಲಲ್ಪಟ್ಟು ಬೀಳುವರು. ಆಗ ನೀನು, ನಾನು ಯೆಹೋವನೆಂದು ತಿಳಿಯುವಿ.’”


ಹೀಗೆ ನಾನು ಮೋವಾಬನ್ನು ಶಿಕ್ಷಿಸುವೆನು. ಆಗ ನಾನೇ ಯೆಹೋವನೆಂದು ಅವರು ತಿಳಿಯುವರು.”


ನಿನ್ನ ನಾಚಿಕೆಕರವಾದ ಕಾರ್ಯಗಳಿಗಾಗಿ ಅವರು ನಿನ್ನನ್ನು ಶಿಕ್ಷಿಸುವರು. ನೀನು ಅಸಹ್ಯವಾದ ವಿಗ್ರಹಗಳನ್ನು ಪೂಜೆಮಾಡಿದ್ದಕ್ಕೆ ಶಿಕ್ಷಿಸಲ್ಪಡುವಿ. ಆಗ ನಾನೇ ಒಡೆಯನೂ ಯೆಹೋವನೂ ಎಂದು ನೀನು ತಿಳಿಯುವಿ.”


ಸತ್ತುಹೋದ ಜನರಿಗಾಗಿ ನಿಮ್ಮ ರಾಜನು ಗೋಳಾಡುವನು; ನಾಯಕನಿಗೆ ನಿರೀಕ್ಷೆಯು ಇಲ್ಲವಾಗುವುದು. ಸಾಮಾನ್ಯ ಜನರು ಭಯಗ್ರಸ್ತರಾಗುವರು. ಯಾಕೆಂದರೆ ನಾನು ಅವರ ನಡತೆಗೆ ತಕ್ಕಂತೆ ಅವರಿಗೆ ಮಾಡುವೆನು; ಅವರು ಬೇರೆಯವರಿಗೆ ನ್ಯಾಯ ತೀರಿಸಿದಂತೆ ನಾನು ಅವರಿಗೆ ನ್ಯಾಯತೀರಿಸುವೆನು. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”


ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು: “ಚಪ್ಪಾಳೆ ತಟ್ಟು, ನಿನ್ನ ಕಾಲುಗಳನ್ನು ನೆಲಕ್ಕೆ ಒದ್ದು, ‘ಅಯ್ಯೋ, ಬೇಡ!’ ಎಂದು ಹೇಳು. ಯಾಕೆಂದರೆ ಇಸ್ರೇಲ್ ಜನರು ಎಲ್ಲಾ ಅಸಹ್ಯಕರವಾದ ಮತ್ತು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಅವರು ಯುದ್ಧದಿಂದಲೂ ಕ್ಷಾಮದಿಂದಲೂ ಭಯಂಕರವಾದ ಕಾಯಿಲೆಗಳಿಂದಲೂ ಸಾಯುವರು.


ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು.


ಆಗ ನಾನೇ ಯೆಹೋವನೆಂದು ಈಜಿಪ್ಟಿಗೆ ತಿಳಿಯುವುದು. ನಾನು ಫರೋಹನನ್ನೂ ಅವನ ರಾಹುತರನ್ನೂ ರಥಗಳನ್ನೂ ಸೋಲಿಸಿದಾಗ ಅವರು ನನ್ನನ್ನು ಸನ್ಮಾನಿಸುವರು” ಎಂದು ಹೇಳಿದನು.


ಆದ್ದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು. ಜನರು ಇಲ್ಲಿಂದ ಹಾದುಹೋಗುವಾಗಲೆಲ್ಲಾ ಸಿಳ್ಳುಹಾಕಿ ತಲೆಯಾಡಿಸುವರು. ದೇಶವು ಹಾಳಾದುದನ್ನು ನೋಡಿ ಬೆರಗಾಗುವರು.


ನಾನು ಈ ದೇಶವನ್ನು ಬರಿದಾಗಿಯೂ ಬಂಜರು ಭೂಮಿಯನ್ನಾಗಿಯೂ ಮಾಡುವೆನು. ಈ ದೇಶವು ಹೆಮ್ಮೆಪಟ್ಟುಕೊಳ್ಳುತ್ತಿದ್ದ ವಿಷಯಗಳನ್ನೆಲ್ಲಾ ಅವರು ಕಳೆದುಕೊಳ್ಳುವರು. ಇಸ್ರೇಲಿನ ಪರ್ವತಗಳು ಬೋಳುಗುಡ್ಡಗಳಾಗುವವು. ಯಾರೂ ಅದನ್ನು ದಾಟಿ ಹೋಗಲಾರರು.


“‘ನರಪುತ್ರನೇ, ನಿನ್ನ ವಿಷಯದಲ್ಲಿ ನಿನ್ನ ಜನರು ಗೋಡೆಗೆ ಒರಗಿಕೊಂಡೂ ಬಾಗಿಲಿನ ನಡುವೆ ನಿಂತುಕೊಂಡೂ ಮಾತನಾಡಿಕೊಳ್ಳುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು, “ಬನ್ನಿ, ಯೆಹೋವನು ಹೇಳುವುದನ್ನು ನಾವು ಹೋಗಿ ಕೇಳೋಣ”


ಆದರೆ ನೀನು ಹಾಡುವ ವಿಷಯಗಳು ಸಂಭವಿಸುವವು. ಆಗ ಜನರೂ, “ನಿಜವಾಗಿಯೂ ನಮ್ಮ ಮಧ್ಯೆ ಒಬ್ಬ ಪ್ರವಾದಿಯು ವಾಸಿಸಿದನಲ್ಲಾ?” ಎಂದು ಅನ್ನುವರು.’”


ನಿಮ್ಮ ಎಲ್ಲಾ ಅಸಹ್ಯಕೃತ್ಯಗಳ ದೆಸೆಯಿಂದ ನಾನು ಹಿಂದೆಂದೂ ಮಾಡಿಲ್ಲದ, ಮುಂದೆಂದೂ ಮಾಡದ ಸಂಗತಿಗಳನ್ನು ನಿಮಗೆ ಬರಮಾಡುವೆನು.


ನಿನಗೆ ನಾನು ಇನ್ನು ಕರುಣೆಯನ್ನು ತೋರಿಸೆನು. ನಿನ್ನ ವಿಷಯದಲ್ಲಿ ನಾನು ದುಃಖಿಸುವದಿಲ್ಲ. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನಿನ್ನನ್ನು ಶಿಕ್ಷಿಸುವೆನು. ನೀನು ಅಂಥಾ ಭಯಂಕರ ಕೃತ್ಯಗಳನ್ನು ಮಾಡಿದ್ದೀ. ಈಗ ನಾನೇ ಯೆಹೋವನೆಂದು ನೀನು ತಿಳಿಯುವಿ.”


“ನಾನು ಅವರನ್ನು ದಂಡಿಸುವೆನು. ಅವರು ಒಂದು ಬೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಬೆಂಕಿಯಿಂದ ಸುಟ್ಟುಹೋಗುವರು. ನಾನು ಅವರನ್ನು ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.


ಜನರು ನನ್ನನ್ನು ತೊರೆದು ಅನ್ಯ ದೇವರುಗಳನ್ನು ಆರಾಧಿಸಿದ್ದಕ್ಕಾಗಿ ನಾನು ಆ ದೇಶವನ್ನು ನಾಶಮಾಡುವೆನು” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು