Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:30 - ಪರಿಶುದ್ದ ಬೈಬಲ್‌

30 “‘ನರಪುತ್ರನೇ, ನಿನ್ನ ವಿಷಯದಲ್ಲಿ ನಿನ್ನ ಜನರು ಗೋಡೆಗೆ ಒರಗಿಕೊಂಡೂ ಬಾಗಿಲಿನ ನಡುವೆ ನಿಂತುಕೊಂಡೂ ಮಾತನಾಡಿಕೊಳ್ಳುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು, “ಬನ್ನಿ, ಯೆಹೋವನು ಹೇಳುವುದನ್ನು ನಾವು ಹೋಗಿ ಕೇಳೋಣ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನರಪುತ್ರನೇ, “ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, ‘ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿನ್ನ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಸರ್ವೇಶ್ವರನ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು - ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ ಎಂದು ಹೇಳಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಮನುಷ್ಯಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿಜ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಯೆಹೋವ ದೇವರ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:30
13 ತಿಳಿವುಗಳ ಹೋಲಿಕೆ  

‘ಇವರು ನನ್ನನ್ನು ಮಾತಿನಿಂದ ಗೌರವಿಸುತ್ತಾರೆ. ಇವರ ಮನಸ್ಸಾದರೋ ನನಗೆ ದೂರವಾಗಿದೆ.


ನೀವು ಪರಸ್ಪರ ‘ಯೆಹೋವನ ಉತ್ತರವೇನು?’ ಅಥವಾ ‘ಯೆಹೋವನು ಏನು ಹೇಳಿದನು?’ ಎಂದು ಮಾತನಾಡಬೇಕು.


ಆಗ ಅವರು ದಿನನಿತ್ಯ ನನ್ನನ್ನು ಆರಾಧಿಸಲು ಬರುವರು. ಜನರು ನನ್ನ ವಿಧಿಗಳನ್ನು ಕಲಿತುಕೊಳ್ಳಲು ಇಷ್ಟಪಡುವರು. ಆಗ ಅವರು ಸರಿಯಾಗಿ ಜೀವಿಸುವ ಜನಾಂಗವಾಗುವರು. ಅವರು ದೇವರ ಒಳ್ಳೆಯ ಆಜ್ಞೆಗಳನ್ನು ಬಿಡದೆ ಅನುಸರಿಸುವರು. ಅವರು ಪಕ್ಷಪಾತವಿಲ್ಲದೆ ನ್ಯಾಯತೀರಿಸಲು ನನ್ನನ್ನು ಕೇಳುವರು. ದೇವರ ನಿರ್ಧಾರವನ್ನು ಕೇಳಲು ಆತನ ಬಳಿಗೆ ಹೋಗಲು ಇಚ್ಛಿಸುವರು.


ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.


ನೀವು ನಿಮಗೆ ಮರಣವನ್ನು ಬರಮಾಡುವ ತಪ್ಪನ್ನು ಮಾಡುತ್ತಿದ್ದೀರಿ. ನೀವು ನನ್ನನ್ನು ನಿಮ್ಮ ದೇವರಾದ ಯೆಹೋವನಲ್ಲಿಗೆ ಕಳುಹಿಸಿದಿರಿ. ‘ನಮಗಾಗಿ ಯೆಹೋವನಾದ ನಮ್ಮ ದೇವರನ್ನು ಪ್ರಾರ್ಥಿಸು. ದೇವರು ಮಾಡಬೇಕೆಂದು ಹೇಳಿದ್ದೆಲ್ಲವನ್ನು ನಮಗೆ ಹೇಳು, ನಾವು ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ’ ಎಂದು ನೀವು ಹೇಳಿದ್ದಿರಿ.


ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”


“ನರಪುತ್ರನೇ, ಈ ಜನರು ತಮ್ಮ ವಿಗ್ರಹಗಳಿಗೆ ಪ್ರತಿಷ್ಠಿತರಾಗಿದ್ದಾರೆ ಮತ್ತು ಪಾಪಕ್ಕೆ ಬೀಳಲು ತಮಗೆ ತಾವೇ ಅವಕಾಶಮಾಡಿಕೊಡುತ್ತಾರೆ. ಸಹಾಯಕ್ಕಾಗಿ ನನ್ನನ್ನು ಕೇಳಿಕೊಳ್ಳಲು ಅವರಿಗೆ ಅವಕಾಶ ಕೊಡಬೇಕೇ? ಇಲ್ಲ.


“ನರಪುತ್ರನೇ, ಇಸ್ರೇಲಿನ ಹಿರಿಯರೊಂದಿಗೆ ಮಾತಾಡಿ ಅವರಿಗೆ, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನೀವು ನನ್ನ ಬುದ್ಧಿವಾದವನ್ನು ಕೇಳಲು ಬಂದಿರುವಿರಾ? ನನ್ನ ಜೀವದಾಣೆ, ನನ್ನ ಬುದ್ಧಿವಾದವನ್ನು ನಿಮಗೆ ಹೇಳುವದಿಲ್ಲವೆಂದು ನಾನು ಪ್ರಮಾಣಮಾಡುತ್ತೇನೆ. ನನ್ನ ಒಡೆಯನಾದ ಯೆಹೋವನ ವಾಕ್ಯವಿದು.’


ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.


ಅವರು ಅನೇಕ ಭಯಂಕರ ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ಅವರ ರಾಜ್ಯವನ್ನು ಬಂಜರು ಭೂಮಿಯನ್ನಾಗಿ ಮಾಡುವೆನು. ಆಗ ಈ ಜನರು ನಾನು ಯೆಹೋವನೆಂದು ತಿಳಿದುಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು