Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:33 - ಪರಿಶುದ್ದ ಬೈಬಲ್‌

33 ಆದರೆ ನೀನು ಹಾಡುವ ವಿಷಯಗಳು ಸಂಭವಿಸುವವು. ಆಗ ಜನರೂ, “ನಿಜವಾಗಿಯೂ ನಮ್ಮ ಮಧ್ಯೆ ಒಬ್ಬ ಪ್ರವಾದಿಯು ವಾಸಿಸಿದನಲ್ಲಾ?” ಎಂದು ಅನ್ನುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನೀನು ಮುಂತಿಳಿಸಿದ್ದು ಸಂಭವಿಸುವಾಗ, ತಮ್ಮ ಮಧ್ಯದಲ್ಲಿ ಪ್ರವಾದಿಯು ಇದ್ದಾನೆ ಎಂದು ಅವರಿಗೆ ತಿಳಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನೀನು ಮುಂತಿಳಿಸಿದ್ದು ಸಂಭವಿಸುವಾಗ ಅದು ಈಗ ಸಂಭವಿಸಲಿದೆ, ತಮ್ಮ ಮಧ್ಯೆ ಇದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನೀನು ಮುಂತಿಳಿಸಿದ್ದು ಸಂಭವಿಸುವಾಗ [ಆಹಾ, ಸಂಭವಿಸಿತು] ತಮ್ಮ ಮಧ್ಯದಲ್ಲಿದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:33
9 ತಿಳಿವುಗಳ ಹೋಲಿಕೆ  

ಜನರು ನಿನ್ನ ಮಾತನ್ನು ಕೇಳಬಹುದು ಅಥವಾ ಕೇಳದಿರಬಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನ್ನ ಮುಂದೆ ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನ್ನ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನ್ನೆ ನೀನು ಹೇಳಬೇಕು. ಆಗ ಅವರು ತಮ್ಮ ಮಧ್ಯೆ ಒಬ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು.


ಆದರೆ ನಾವು ನೆಮ್ಮದಿಯಿಂದ ಇರುವೆವು ಎಂದು ಪ್ರವಾದಿಸುವ ಪ್ರವಾದಿಯು ನಿಜವಾಗಿಯೂ ಯೆಹೋವನಿಂದ ಕಳುಹಿಸಲ್ಪಟ್ಟಿರುವನೇ ಎಂಬುದನ್ನು ನಾವು ಪರೀಕ್ಷಿಸಬೇಕು. ಆ ಪ್ರವಾದಿಯ ಸಂದೇಶವು ಸತ್ಯವಾಗಿ ಪರಿಣಮಿಸಿದರೆ ಅವನು ನಿಜವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವನೆಂದು ಜನರು ತಿಳಿದುಕೊಳ್ಳಬಹುದು.”


‘ನಮ್ಮ ಕಾಲುಗಳಿಗೆ ಹತ್ತಿದ ನಿಮ್ಮ ಊರಿನ ಧೂಳನ್ನು ನಿಮಗೆ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ದೇವರ ರಾಜ್ಯ ಸಮೀಪಿಸುತ್ತಿದೆ ಎಂಬುದು ನಿಮಗೆ ತಿಳಿದಿರಲಿ’ ಎಂದು ಹೇಳಿರಿ.


ಅವರು ಅನೇಕ ಭಯಂಕರ ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ಅವರ ರಾಜ್ಯವನ್ನು ಬಂಜರು ಭೂಮಿಯನ್ನಾಗಿ ಮಾಡುವೆನು. ಆಗ ಈ ಜನರು ನಾನು ಯೆಹೋವನೆಂದು ತಿಳಿದುಕೊಳ್ಳುವರು.”


ಇಸ್ರೇಲಿನ ರಾಜನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದು ದೇವಮನುಷ್ಯನಾದ ಎಲೀಷನಿಗೆ ತಿಳಿಯಿತು. ಎಲೀಷನು ರಾಜನಿಗೆ ಈ ಸಂದೇಶವನ್ನು ಕಳುಹಿಸಿದನು: “ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡಿದ್ದು ಏಕೆ? ನಾಮಾನನು ನನ್ನ ಬಳಿಗೆ ಬರಲಿ. ಇಸ್ರೇಲಿನಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ತಿಳಿಯುತ್ತದೆ!”


ಯೆಹೋವನ ಸಂದೇಶ ನನಗೆ ಬಂತು. ಆತನು ಹೇಳಿದ್ದೇನೆಂದರೆ,


“‘ಆ ಸಮಯದಲ್ಲಿ, ನಾನು ಸಂದೇಶವಾಹಕರನ್ನು ಕಳುಹಿಸುವೆನು. ಅವರು ಇಥಿಯೋಪ್ಯಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿ ಕೆಟ್ಟ ಸುದ್ದಿಯನ್ನು ಒಯ್ಯುವರು. ಇಥಿಯೋಪ್ಯ ಈಗ ಸುರಕ್ಷಿತವಾಗಿರುವುದು. ಆದರೆ ಈಜಿಪ್ಟ್ ಶಿಕ್ಷಿಸಲ್ಪಟ್ಟಾಗ ಇಥಿಯೋಪ್ಯದ ಜನರು ಭಯದಿಂದ ನಡುಗುವರು. ಆ ಸಮಯವು ಬರುವದು.’”


ಅದು ಸಂಭವಿಸುವ ಸಮಯವು ಹತ್ತಿರ ಬಂದಿತು.” ಇದು ಯೆಹೋವನ ನುಡಿ. “ಆ ದಿವಸದ ವಿಷಯವಾಗಿ ನಾನು ಮಾತನಾಡುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು