Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:11 - ಪರಿಶುದ್ದ ಬೈಬಲ್‌

11 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಅವರಿಗೆ ಕುರುಬನಾಗಿರುವೆನು. ತಪ್ಪಿಹೋದ ಕುರಿಗಳನ್ನು ನಾನು ಹುಡುಕುವೆನು, ನಾನು ಅವರನ್ನು ಗಮನಿಸುತ್ತಾ ನಡೆಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ ನನ್ನ ಕುರಿಗಳನ್ನು ಹುಡುಕಿ ಅವುಗಳನ್ನು ಮೇಯಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:11
24 ತಿಳಿವುಗಳ ಹೋಲಿಕೆ  

ನನಗೆ ಬೇರೆ ಕುರಿಗಳು ಸಹ ಇವೆ. ಅವುಗಳು ಇಲ್ಲಿರುವ ಈ ಮಂದೆಯಲ್ಲಿಲ್ಲ. ನಾನು ಅವುಗಳನ್ನು ಸಹ ಒಳಗೆ ನಡೆಸಬೇಕು. ಅವುಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಮುಂದಿನ ಕಾಲದಲ್ಲಿ ಒಂದೇ ಮಂದೆಯಿರುವುದು ಮತ್ತು ಒಬ್ಬನೇ ಕುರುಬನಿರುವನು.


ಮನುಷ್ಯಕುಮಾರನು ಬಂದದ್ದು ತಪ್ಪಿಹೋದ ಜನರನ್ನು ಹುಡುಕಿ ರಕ್ಷಿಸುವುದಕ್ಕಾಗಿಯಷ್ಟೇ” ಎಂದು ಹೇಳಿದನು.


ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.


“ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು.


ಇದು ನನ್ನ ಒಡೆಯನಾದ ಯೆಹೋವನ ಮಾತುಗಳು. ಇಸ್ರೇಲ್ ಜನರು ತಮ್ಮ ದೇಶದಿಂದ ಹೊರಗೆ ಹಾಕಲ್ಪಟ್ಟರು. ಆದರೆ ಯೆಹೋವನು ಅವರನ್ನು ಮತ್ತೆ ಬರಮಾಡುತ್ತಾನೆ. ಆತನು, “ಈ ಜನರನ್ನು ನಾನು ಮತ್ತೆ ಒಟ್ಟುಗೂಡಿಸುತ್ತೇನೆ” ಎಂದು ಹೇಳುತ್ತಾನೆ.


ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.


ಭೂಮಿಯನ್ನು ನಿರ್ಮಿಸಿದವನೂ ಅದರಲ್ಲಿ ವಾಸಿಸುವ ಎಲ್ಲಾ ಜನರನ್ನು ಉಂಟುಮಾಡಿದವನೂ ನಾನೇ. ನನ್ನ ಸ್ವಹಸ್ತದಿಂದ ಆಕಾಶಮಂಡಲವನ್ನು ನಿರ್ಮಿಸಿದ್ದೇನೆ. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಪುಂಜಗಳನ್ನು ನನ್ನ ಹತೋಟಿಯಲ್ಲಿಟ್ಟಿದ್ದೇನೆ.


ನಾನು ಕಳೆದುಹೋದ ಕುರಿಯಂತೆ ಅಲೆದಾಡುತ್ತಿದ್ದೇನೆ. ನನಗೋಸ್ಕರ ಹುಡುಕುತ್ತಾ ಬಾ. ನಿನ್ನ ಸೇವಕನಾದ ನಾನು ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿಲ್ಲ.


“‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.


ಯಾಕೆಂದರೆ ನಾನು ಎಫ್ರಾಯೀಮನಿಗೆ ಸಿಂಹದಂತಿರುವೆನು. ಯೆಹೂದ ಜನಾಂಗದವರಿಗೆ ನಾನು ಪ್ರಾಯದ ಸಿಂಹದಂತಿರುವೆನು. ಹೌದು, ಯೆಹೋವನಾದ ನಾನು ಅವರನ್ನು ಹರಿದು ಚೂರುಚೂರಾಗಿ ಮಾಡುವೆನು. ನಾನು ಅವರನ್ನು ಎತ್ತಿಕೊಂಡು ಹೋಗುವೆನು. ಯಾರೂ ಅವರನ್ನು ನನ್ನಿಂದ ರಕ್ಷಿಸಲಾರರು.


‘ಇಸ್ರೇಲಿನ ಪರ್ವತಗಳೇ, ನನ್ನ ಒಡೆಯನಾದ ಯೆಹೋವನ ಸಂದೇಶಕ್ಕೆ ಕಿವಿಗೊಡಿರಿ. ಬೆಟ್ಟಗಳಿಗೂ ಪರ್ವತಗಳಿಗೂ ಕೊರಕಲುಗಳಿಗೂ ಕಣಿವೆಗಳಿಗೂ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ನಾನು ವೈರಿಯನ್ನು ನಿಮ್ಮ ವಿರುದ್ಧ ಯುದ್ಧ ಮಾಡಲು ಕಳುಹಿಸುವೆನು. ನಿಮ್ಮ ಎಲ್ಲಾ ಉನ್ನತ ಸ್ಥಳಗಳನ್ನು ನಾಶಮಾಡುವೆನು.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮಗೆ ವಿರೋಧವಾಗಿದ್ದೇನೆ. ಬೇರೆ ಜನರ ಕಣ್ಣೆದುರಿನಲ್ಲಿಯೇ ನಿಮ್ಮನ್ನು ದಂಡಿಸುವೆನು.


ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”


“ನಾನು ಅವನನ್ನು ಕರೆಯುವುದಾಗಿ ಹೇಳಿದ್ದೇನೆ. ನಾನು ಅವನನ್ನು ಕರೆದುತರುವೆನು; ಅವನಿಗೆ ಜಯವನ್ನು ಅನುಗ್ರಹಿಸುವೆನು.


ನಾನು ನಿಜವಾಗಿ ನನ್ನ ಕೋಪವನ್ನು ತೋರಿಸುವೆನು. ಹೌದು, ನಾನೇ ನಿಮ್ಮ ಪಾಪಗಳಿಗಾಗಿ ನಿಮ್ಮನ್ನು ಏಳರಷ್ಟಾಗಿ ದಂಡಿಸುವೆನು.


“ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.


“ನಾನೇ ಒಳ್ಳೆಯ ಕುರುಬ. ಒಳ್ಳೆಯ ಕುರುಬನು ಕುರಿಗಳಿಗಾಗಿ ತನ್ನ ಪ್ರಾಣವನ್ನು ಕೊಡುತ್ತಾನೆ.


ಆದ್ದರಿಂದ ಹೀಗೆ ಹೇಳು: ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿಮ್ಮನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು; ನೀವು ಚದರಿಸಲ್ಪಟ್ಟಿರುವ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸುವೆನು; ಮತ್ತು ನಾನು ನಿಮಗೆ ಇಸ್ರೇಲ್ ದೇಶವನ್ನು ಕೊಡುವೆನು.


ಆಗ ನಿಮ್ಮ ಕಾಣಿಕೆಯ ಸುವಾಸನೆಯಿಂದ ಸಂತೋಷಭರಿತನಾಗುವೆನು. ಇದು ನಿಮ್ಮನ್ನು ಹಿಂದಕ್ಕೆ ನಿಮ್ಮ ದೇಶಕ್ಕೆ ಕರೆತಂದಾಗ ಆಗುವದು. ನಾನು ನಿಮ್ಮನ್ನು ಅನೇಕ ದೇಶಗಳಲ್ಲಿ ಚದರಿಸಿದೆನು. ಆದರೆ ನಾನು ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಮೂಲಕ ನನ್ನ ಪವಿತ್ರತೆಯನ್ನು ಪ್ರದರ್ಶಿಸುವೆನು. ಆ ಎಲ್ಲಾ ದೇಶಗಳವರು ಇದನ್ನು ನೋಡುವರು.


ಆ ಸಮಯಗಳಲ್ಲಿ ದೇವರಾದ ಯೆಹೋವನು, ಕುರುಬನು ತನ್ನ ಕುರಿಗಳನ್ನು ಸಂರಕ್ಷಿಸುವ ರೀತಿಯಲ್ಲಿ ತನ್ನ ಜನರನ್ನು ರಕ್ಷಿಸುವನು. ಅವರು ಆತನಿಗೆ ಅಮೂಲ್ಯರಾಗಿರುವರು. ಆತನ ಕೈಯಲ್ಲಿ ಹೊಳೆಯುವ ಆಭರಣದಂತಿರುವರು.


ಯೆಹೋವನು ಹೇಳುವುದೇನೆಂದರೆ, “ನಾನು ಕುರುಬರ ಮೇಲೆ ಬಹಳವಾಗಿ ಕೋಪಿಸಿರುವೆನು. ಆ ನಾಯಕರನ್ನು ನಾನು ನನ್ನ ಜನರ ಮೇಲೆ ಜವಾಬ್ದಾರರನ್ನಾಗಿ ಮಾಡಿದ್ದೇನೆ.” ಯೆಹೂದದ ಜನರು ದೇವರ ಮಂದೆಯಾಗಿದ್ದಾರೆ. ಹೇಗೆ ಸಿಪಾಯಿಯು ತನ್ನ ಯುದ್ಧದ ಕುದುರೆಯನ್ನು ಪರಾಂಬರಿತ್ತಾನೋ ಹಾಗೆ ಸರ್ವಶಕ್ತನಾದ ಯೆಹೋವನು ತನ್ನ ಮಂದೆಯನ್ನು ನಿಜವಾಗಿಯೂ ಪರಾಂಬರಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು